spot_img
spot_img

ನಟಿ ಶುಭಾ ಪೂಂಜಾಗೂ ಶಾಕ್ : ರೇಣುಕಾಸ್ವಾಮಿ ಕೇಸ್ನಲ್ಲಿ ಹೆಸರು !!!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ರೇಣುಕಾಸ್ವಾಮಿ ಹತ್ಯೆ ಕೇಸ್​ ಬಗ್ಗೆ ಪೊಲೀಸ್​ ಅಧಿಕಾರಿಗಳು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಮರ್ಡರ್ ಕೇಸ್​ ಸಂಬಂಧ ಪೊಲೀಸ್ ಅಧಿಕಾರಿಗಳು ಕೋರ್ಟ್​ಗೆ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದಾರೆ. ದೋಷಾರೂಪನೇ ದರ್ಶನ್ ಅಂಡ್​ ಗ್ಯಾಂಗ್​ನ ಒಂದೊಂದೇ ಕರಾಳ ಮುಖಗಳು ಅನಾವರಣಗೊಳ್ಳುತ್ತಿದೆ.

ದೋಷಾರೂಪ ಪಟ್ಟಿ ದರ್ಶನ್​ ಹಾಗೂ ಪವಿತ್ರ ಗೌಡ ಗ್ಯಾಂಗ್​ ಏನೆಲ್ಲಾ ಪ್ಲಾನ್​ ಮಾಡಿ ಕೊಲೆ ಮಾಡಿದೆ ಎಂಬುವುದರ ಬಗ್ಗೆ ಎಳೆ ಎಳೆಯಾಗಿ ಪೊಲೀಸ್​ರು ಉಲ್ಲೇಖ ಮಾಡಿದ್ದಾರೆ. ಆದರೆ ರೇಣುಕಾಸ್ವಾಮಿ ಪವಿತ್ರಾ ಗೌಡಳಿಗೆ ಕಳುಹಿಸಿದ ಹಾಗೇ ಇಬ್ಬರು ಸ್ಯಾಂಡಲ್​ವುಡ್ ನಟಿಯರಿಗೂ ಅಶ್ಲೀಲ ಮೇಸೇಜ್ ಕಳುಹಿಸಿದ್ದ ಅಂತ ಚಾರ್ಜ್​ಶೀಟ್​ನಲ್ಲಿ ಹೆಸರನ್ನೂ ಕೂಡ ದಾಖಲೆ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿತ್ತು.

ಎ 14 ಆರೋಪಿ ಪ್ರದೋಶ್ ಸ್ವ-ಇಚ್ಚಾ ಹೇಳಿಕೆಯಲ್ಲಿ ಇಬ್ಬರ ನಟಿಯರ ಹೆಸರು ಉಲ್ಲೇಖ ಮಾಡಲಾಗಿದೆ. ಆ ಇಬ್ಬರು ನಟಿಯರಿಗೂ ರೇಣುಕಾಸ್ವಾಮಿ ಅಶ್ಲೀಲ ಮೇಸೆಜ್‌ ಕಳುಹಿಸಿದ್ದನಂತೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಚಾರ್ಜ್​​ಶೀಟ್​ನಲ್ಲಿ ತಿಳಿಸಲಾಗಿದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ಬಳಿಕ ದರ್ಶನ್ ಆತನ ಫೋನ್ ತೆಗೆದು ಪ್ರದೂಶ್​ಗೆ ನೀಡಿದ್ದರು. ಈ ವೇಳೆ ರೇಣುಕಾಸ್ವಾಮಿ ಮೊಬೈಲ್​ ಅನ್ನು ಪ್ರದೂಶ್ ನೋಡಿದ್ದ. ಆ ವೇಳೆ ಸ್ಯಾಂಡಲ್​ವುಡ್​ ನಟಿ ಶುಭಾ ಪೂಂಜಾಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಪ್ರದೂಶ್ ಹೇಳಿಕೆ ನೀಡಿದ್ದಾನೆ ಅಂತಾ ಪೊಲೀಸರು ಉಲ್ಲೇಖ ಮಾಡಿದ್ದಾರೆ.

ಆದರೆ ಇದೇ ವಿಚಾರಕ್ಕೆ ನಟಿ ಶುಭಾ ಪೂಂಜಾ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹೀಗೆ ಬರೆದುಕೊಂಡಿದ್ದಾರೆ. ರೇಣುಕಾಸ್ವಾಮಿಯವರ ಮೇಸೆಜ್ ವಿಚಾರವಾಗಿ ಬೆಳಿಗ್ಗೆಯಿಂದ ನನಗೆ ಕರೆ ಮಾಡಿದ ನನ್ನ ಎಲ್ಲಾ ಆತ್ಮೀಯ ಮಾಧ್ಯಮ ಮಿತ್ರರಿಗೆ ಸ್ಪಷ್ಟಪಡಿಸಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಗೆ ಯಾವುದೇ ಸಂದೇಶಗಳು ಬಂದಿಲ್ಲ ಎಂದಿದ್ದಾರೆ. ಆದರೆ ಈ ಬಗ್ಗೆ ಮತ್ತೊಬ್ಬ ಸ್ಯಾಂಡಲ್​ವುಡ್​ ನಟಿ ಸ್ಪಷ್ಟನೆ ನೀಡಿಲ್ಲ.

WhatsApp Group Join Now
Telegram Group Join Now
Instagram Account Follow Now
spot_img

Related articles

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Samantha News: ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ...

A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

Transfer or Retirement Fix! News ತಿರುಪತಿ ಲಡ್ಡು ಪ್ರಸಾದದ ಅಪವಿತ್ರ ವಿವಾದ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. Laddu ವಿವಾದದ ಬಳಿಕ ತಿರುಮಲ ತಿರುಪತಿ...

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...