spot_img
spot_img

ಶೀಘ್ರದಲ್ಲಿ ಕೆಎಸ್‌ಆರ್‌ಟಿಸಿಗೂ ಸ್ಮಾರ್ಟ್‌ ಟಿಕೆಟ್‌ ಯಂತ್ರ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕುಂದಾಪುರ: ಕೆಎಸ್‌ಆರ್‌ಟಿಸಿಗೂ ಸ್ಮಾರ್ಟ್‌ ಟಿಕೆಟ್‌ ಯಂತ್ರಗಳು ಬಂದಿದ್ದು, ಪ್ರಯಾಣಿಕರು ಯುಪಿಐ ಮೂಲಕ ಕ್ಯೂಟರ್‌ ಕೋಡ್‌ ಸ್ಕ್ಯಾನ್‌ ಮಾಡಿ ಹಣ ಪಾವತಿಸಬಹುದಾಗಿದೆ.
ಈಗಾಗಲೇ ವಾಯವ್ಯ ಸಾರಿಗೆಯವರು ಸ್ಕ್ಯಾನ್‌ ಮಾಡುವ ಯಂತ್ರವನ್ನು ಅಳವಡಿಸಿದ್ದಾರೆ. ಈ ನಗದು ರಹಿತ ವ್ಯವಸ್ಥೆಯು ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಆರಂಭವಾಗುವ ನಿರೀಕ್ಷೆ ಇದೆ.
ಕೆಎಸ್‌ಆರ್‌ಟಿಸಿ ಎಟಿಎಂ ಕಾರ್ಡ್‌ ಮೂಲಕವೂ ಹಣ ಪಾವತಿಸಲು ಅವಕಾಶ ನೀಡಿದೆ. ಯಂತ್ರಗಳನ್ನು ನಿರ್ವಾಹಕರಿಗೆ ನೀಡುವ ಕಾರ್ಯ ಆರಂಭವಾಗಿದ್ದು, ಅದರ ನಿರ್ವಹಣೆ ಕರಗತವಾದ ಬಳಿಕ ಡಿಜಿಟಲ್‌ ಪಾವತಿ ಆರಂಭವಾಗಲಿದೆ.
ಮೊದಲ ಹಂತದಲ್ಲಿ ಈ ವಿದ್ಯುನ್ಮಾನ ಯಂತ್ರಗಳಲ್ಲಿ ನಗದು ರಹಿತ ಟಿಕೆಟ್‌ ವ್ಯವಸ್ಥೆಯ ಸಾಫ್ಟ್‌ವೇರ್‌ ಅಳವಡಿಸಿ, ಅದರ ಕಾರ್ಯ ನಿರ್ವಹಣೆ, ಸಾಧಕ – ಬಾಧಕಗಳನ್ನು ಪರಿಶೀಲಿಸಿ, ಅನಂತರ ಎಲ್ಲ ಬಸ್‌ಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ.
ಯಂತ್ರಗಳ ಬಳಕೆಗೆ ಸಂಬಂಧಿಸಿ ನಿರ್ವಾಹಕರು ಹಾಗೂ ಸಿಬಂದಿಗೆ ತರಬೇತಿ ನೀಡಲಾಗಿದೆ.
ಟಿಕೆಟ್‌ ವಿತರಣೆ ಯಂತ್ರಗಳ ಬದಲಿಗೆ ನಿರ್ವಾಹಕರಿಗೆ ಆಯಂಡ್ರಾಯ್ಡ ಆಪರೇಟಿಂಗ್‌ನ ಟಚ್‌ ಸ್ಕ್ರೀನ್‌ ಸೌಲಭ್ಯದ ಸ್ಮಾರ್ಟ್‌ ವಿದ್ಯುನ್ಮಾನ ಟಿಕೆಟ್‌ ಯಂತ್ರ (ಇಟಿಎಂ) ನೀಡಲಾಗುತ್ತಿದೆ.
45 ಡಿಪೋಗಳಿಗೆ ಒದಗಿಸಲಾಗಿದ್ದು, ಅಕ್ಟೋಬರ್‌ ಅಂತ್ಯಕ್ಕೆ ಎಲ್ಲ 83 ಡಿಪೋಗಳಿಗೆ 10,240 ಯಂತ್ರಗಳನ್ನು ನೀಡಲಾಗುವುದು.
ಎಲೆಕ್ಟ್ರಾನಿಕ್‌ ಟಿಕೆಟಿಂಗ್‌ಗೆ ಸರಿಹೊಂದುವ ಯಂತ್ರಗಳನ್ನು ಬಾಡಿಗೆ ಆಧಾರದಲ್ಲಿ ಖರೀದಿಸಲು ಕೆಎಸ್‌ಆರ್‌ಟಿಸಿ ಮುಂದಾಗಿದೆ.
ಸಮಗ್ರ ಟಿಕೆಟಿಂಗ್‌ ತಂತ್ರಾಂಶದ ವಿನ್ಯಾಸ, ಅಭಿವೃದ್ಧಿ, ಅನುಷ್ಠಾನ, ವೆಬ್‌ ಹೋಸ್ಟಿಂಗ್‌, ಕಾರ್ಯಾಚರಣೆ ಮತ್ತು ನಿರ್ವಹಣೆಯ ಜತೆಗೆ ಸ್ಮಾರ್ಟ್‌ ಎಲೆಕ್ಟ್ರಾನಿಕ್‌ ಟಿಕೆಟಿಂಗ್‌ ಯಂತ್ರಗಳ ಪೂರೈಕೆದಾರರನ್ನು ಆಯ್ಕೆ ಮಾಡಲು ದಿಲ್ಲಿ ಮೂಲದ ಮೇ ಎಬಿಕ್ಸ್‌ ಕ್ಯಾಶ್‌ ಸಂಸ್ಥೆ ಟೆಂಡರ್‌ ಪಡೆದುಕೊಂಡಿದೆ.
ಸಂಸ್ಥೆ ಯಂತ್ರಗಳನ್ನು ಪೂರೈಸಿ, ಆರಂಭಿಕ ಹಂತದಲ್ಲಿ 10,245 ಹಾಗೂ ಮುಂದಿನ ದಿನಗಳಲ್ಲಿ ಅವಶ್ಯವಿದ್ದರೆ ಆ ಸಂಖ್ಯೆಗೆ ಅನುಗುಣವಾಗಿ ಟಿಕೆಟ್‌ ಯಂತ್ರಗಳನ್ನು ಬಳಸಿಕೊಳ್ಳಲು ಮುಂದಾಗಿದೆ.
ಯುನಿಕೋಡ್‌ ಮೊದಲಾದ ಕನ್ನಡ ಅಕ್ಷರಗಳು ಸಹಿತ ಅನೇಕ ಬದಲಾವಣೆಗಳಾಗಿದ್ದು, ನಿರ್ವಾಹಕರು ಯಂತ್ರದ ನಿರ್ವಹಣೆಯನ್ನು ಸರಿಯಾಗಿ ಕಲಿತ ಬಳಿಕ ಡಿಜಿಟಲ್‌ ಪಾವತಿ ಆರಂಭವಾಗಲಿದೆ ಎಂದು ಕೆಎಸ್‌ಆರ್‌ಟಿಸಿಯ ನಿಗಮ ಕಾರ್ಯದರ್ಶಿ ಡಾ| ಟಿ.ಎಸ್‌. ಲತಾ ತಿಳಿಸಿದ್ದಾರೆ.
“ಟಿಕೆಟ್‌ ಯಂತ್ರಗಳ ವಿತರಣೆ ಬಳಿಕ ನಿಗಮದ ಹಣಕಾಸು ವಿಭಾಗ ಡಿಜಿಟಲ್‌ ಪಾವತಿ ಕುರಿತು ಕ್ರಮ ಕೈಗೊಳ್ಳಲಿದೆ.” ಎಂದು ಬೆಂಗಳೂರು ಕೆ. ಎಸ್ . ಆರ್ . ಸಿ. ಟಿ. ಸಿ. ಮುಖ್ಯ ಸಂಚಾರ ವ್ಯವಸ್ಥಾಪಕರಾದ ಆಯಂಟನಿ ಜಾರ್ಜ್‌ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

