ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಅಡಿಯಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣದ ʼಶಕ್ತಿʼ ಯೋಜನೆ ಪರಿಷ್ಕರಣೆ ಆಗುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸುಳಿವು ನೀಡಿದ್ದಾರೆ.
ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಟರ್ಗಳು ಸ್ವೀಕರಿಸುತ್ತಿಲ್ಲವೆಂದು ಹೇಳುತ್ತಿದ್ದಾರೆʼ ಎಂದು ತಿಳಿಸಿದ್ದಾರೆ.
ಅನೇಕರು ನಾವು ಟಿಕೆಟ್ ಹಣ ಕೊಡುವುದಕ್ಕೆ ಸಿದ್ಧವೆಂದು ಪ್ರಾಮಾಣಿಕವಾಗಿ ಅಭಿಪ್ರಾಯ ಹೇಳುತ್ತಿದ್ದಾರೆ. ಹೀಗಾಗಿ ನಾವು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರದಲ್ಲಿ ಎಲ್ಲಾ ಕೂತು ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆʼ ಎಂದು ತಿಳಿಸಿದರು.
ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.
ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ ಮಾನ್ಯ ಮುಖ್ಯಮಂತ್ರಿಗಳು, ನಾನು ಹಾಗೂ ಸಾರಿಗೆ ಸಚಿವರಾದ ಶ್ರೀ ಅವರು ಚಾಲನೆ ನೀಡಿದೆವು.
ರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ ಮೂಲಕ ಹೆಣ್ಣುಮಕ್ಕಳು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಿದೆವು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಟರ್ಗಳು ಸ್ವೀಕರಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಸದ್ಯದಲ್ಲೇ ಈ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇವೆ.
ವೋಲ್ವೋ ಬಸ್ಗಳು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಸೇವೆಯನ್ನು ಒದಗಿಸುತ್ತಾ ಬಂದಿದ್ದು, ಅವಕಾಶ ಸಿಕ್ಕಾಗ ನಮ್ಮ ಸಂಪುಟದ ಸಹೋದ್ಯೋಗಿಗಳೆಲ್ಲಾ ಬಸ್ನಲ್ಲಿ ಒಟ್ಟಿಗೆ ಪ್ರಯಾಣ ಮಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ʼಸದ್ಯದಲ್ಲೇ ಈ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇವೆ. ವೋಲ್ವೋ ಬಸ್ಗಳು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಸೇವೆಯನ್ನು ಒದಗಿಸುತ್ತಾ ಬಂದಿದ್ದು, ಅವಕಾಶ ಸಿಕ್ಕಾಗ ನಮ್ಮ ಸಂಪುಟದ ಸಹೋದ್ಯೋಗಿಗಳೆಲ್ಲಾ ಬಸ್ನಲ್ಲಿ ಒಟ್ಟಿಗೆ ಪ್ರಯಾಣ ಮಾಡುತ್ತೇವೆʼ ಎಂದು ತಿಳಿಸಿದ್ದಾರೆ.