spot_img
spot_img

ಶ್ರೀ ವೆಂಕಟೇಶ್ವರ ದೇವಸ್ಥಾನದ ಚಂಡಮಾರುತ ; ಶ್ರೀ ಕೃಷ್ಣನ ದೇವಾಲಯಕ್ಕೆ ತಲುಪಿದೆಯಾ ?

spot_img
spot_img

Share post:

ಶ್ರೀ ವೆಂಕಟೇಶ್ವರ ದೇವಸ್ಥಾನದ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು, ಮೀನಿನ ಎಣ್ಣೆಯ ಕಲಬೆರಕೆ ಕೋಟ್ಯಾಂತರ ಭಕ್ತರಿಗೆ ಆಘಾತವನ್ನು ತಂದಿದೆ. ಈ ಅಪವಿತ್ರದ ವಿಚಾರ ಬೆಳಕಿಗೆ ಬಂದ ಮೇಲೆ ತಿರುಮಲದ ವೆಂಕಟೇಶ್ವರ ದೇವಾಲಯದಲ್ಲಿ ಮಹಾಶಾಂತಿ ಯಾಗ ಮಾಡಿ ಸಂಪ್ರೋಕ್ಷಣಾ ಕಾರ್ಯ ಮಾಡಲಾಗಿದೆ.

ಇದನ್ನೂ ಓದಿ : ನಾಡ ಹಬ್ಬ ದಸರಾ ರಜೆ ಘೋಷಣೆ ; ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ ಗೊತ್ತಾ?

ಈಗ ದಕ್ಷಿಣ ಭಾರತದಲ್ಲಿ ಈ ತಿಮ್ಮಪ್ಪನ ಪ್ರಸಾದ ಸಂಚಲನವನ್ನು ಸೃಷ್ಟಿಸಿರುವಾಗಲೇ ಉತ್ತರ ಭಾರತದಲ್ಲೂ ಕಲಬೆರಕೆಯ ಕೂಗು ಕೇಳಿ ಬಂದಿದೆ. ಉತ್ತರ ಪ್ರದೇಶ ಮಥುರಾದ  ಶ್ರೀ ಕೃಷ್ಣ ದೇವಾಲಯದ ಪ್ರಸಾದದ ಬಗ್ಗೆಯೂ ಆಕ್ಷೇಪ ವ್ಯಕ್ತವಾಗಿದೆ. ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್ ಯಾದವ್ ಅವರು ಈ ಬಗ್ಗೆ ಗಮನಹರಿಸುವಂತೆ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

 

ಶ್ರೀ ಕೃಷ್ಣ ಜನ್ಮ ಮಥುರಾ ದೇವಾಲಯದಲ್ಲಿ ಖೋವಾ ಪ್ರಸಾದ ನೀಡಲಾಗುತ್ತಿದೆ. ಆದರೆ ಅದು ಈಗ ಗುಣಮಟ್ಟದಿಂದ ಕೂಡಿಲ್ಲ ಸಂಸದೆ ಡಿಂಪಲ್ ಯಾದವ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರವು ಶ್ರೀ ಕೃಷ್ಣ ಮಥುರಾ ದೇವಾಲಯದ ಪ್ರಸಾದದ ಗುಣಮಟ್ಟದ ಕಡೆ ಗಮನ ಕೊಡಬೇಕು ಎಂದಿದ್ದಾರೆ.

ಇದನ್ನೂ ಓದಿ : ಗುರುವನ್ನೇ ಮೀರಿಸಿದ ಶಿಷ್ಯ ರಿಷಬ್​ ಪಂತ್ ; ಗಿಲ್​​ ಕ್ರಿಸ್ಟ್​ ಶಾಕ್, ಪಂತ್ ಆಟಕ್ಕೆ.!!

ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಪತ್ನಿ ಡಿಂಪಲ್ ಯಾದವ್ ಇಂತಹದೊಂದು ಆಕ್ಷೇಪ ವ್ಯಕ್ತಪಡಿಸಿರೋದು ಆತಂಕಕ್ಕೆ ಕಾರಣವಾಗಿದೆ. ಇದರ ಜೊತೆಗೆ ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರು ಕೂಡ ಇದೇ ಮಾತನ್ನು ಹೇಳಿದ್ದಾರೆ. ನಾನು ಕೂಡ 2 ವರ್ಷದಿಂದ ಪ್ರಸಾದದ ಗುಣಮಟ್ಟದ ಬಗ್ಗೆ ಹೇಳುತ್ತಿದ್ದೇನೆ. ಮಥುರಾ ಬೃಂದಾವನ ದೇವಾಲಯದ ಪ್ರಸಾದದ ಬಗ್ಗೆ ತನಿಖೆಯಾಗಬೇಕು ಎಂದು ಬ್ರಿಜ್ ಭೂಷಣ್ ಸಿಂಗ್ ಅವರು ಒತ್ತಾಯಿಸಿದ್ದಾರೆ.

ತಿರುಪತಿ ಲಡ್ಡು ಪ್ರಸಾದ ಇಡೀ ದೇಶದಲ್ಲೇ ಚಂಡಮಾರುತ ಸೃಷ್ಟಿಸಿದೆ. ಮಥುರಾ ದೇವಾಲಯಕ್ಕೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಸದ್ಯ ಪ್ರತಿಪಕ್ಷ ನಾಯಕರ ಈ ಆರೋಪ ರಾಜಕೀಯ ತಿರುವು ಪಡೆದಿದೆ. ಆದರೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಈ ಬಗ್ಗೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತೆ ಅನ್ನೋದು ಕೃಷ್ಣ ಭಕ್ತರಿಗೆ ಮಹತ್ವದ್ದಾಗಿದೆ.

 

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...