spot_img
spot_img

SPECIAL PASSES FOR SABARIMALA : ಅಯ್ಯಪ್ಪ ಭಕ್ತರಿಗೆ ನೀಡಲಾಗುತ್ತಿದ್ದ ವಿಶೇಷ ಪಾಸ್ ತಾತ್ಕಾಲಿಕ ಸ್ಥಗಿತ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Sabarimala (Kerala):

ಸಾಂಪ್ರದಾಯಿಕ ಅರಣ್ಯ ಮಾರ್ಗದ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಾರ್ಥಿಗಳಿಗೆ ಸುಲಭ ದರ್ಶನ ವ್ಯವಸ್ಥೆ ಮಾಡುವ ಸಲುವಾಗಿ ಕಳೆದ ತಿಂಗಳು ಈ ಪಾಸ್​ ವ್ಯವಸ್ಥೆ ಮಾಡಲಾಗಿತ್ತು. ಈ ಪಾಸ್​ ವಿತರಣೆಯಿಂದಾಗಿ ವರ್ಚುವಲ್​ ಸಾಲಿನ ವ್ಯವಸ್ಥೆ ಮತ್ತು ಅಲ್ಲಿಯೇ ಬುಕ್ಕಿಂಗ್​ ಮಾಡಿ ಪಂಬಾದಿಂದ ಬರುತ್ತಿರುವ ಭಕ್ತರು ಅಯ್ಯಪ್ಪನ ದರ್ಶನಕ್ಕೆ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆ ಈ ವಿಶೇಷ ಪಾಸ್​ ಅನ್ನು ನಿಲ್ಲಿಸಲಾಗಿದೆ ಎಂದು ದೇವಸ್ವಂ ಬೋರ್ಡ್​ ಸದಸ್ಯ ಎ ಅಜಿಕುಮಾರ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರಣ್ಯ ಮಾರ್ಗದಲ್ಲಿ ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಅಯ್ಯಪ್ಪ ಭಕ್ತರಿಗೆ ನೀಡುವ ವಿಶೇಷ ಪಾಸ್​​ಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ತಿರುವಾಂಕೂರ್​​ ದೇವಸ್ವಂ ಮಂಡಳಿ (ಟಿಡಿಬಿ) ಘೋಷಿಸಿದೆ.

ಈ ಮೊದಲು ಅರಣ್ಯ ಮಾರ್ಗದಿಂದ ನಡೆದುಕೊಂಡು ಬರುವ 5,000 ಭಕ್ತರಿಗೆ ದರ್ಶನ ಸುಲಭಗೊಳಿಸಲು ಈ ವಿಶೇಷ ಪಾಸ್​ ವ್ಯವಸ್ಥೆ ಕಲ್ಪಿಸಲಾಗಿತ್ತು. ಅರಣ್ಯ ಮಾರ್ಗದ ಮೂಲಕ ಆಗಮಿಸುವ ಭಕ್ತರ ಸಂಖ್ಯೆ ಕೂಡ ಐದು ಪಟ್ಟಿ ಹೆಚ್ಚಾಗಿತ್ತು. ಈ ಹಿನ್ನೆಲೆ ವಿಶೇಷ ಪಾಸ್​ ನೀಡುವಿಕೆ ಮೇಲೆ ನಿರ್ಬಂಧಗಳನ್ನು ವಿಧಿಸಲಾಯಿತು. ಇದೀಗ ಮುಂದಿನ ಪ್ರಕಟಣೆವರೆಗೆ ವಿಶೇಷ ದರ್ಶನದ ಪಾಸ್​ ಅನ್ನು ನೀಡದಿರಲು ನಿರ್ಧರಿಸಲಾಗಿದೆ ಎಂದು ತಿಳಿಸಲಾಗಿದೆ.

ವಾರ್ಷಿಕ ಮಕರವುಲಕ್ಕು ಹಬ್ಬದ ಅಂಗವಾಗಿ ಶಬರಿಮಲೆ ಅಯ್ಯಪ್ಪ ದೇಗುಲದ ಬಾಗಿಲನ್ನು ಡಿಸೆಂಬರ್​ 30ರಂದು ತೆಗೆಯಲಾಗಿದ್ದು, ಜನವರಿ 14ರ ವರೆಗೆ ಈ ದರ್ಶನವನ್ನು ಅಯ್ಯಪ್ಪ ಭಕ್ತರು ನಡೆಸಬಹುದಾಗಿದೆ. ಡಿಸೆಂಬರ್ 23ರ ಹೊತ್ತಿಗೆ ಈ ಋತುವಿನಲ್ಲಿ ಒಟ್ಟು 30,87,049 ಯಾತ್ರಾರ್ಥಿಗಳು ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 4.46 ಲಕ್ಷ ಭಕ್ತರು ಹೆಚ್ಚು ಭೇಟಿ ನೀಡಿದ್ದಾರೆ.

ಮಕರವಿಳಕ್ಕು ಹಬ್ಬದ ಅಂಗವಾಗಿ ಜನವರಿ 13 ಮತ್ತು 14 ರಂದು ವರ್ಚುವಲ್ ಕ್ಯೂ ಬುಕ್ಕಿಂಗ್ ಸಂಖ್ಯೆಯನ್ನು 50,000 ಮತ್ತು 40,000 ಕ್ಕೆ ನಿಗದಿಪಡಿಸಲಾಗಿದೆ. ಸಾಂಪ್ರದಾಯಿಕ ಅರಣ್ಯ ಮಾರ್ಗದ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಾರ್ಥಿಗಳಿಗೆ ಸುಲಭ ದರ್ಶನ ವ್ಯವಸ್ಥೆ ಮಾಡುವ ಸಲುವಾಗಿ ಕಳೆದ ತಿಂಗಳು ಈ ಪಾಸ್​ ವ್ಯವಸ್ಥೆ ಮಾಡಲಾಗಿತ್ತು. ಅರಣ್ಯ ಇಲಾಖೆಯಿಂದ ಇವರಿಗೆ ವಿಶೇಷ ಟ್ಯಾಗ್​ ನೀಡಿ, ವಿಶೇಷ ಮಾನ್ಯತೆ ನೀಡಿ, ದರ್ಶನಕ್ಕೆ ಪ್ರತ್ಯೇಕ ಸಾಲಿನ ವ್ಯವಸ್ಥೆಯನ್ನು ಮಾಡಲಾಗಿತ್ತು.

 

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...