KIREN RIJIJU WAQF BILL:ವಕ್ಫ್ ತಿದ್ದುಪಡಿ ಮಸೂದೆಗೆ ಚಂದ್ರಬಾಬು, ನಿತೀಶ್, ಮುಸ್ಲಿಮ್ ಸಂಸದರಿಂದ ಬೆಂಬಲ

Srinagar (Jammu-Kashmir) News : ಬಿಜೆಪಿ ಹೊರತಾಗಿ ಎನ್​ಡಿಎ ಕೂಟದಲ್ಲಿ WAQF ಮಸೂದೆ ತಿದ್ದುಪಡಿಗೆ ಸಮ್ಮತಿ ಇಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ...

AMARTYA SEN DESCRIBE MANMOHAN:ಮನಮೋಹನ್ ಸಿಂಗ್ ಒಬ್ಬ ಮಹಾನ್ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ

Kolkata (West Bengal) News: ಪಶ್ಚಿಮ ಬಂಗಾಳದ ಬಿರ್ಭೂಮ್​​ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, MANMOHAN​ ಸಿಂಗ್​ ಮತ್ತು ನಾನು ಕೇಂಬ್ರಿಡ್ಜ್‌ನಲ್ಲಿ ಓದುತ್ತಿರುವ ವೇಳೆ ಉತ್ತಮ...

H D DEVE GOWDA:ರಾಜ್ಯದಲ್ಲಿ ಕೃಷ್ಣ, ಕಾವೇರಿ, ಗೋದಾವರಿ ನದಿ ಜೋಡಣೆಗೆ ಎಲ್ಲರೂ ಧ್ವನಿ ಎತ್ತಬೇಕಿದೆ

Bangalore News: ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ''ರಾಜ್ಯಸಭೆಯಲ್ಲಿ ಗೋದಾವರಿ, ಕೃಷ್ಣ, ಕಾವೇರಿ ನದಿ ಜೋಡಣೆ ಬಗ್ಗೆ ತಮಿಳುನಾಡಿನ ರಾಜ್ಯಸಭಾ...

MAHINDRA ELECTRIC SUV BOOKING OPEN:ಅಬ್ಬಬ್ಬಾಂದ್ರೆ ಎಷ್ಟಿರಬಹುದು?

Mahindra Electric SUV Booking Open News: ಇವುಗಳನ್ನು ನವೆಂಬರ್ 2024ರಲ್ಲಿ 'XEV 9E' ಮತ್ತು 'BE 6' ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿತ್ತು. ಎಲೆಕ್ಟ್ರಿಕ್...