spot_img
spot_img

LONE WOMEN MURDER CASE : ಒಂಟಿ ಮಹಿಳೆಯರ ಕೊಲೆ ಪ್ರಕರಣ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Karwar (Northern Kannada) News:

ಒಂಟಿ ಮಹಿಳೆಯರ ಬಳಿ ಹಣ, ಒಡವೆ ಇರುವುದನ್ನು ಗಮನಿಸಿ ಕೊಲೆಗೈದು ಶವದ ಮುಂದೆ ಅಮಾಯಕರಂತೆ ನಟಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲೆಯ ಸಿದ್ದಾಪುರ ಹಾಗೂ ಜೋಯಿಡಾ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ, ಒಂಟಿ ಮಹಿಳೆಯರ ಕೊಲೆ ಮಾಡಿ ಬಂಗಾರ, ಒಡವೆ ಕದ್ದೊಯ್ದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಎರಡು ಪತ್ಯೇಕ ಮಹಿಳೆಯರ ಕೊಲೆ ಪ್ರಕರಣಗಳಿವು.

Case-1:

ಸಿದ್ದಾಪುರದ ಕೋಲಸಿರ್ಸಿಯಲ್ಲಿ ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ದ ಗೀತಾ ಹುಂಡೇಕರ್ (72) ಎಂಬವರ ಕೊಲೆ ನಡೆದಿತ್ತು. ಪ್ರಕರಣದಲ್ಲಿ ಸಿದ್ದಾಪುರ ತಾಲೂಕಿನ ಕೊಂಡ್ಲಿ ಕೆಳಗಿನಕೇರಿಯ ಅಭಿಜಿತ್ ಮಡಿವಾಳ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ.

Case-2:

ಪ್ರಕರಣಗಳ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಸಿದ್ದಾಪುರದ ಕೋಲಸಿರ್ಸಿಯಲ್ಲಿ ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ದ ಗೀತಾ ಹುಂಡೇಕರ್ ಕೊಲೆ ಬಗ್ಗೆ ಮೃತಳ ಅಳಿಯ ನೀಡಿದ್ದ ದೂರಿನ ಆಧಾರದ ಮೇಲೆ ಸಿದ್ದಾಪುರ ಸಿಪಿಐ ಜೆ.ಬಿ.ಸೀತಾರಾಮ್ ನೇತೃತ್ವದಲ್ಲಿ ತನಿಖೆ ನಡೆದಿತ್ತು. ಆದರೆ, ಮೂರು ದಿನಗಳವರೆಗೂ ಯಾವುದೇ ಸುಳಿವು ಸಿಕ್ಕಿರಲಿಲ್ಲ.

ಹೀಗಾಗಿ, ಈ ಹಿಂದೆ ಮನೆಯ ಹೆಂಚು ತೆಗೆದು, ಒಳಗೆ ಪ್ರವೇಶಿಸಿ ಅಪರಾಧ ಎಸಗಿದ್ದ ಪ್ರಕರಣಗಳನ್ನು ಪೊಲೀಸರು ಜಾಲಾಡಿದ್ದರು. ಜೋಯಿಡಾ ತಾಲೂಕಿನ ಕ್ಯಾಸಲ್‌ರಾಕ್‌ನಲ್ಲಿ ರಾಮನಗರದ ಶಾಹಿಜಹಾನ್ ಉಸ್ಮಾನ್ ಶೇಖ್ (60) ಎಂಬ ಮಹಿಳೆಯನ್ನು ಹತ್ಯೆಗೈಯ್ಯಲಾಗಿತ್ತು. ಈ ಸಂಬಂಧ ರಾಮನಗರ ಕೆಪಿಸಿ ಕಾಲೋನಿಯ ಆರೋಪಿ ಪ್ರತಿಮಾ ಮರಾಠೆ ಎಂಬಾಕೆಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Here’s how the killers got it:

ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಭಿಜಿತ್ ಮಡಿವಾಳ್ ಊರಿನಲ್ಲಿ ಕಾರ್ತಿಕೋತ್ಸವದ ವೇಳೆ ಭರ್ಜರಿ ಬಾಡೂಟ ಹಾಕಿರುವುದು ಪೊಲೀಸರ ಗಮನಕ್ಕೆ ಬಂದಿತ್ತು. ಈ ಸುಳಿವು ಬೆನ್ನತ್ತಿದ ಪೊಲೀಸರಿಗೆ ಅವನ ವರ್ತನೆಗಳು ಕೂಡ ಅನುಮಾನ ಮೂಡಿಸಿದ್ದವು. ಕೊನೆಗೆ ಪೊಲೀಸರು ಠಾಣೆಗೆ ಕರೆತಂದು ಬಾಡೂಟಕ್ಕೆ ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆ ವಿಚಾರಣೆ ನಡೆಸಿದಾಗ, ಸ್ನೇಹಿತರಿಂದ ಸಾಲ ಪಡೆದಿರುವುದಾಗಿ ಕಥೆ ಕಟ್ಟಿದ್ದ. ಆದರೆ ಅವನ ಸ್ನೇಹಿತರನ್ನು ಕರೆತಂದು ವಿಚಾರಣೆ ಮಾಡಿದಾಗ ಅಸಲಿ ಸತ್ಯ ಹೊರಬಿದ್ದಿತ್ತು. ಅಷ್ಟರಲ್ಲಾಗಲೇ ಆರೋಪಿಯು ಸಿದ್ದಾಪುರ ಮುತ್ತೂಟ್ ಫೈನಾನ್ಸ್​ನಲ್ಲಿ ಅಡವು ಇಟ್ಟಿದ್ದ 4 ಗ್ರಾಂ ಕಿವಿ ಓಲೆ ಪತ್ತೆ ಮಾಡಿದ್ದ ಪೊಲೀಸರು, ಬಳಿಕ ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ ಎಂದು ಎಸ್​ಪಿ ಮಾಹಿತಿ ನೀಡಿದರು.

