spot_img
spot_img

SRI SUBUDHENDRA SWAMIJI : ‘ಕುಂಭಮೇಳ ಸಮಸ್ತ ಹಿಂದೂಗಳ ಶ್ರದ್ಧಾ ಉತ್ಸವ, ರಾಜಕೀಯ ನಾಯಕರು ಟೀಕಿಸುವ ವಿಚಾರವಲ್ಲ’

spot_img
spot_img

Share post:

Raichur News:

ಮಹಾ ಕುಂಭಮೇಳದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿSRI SUBUDHENDRA SWAMIJI ತೀರ್ಥರು ಪ್ರತಿಕ್ರಿಯಿಸಿದ್ದಾರೆ. ರಾಯಚೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗಂಗಾಸ್ನಾನದಿಂದ ಬಡತನ ದೂರವಾಗಲ್ಲ” ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

“ಗಂಗಾಸ್ನಾನದಿಂದ ಬಡತನ ‌ನೀಗುತ್ತೆ ಅಂತ ಯಾರೂ ಹೇಳಿಲ್ಲ. ಗಂಗಾ ಸ್ನಾನ ಎನ್ನುವುದು ಒಂದು ಭಾವನೆಗೆ ಒಳಪಟ್ಟದ್ದು. ಪವಿತ್ರತೆಗೆ ಕಾರಣವಾಗುವಂಥದ್ದು. SRI SUBUDHENDRA SWAMIJI ನಮ್ಮ ಪಾಪಗಳು ಪರಿಹಾರವಾಗುತ್ತವೆ. ದೇಹ ಮತ್ತು ಮನಸ್ಸಿನ ಶುದ್ಧಿಯಾಗುತ್ತದೆ. ಗಂಗಾ ಸ್ನಾನ ಮಾಡಿದರೆ ಸಾಲ ಪರಿಹಾರವಾಗದು. ಸನಾತನ ಹಿಂದೂ ಧರ್ಮವನ್ನು ಟೀಕಿಸುವುದನ್ನೇ ಪ್ರಧಾನವಾಗಿ ಇಟ್ಟುಕೊಳ್ಳಬಾರದು. ಕುಂಭಮೇಳ ಒಂದು ಧಾರ್ಮಿಕ ವಿಚಾರವಾಗಿರುವುದರಿಂದ ಅದನ್ನು ಟೀಕಿಸುವುದು ಅತ್ಯಂತ ಖಂಡನೀಯ” ಎಂದರು. ಮಹಾ ಕುಂಭಮೇಳ ಧಾರ್ಮಿಕ ಶ್ರದ್ಧೆಯ ಸಂಗತಿ.

ಇದು ರಾಜಕೀಯ ನಾಯಕರು ಟೀಕಿಸುವ ವಿಚಾರವಾಗಬಾರದು ಎಂದು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ SRI SUBUDHENDRA SWAMIJI ಹೇಳಿದ್ದಾರೆ.

“ಕುಂಭಮೇಳಕ್ಕಾಗಿ ಅಲ್ಲಿನ ಸರ್ಕಾರ ಅತ್ಯಂತ ಉತ್ತಮ ವ್ಯವಸ್ಥೆಗಳನ್ನು ಮಾಡಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ ಅವರು ಎಲ್ಲ ವ್ಯವಸ್ಥೆ ಮಾಡಿದ್ದಾರೆ. ಭಕ್ತರು ಸಹ ಸ್ವಯಂ ಜಾಗೃತವಹಿಸಬೇಕು. ನಿಯಮ ಪಾಲನೆಯ ಜೊತೆಗೆ ತಾಳ್ಮೆಯಿಂದಿರಬೇಕು. ಅಲ್ಲಿನ ನಿಯಮಗಳಿಗೆ ಬೆಲೆ ಕೊಟ್ಟು ಅವುಗಳನ್ನು ಪಾಲಿಸಬೇಕು. ಆಗ ಇಂತಹ ದುರಂತಗಳು ಯಾವ ಕ್ಷೇತ್ರದಲ್ಲಿಯೂ ನಡೆಯುವುದಿಲ್ಲ. ಕಾಲ್ತುಳಿತದಲ್ಲಿ ಮೃತಪಟ್ಟರಿಗೆ ಸದ್ಗತಿ ದೊರೆಯಲಿ. ಮೃತರ ಕುಟುಂಬದವರಿಗೆ ಶಾಂತಿ ಮತ್ತು ಧೈರ್ಯವನ್ನು ಭಗವಂತ ನೀಡಲಿ. ಘಟನೆಯ ಬಗ್ಗೆ ಸಮಗ್ರ ತನಿಖೆಯಾಗಲಿ” ಎಂದು ಸ್ವಾಮೀಜಿ ತಿಳಿಸಿದರು.

“ಕುಂಭಮೇಳ ಸಮಸ್ತ ಹಿಂದೂಗಳ ಶ್ರದ್ಧಾ ಉತ್ಸವ. ದೇಶ-ವಿದೇಶದಿಂದ ಲಕ್ಷಾಂತರ ಭಕ್ತರು ಪುಣ್ಯ ಸ್ನಾನಕ್ಕಾಗಿ ಮೇಳಕ್ಕೆ ಬರುತ್ತಿದ್ದಾರೆ. ಲಕ್ಷಾಂತರ ಭಕ್ತರು ಈಗಾಗಲೇ ಪುಣ್ಯಸ್ನಾನ ಮಾಡಿದ್ದಾರೆ. ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಭಕ್ತರು ಸೇರಿ ಕಾಲ್ತುಳಿತವಾಗಿ, ಭಕ್ತರ ಸಾವುಗಳು ಸಂಭವಿಸಿದ್ದು, ಅತ್ಯಂತ ವಿಷಾದನೀಯ ಸಂಗತಿ” ಎಂದು ಹೇಳಿದರು.

ಇದನ್ನು ಓದಿರಿ : BIGG BOSS WINNER HANUMANTU : ಅದ್ಧೂರಿ ಮೆರವಣಿಗೆ ಮೂಲಕ ಸ್ವಾಗತಿಸಲು ಸಿದ್ಧತೆ

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...