spot_img
spot_img

SPECIAL OFFERS : ಈರುಳ್ಳಿ ಮಂಡಿ ಮಾಲೀಕನ ಹೊಸ ಪ್ಲಾನ್!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Tumkur News:

ಈರುಳ್ಳಿ ಕೊಳ್ಳಿ, ಬಹುಮಾನ ಗೆಲ್ಲಿ… ಹೀಗೊಂದು ಆಫರ್​ ಬೋರ್ಡ್ ಅನ್ನು ತುಮಕೂರಿನ ಅಂತರಸನಹಳ್ಳಿಯ ಮಾರುಕಟ್ಟೆಯಲ್ಲಿ ಹಾಕಿರುವ ನೃಪತುಂಗ ಅವರು, ಪಿ.ವಿ.ನೃಪತುಂಗ ಅಂಡ್​ ಸನ್ಸ್​ನ ಈರುಳ್ಳಿ ಮಂಡಿಯಿಂದ ಈ SPECIAL OFFERS ಘೋಷಣೆ ಮಾಡಿದ್ದಾರೆ.

ದೊಡ್ಡ ದೊಡ್ಡ ಮಾಲ್​ಗಳಲ್ಲಿ ಆಫರ್​ಗಳನ್ನು ಕೊಡುವುದು ನೋಡಿದ್ದೇವೆ. ಬೈ ಒನ್ ಗೆಟ್ ಒನ್ ಫ್ರೀ ಆಫ್ ಕೇಳಿದ್ದೇವೆ. ಆದರೆ, ತುಮಕೂರಿನ ಈರುಳ್ಳಿ ಮಂಡಿ ಮಾಲೀಕ ನೃಪತುಂಗ ಎನ್ನುವವರು, ತನ್ನ ಅಂಗಡಿಯಲ್ಲಿ ಈರುಳ್ಳಿ ಖರೀದಿ ಮಾಡಿದರೆ ಪ್ರತಿದಿನ ಗ್ರಾಹಕರಿಗೆ ಬಹುಮಾನ ಕೊಡುತ್ತಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿ, ಯುಗಾದಿ ಹಬ್ಬಕ್ಕೆ ಚಿನ್ನದುಂಗರದ ಉಡುಗೊರೆ ಕೊಡಲು ಸಹ ಮುಂದಾಗಿದ್ದಾರೆ. ಈರುಳ್ಳಿ ಮಂಡಿ ಆರಂಭ ಮಾಡಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಫೆ.1 ರಿಂದ ಮೇ 21ರ ವರೆಗೆ ನಿತ್ಯ ಈ SPECIAL OFFERS ಮುಂದುವರಿಯಲಿದೆ. ಇನ್ನೂ ವಿಶೇಷ ಅಂದರೆ ಯುಗಾದಿ ಹಬ್ಬಕ್ಕೆ ಬಹುಮಾನ ವಿಜೇತ ಗ್ರಾಹಕರಿಗೆ 10 ಗ್ರಾಂ ಚಿನ್ನದ ರಿಂಗ್ ಕೊಡುವ ಚಿಂತನೆ ಮಾಡಲಾಗಿದೆ.

ಗ್ರಾಹಕರ ಆಕರ್ಷಣೆ ಮಾಡುವ ಉದ್ದೇಶ ಇದರ ಹಿಂದೆ ಇದ್ದರೂ, ದೊಡ್ಡ ದೊಡ್ಡ ಮಾಲ್​ಗಳಲ್ಲಿ ಆಫರ್ ಕೊಡುವಾಗ ರೈತರ ಬೆಳೆಗಳಿಗೆ ಏಕೆ ಆಫರ್ ಕೊಡಬಾರದು? ಅನ್ನೋದು ನನ್ನ ಅಭಿಪ್ರಾಯ. ಪ್ರತಿದಿನ ಬೆಳಗ್ಗೆ ಮಂಡಿ ಓಪನ್ ಆದಾಗ ರೈತರ ಭಾವಚಿತ್ರಕ್ಕೆ ಪೂಜೆ ಮಾಡಿ ವ್ಯಾಪಾರ ಶುರು ಮಾಡುವುದು ಸಂಪ್ರದಾಯ. ಹಾಗಾಗಿ ರೈತರ ಬೆಳೆಗೆ ಆಫರ್ ನೀಡುತ್ತಿದ್ದೇನೆ ಎನ್ನುತ್ತಾರೆ ಮಂಡಿ ಮಾಲೀಕ ನೃಪತುಂಗ.