Accused who removed the tile and entered the house:

ಆರೋಪಿಯು ಮಹಿಳೆ ತನ್ನ ಮನೆಗೆ ಬರುವ ಮುನ್ನವೇ ಹೆಂಚು ತೆಗೆದು ಮನೆಯೊಳಗೆ ಪ್ರವೇಶಿಸಿ ಕಾದು ಕುಳಿತು, ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿಂದ ನಗದು ಹಾಗೂ ಬಂಗಾರವನ್ನು ಕದ್ದು ಪರಾರಿಯಾಗಿದ್ದ. ಆದರೆ ಎರಡು ದಿನಗಳ ಬಳಿಕ ಮಹಿಳೆ ಕೊಲೆಯಾಗಿರುವುದು ಎಲ್ಲರಿಗೂ ಗೊತ್ತಾದಾಗ, ಘಟನಾ ಸ್ಥಳಕ್ಕೆ ಬಂದು ಅವರು ಒಳ್ಳೆಯವರಾಗಿದ್ದರು ಎಂದು ನಾಟಕವಾಡಿದ್ದ ಎಂದು ಎಸ್​ಪಿ ತಿಳಿಸಿದರು.

Sketch the helper’s murder:

ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಪೊಲೀಸರು ರಾಮನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರಾದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಆದರೆ ಸಾಯುವ ಮುನ್ನ ಮಹಿಳೆಯು ತಾನು ರಾಮನಗರದವಳು ಎಂದು ಪೊಲೀಸರಿಗೆ ಹೇಳಿದ್ದಳು. ಅದರ ಆಧಾರದ ಮೇಲೆ ಮಹಿಳೆಯ ಫೋಟೋದೊಂದಿಗೆ ಪೊಲೀಸರು ಹುಡುಕಾಟ ನಡೆಸಿ, ಪ್ರಕಟಣೆ ಕೂಡ ನೀಡಿದ್ದರು. ಅದರಂತೆ ಹಲವು ದಿನಗಳ ಬಳಿಕ ಮಹಿಳೆಯ ಮಗಳು ತಮ್ಮ ತಾಯಿ ಎಂದು ಕೊಲೆ ಬಗ್ಗೆ ದೂರು ದಾಖಲಿಸಿದ್ದರು.

ಜೋಯಿಡಾ ತಾಲೂಕಿನ ರಾಮನಗರದ ಕ್ಯಾಸಲ್‌ರಾಕ್-ಕಣಂಗಿನಿ ರಸ್ತೆ ಬಳಿ ನ.18ರಂದು ರಾಮನಗರದ ಶಾಹಿಜಹಾನ್ ಉಸ್ಮಾನ್ ಶೇಖ್(60) ಎಂಬ ಮಹಿಳೆ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದರು. ಆರಂಭದಲ್ಲಿ ಅವರ ವಿಳಾಸವೇ ಪತ್ತೆ ಆಗಿರಲಿಲ್ಲ. ಬಳಿಕ ಜೋಯಿಡಾ ಪೊಲೀಸರು ವಿಳಾಸದ ಜೊತೆಗೆ, ಆರೋಪಿ ಮಹಿಳೆಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್​ಪಿ ಎಂ.ನಾರಾಯಣ ಮಾಹಿತಿ ನೀಡಿದರು.

Additional Public Information:

ಕೊಲೆಯಾದ ಹಿಂದಿನ ದಿನ ಮಹಿಳೆಯನ್ನು ಖಾನಾಪುರದಲ್ಲಿ ಮಹಿಳೆಯೋರ್ವಳ ಜೊತೆ ನೋಡಿರುವ ಬಗ್ಗೆ ಸಾರ್ವಜನಿಕರೊಬ್ಬರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರು ಖಾನಾಪುರದಲ್ಲಿ ಸಿಸಿಟಿವಿ ಕ್ಯಾಮರಾ ಜಾಲಾಡಿ, ಮೃತ ಮಹಿಳೆಯ ಜೊತೆಗಿದ್ದ ಮತ್ತೋರ್ವ ಮಹಿಳೆಯನ್ನು ಪತ್ತೆ ಮಾಡಿದ್ದರು. ಕೊನೆಗೆ ಅವಳ ವಿಳಾಸ ಪತ್ತೆ ಮಾಡಿ ವಿಚಾರಣೆಗೆ ಮುಂದಾದಾಗ ಆಕೆ ಲೋ ಬಿಪಿಯಿಂದ ಕುಸಿದು ಬಿದ್ದು ಹುಬ್ಬಳ್ಳಿಯಲ್ಲಿ ಒಂದು ವಾರಗಳ ಕಾಲ ಚಿಕಿತ್ಸೆ ಕೊಡಿಸಲಾಗಿತ್ತು.

ಈ ವೇಳೆ ಮಹಿಳೆಯ ಮೊಬೈಲ್ ಪಡೆದು ತಪಾಸಣೆ ನಡೆಸಿದಾಗ ಮಣಿಪುರಂ ಫೈನಾನ್ಸ್ ಹಾಗೂ ಬ್ಯಾಂಕ್‌ನಿಂದ ಮೆಸೇಜ್ ಬಂದಿರುವುದು ಪತ್ತೆಯಾಗಿತ್ತು.ಈ ಬಗ್ಗೆ ಬ್ಯಾಂಕ್ ಹಾಗೂ ಫೈನಾನ್ಸ್​​ನಲ್ಲಿ ವಿಚಾರಣೆ ನಡೆಸಿದಾಗ ಶಾಹಿಜಹಾನ್ (ಕೊಲೆಯಾದವರು) ತನ್ನ ಬಂಗಾರವನ್ನು ಅಡವಿಟ್ಟು ಸುಮಾರು 1.70 ಲಕ್ಷ ರೂ. ಪಡೆದಿರುವ ಬಗ್ಗೆ ಮಾಹಿತಿ ನೀಡಿದ್ದರು.

ಅಡವಿಟ್ಟ ಬಂಗಾರದ ಫೋಟೋವನ್ನು ಮೃತಳ ಸಂಬಂಧಿಕರಿಗೆ ಕಳುಹಿಸಿದಾಗ, ಅದು ತಮ್ಮ ತಾಯಿಯ ಬಂಗಾರ ಎಂಬುದನ್ನು ಖಚಿತಪಡಿಸಿದ್ದರು. ಕೊನೆಗೆ, ಆರೋಪಿ ಮಹಿಳೆಯು ಆಸ್ಪತ್ರೆಯಲ್ಲಿ ಚೇತರಿಸಿಕೊಂಡ ಬಳಿಕ ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾಳೆ. ಆರೋಪಿಗೆ ಶಾಹಿಜಹಾನ್ ಮೊದಲಿನಿಂದಲೂ ಪರಿಯಸ್ಥಳಾಗಿದ್ದಳು. ಮನೆಯಲ್ಲಿ ಮಹಿಳೆ ಒಬ್ಬಳೇ ಇರುವುದನ್ನು ಗಮನಿಸಿದ್ದ ಆರೋಪಿ, ಹಲವು ಸಲ ಹಣಕಾಸಿನ ನೆರವು ಪಡೆದಿದ್ದಳು.

ಆರೋಪಿಯು ನ.16ರಂದು ಖಾನಾಪುರಕ್ಕೆ ಕಾಯಿಲೆಯೊಂದಕ್ಕೆ ಔಷಧಿ ಕೊಡಿಸುವುದಾಗಿ ಹೇಳಿ ಮಹಿಳೆಯನ್ನು ಕೊಂಡೊಯ್ದು, ಅಲ್ಲಿ ಕೊಲೆ ಮಾಡಲು ಸಾಧ್ಯವಾಗದೆ, ಕೊನೆಗೆ ರಾಮನಗರದ ಕ್ಯಾಸಲ್‌ರಾಕ್-ಕಣಂಗಿನಿ ರಸ್ತೆ ಬಳಿಯ ನಿರ್ಜನ ಪ್ರದೇಶಕ್ಕೆ ಬಂದು ಮೊದಲೇ ತಂದಿದ್ದ ಸುತ್ತಿಗೆಯಿಂದ ಹೊಡೆದಿದ್ದಳು. ಈ ವೇಳೆ ಮಹಿಳೆ ಸತ್ತಿರಬಹುದೆಂದು ತಿಳಿದು ಅವಳ ಮೈಮೇಲಿದ್ದ ಒಡವೆಗಳನ್ನು ತೆಗೆದುಕೊಂಡು ಸ್ಥಳಕ್ಕೆ ಮಗನಿಗೆ ಕರೆಯಿಸಿಕೊಂಡು ಪರಾರಿಯಾಗಿದ್ದಳು ಎಂದು ಎಸ್​ಪಿ ತಿಳಿಸಿದರು.

ಇದನ್ನು ಓದಿರಿ : TUSHAR GIRINATH : ಬೆಂಗಳೂರು ವೃಷಭಾವತಿ ವ್ಯಾಲಿ ಕೊಳಚೆ ನೀರು ನಿಯಂತ್ರಣಕ್ಕೆ ಸಮಗ್ರ ಯೋಜನೆ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...