100 ರೂಪಾಯಿ ಮೇಲ್ಪಟ್ಟು ಈರುಳ್ಳಿ ಖರೀದಿ ಮಾಡಿದವರಿಗೆ ಮಾತ್ರ ಈ ಆಫರ್ ಅನ್ವಯವಾಗುತ್ತದೆ. ಈರುಳ್ಳಿ ಖರೀದಿಸಿದ್ದ ಪ್ರತಿಯೊಬ್ಬರಿಗೂ ಕೂಪನ್ ಕೊಡಲಾಗುತ್ತದೆ. SPECIAL OFFERS ಅದರಲ್ಲಿ ಗ್ರಾಹಕರ ಮಾಹಿತಿ ಬರೆದು ಲಕ್ಕಿ ಡ್ರಾ ಡಬ್ಬಿಯಲ್ಲಿ ಹಾಕಲಾಗುತ್ತದೆ.

ಪ್ರತಿ ದಿನ ರಾತ್ರಿ 7 ಗಂಟೆಗೆ ಗ್ರಾಹಕರ ಸಮ್ಮುಖದಲ್ಲೇ ಆ ಬಾಕ್ಸ್ ಓಪನ್ ಮಾಡಲಾಗುತ್ತದೆ. ಲಕ್ಕಿ ಡಿಪ್ ಮೂಲಕ ಈ ಕೂಪನ್ ಆಯ್ಕೆ ನಡೆಸಲಾಗುತ್ತದೆ. ವಿಜೇತರಿಗೆ ಗೃಹೋಪಯೋಗಿ ವಸ್ತುಗಳನ್ನು ಬಹುಮಾನವಾಗಿ ಕೊಡಲಾಗುತ್ತಿದೆ ಎನ್ನುತ್ತಾರೆ ಮಂಡಿ ಮಾಲೀಕ ನೃಪತುಂಗ.

SPECIAL OFFERS ಕೇವಲ ಈರುಳ್ಳಿಗೆ ಆಫರ್ ಕೊಟ್ಟು ಈ ಮಂಡಿ ಮಾಲೀಕ ಮುನ್ನೆಲೆ ಬಂದವರಲ್ಲ. ಮಂಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 27 ರಿಂದ 30 ಸಾವಿರ ರೂ. ಸಂಬಳ ಕೊಟ್ಟು, ಕೆಲಸಕ್ಕೆ ಬೇಕಾಗಿದ್ದಾರೆ ಎಂದು ಜಾಹೀರಾತು ಕೊಟ್ಟು ಗಮನ ಸೆಳೆದಿದ್ದರು.

ಪದವಿ ಓದಿದವರಿಗೂ 30 ಸಾವಿರ ಸಂಬಳ ಸಿಗದ ಈ ಕಾಲದಲ್ಲಿ, ಈರುಳ್ಳಿ ತೂಕ ಮಾಡುವವನಿಗೆ 30 ಸಾವಿರ ಕೊಡುತ್ತಾರೆಂಬ ಜಾಹೀರಾತು ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಮಿಲಿಯನ್ ಗಟ್ಟಲೆ ವಿವ್ಸ್ ಕೂಡ ಅಗಿತ್ತು. ಒಟ್ಟಾರೆ ತುಮಕೂರಿನ ಈ ಈರುಳ್ಳಿ ಮಂಡಿ ಮಾಲೀಕ ಸದ್ಯ ಮಾರುಕಟ್ಟೆಯಲ್ಲಿ ಸುದ್ದಿಯಲ್ಲಿದ್ದಾರೆ ಅಂದ್ರೆ ತಪ್ಪಲ್ಲ.

ಇದನ್ನು ಓದಿರಿ : ISIL-K continued to pose a significant threat in Afghanistan, region and beyond.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...