spot_img
spot_img

SWACHAGRAHA KALIKA KENDRA – ಕಸವನ್ನು ಇಂಧನವಾಗಿ ಪರಿವರ್ತಿಸಲು ಪ್ರಾತ್ಯಕ್ಷಿಕೆ ಮೂಲಕ ತರಬೇತಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Davangere News:

ಮನೆಗಳಲ್ಲಿ ಉತ್ಪತ್ತಿಯಾಗುವ ಹಸಿ ಕಸ, ಒಣ ಕಸವನ್ನು ಗೊಬ್ಬರ ಮತ್ತು ಜೈವಿಕ ಇಂಧನವಾಗಿ ಪರಿವರ್ತಿಸಲು ಹಾಗು ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಲು ಸ್ವಚ್ಛ ಗೃಹ ಕಲಿಕಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದು ಜನವರಿಯಲ್ಲಿ ಆರಂಭ ಆಗಲಿದೆ. ದಾವಣಗೆರೆ ಮಹಾನಗರ ಪಾಲಿಕೆಗೆ ಕಸದ್ದೇ ಬಹುದೊಡ್ಡ ಸಮಸ್ಯೆ. ಈ ಸಮಸ್ಯೆ ಹೋಗಲಾಡಿಸಲು ಪಾಲಿಕೆಯ ಅಧಿಕಾರಿಗಳು ಇದೀಗ ದಾರಿಯೊಂದನ್ನು ಕಂಡುಕೊಂಡಿದ್ದಾರೆ‌.ಹೌದು, ನಗರದ ಜೆ.ಎಚ್‌. ಪಟೇಲ್ ಬಡಾವಣೆಯ ಉದ್ಯಾನದಲ್ಲಿ ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನೂತನ “ಸ್ವಚ್ಛ ಗೃಹ ಕಲಿಕಾ ಕೇಂದ್ರ” ನಿರ್ಮಾಣ ಆಗಿದೆ. ಒಟ್ಟು 05 ಎಕರೆ ವಿಸ್ತೀರ್ಣದ ಉದ್ಯಾನದಲ್ಲಿ 01 ಎಕರೆಯಷ್ಟು ಪ್ರದೇಶದಲ್ಲಿ 1.06 ಕೋಟಿ ವೆಚ್ಚದಲ್ಲಿ ಈ ಕಲಿಕಾ ಕೇಂದ್ರ ನಿರ್ಮಾಣವಾಗಿದೆ. ರಾಜ್ಯದ ಮೊದಲ ಕೇಂದ್ರ ಬೆಂಗಳೂರಿನ ಎಚ್‌.ಎಸ್‌.ಆರ್ ಬಡಾವಣೆ ಹಾಗೂ ತೆಲಂಗಾಣದಲ್ಲಿ ಎರಡನೆಯ ಕೇಂದ್ರ ನಿರ್ಮಾಣ ಮಾಡಲಾಗಿದ್ದು. ದಾವಣಗೆರೆಯಲ್ಲಿ ಮೂರನೇ ಕೇಂದ್ರವನ್ನು ನಿರ್ಮಿಸಲಾಗಿದೆ. ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 42 ವಾರ್ಡ್​ಗಳ ಪೈಕಿ 170 ಟನ್​ ಕಸ ಸಂಗ್ರಹವಾಗುತ್ತಿದೆ. ಇದನ್ನು ವಿಲೇವಾರಿ ಮಾಡುವ ಬದಲು ಜೈವಿಕ ಇಂಧನ, ಗೊಬ್ಬರ ಸಿದ್ಧಪಡಿಸಲು ಉಪಯೋಗಿಸಿಕೊಳ್ಳುವ ಮೂಲಕ ಜನರಿಗೆ ತರಬೇತಿ ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ. ಅಲ್ಲದೇ ಮನೆಯಲ್ಲಿ, ಹೋಟೆಲ್​, ಅಪಾರ್ಟ್​ಮೆಂಟ್​​ ಹೀಗೆ ನಾನಾ ಕಡೆ ಉತ್ಪತ್ತಿಯಾಗುವ ಕಸವನ್ನು ಗೊಬ್ಬರವಾಗಿ ಪರಿವರ್ತಿಸಲು ಯಂತ್ರಗಳನ್ನು ಅಳವಡಿಸಲಾಗಿದೆ. ಎರೆಹುಳು ಗೊಬ್ಬರ, ಒಣ ಎಲೆ ಗೊಬ್ಬರ, ಜೈವಿಕ ಇಂಧನ ಉತ್ಪತ್ತಿ ಘಟಕಗಳು ಕೂಡ ಇಲ್ಲಿವೆ. ಅಲ್ಲದೆ ಮಳೆ ನೀರು ಸಂಗ್ರಹ ಹಾಗೂ ಸೌರ ವಿದ್ಯುತ್ ಘಟಕವನ್ನು ಅಳವಡಿಸಲಾಗಿದೆ.

What training is provided at this center:

ಈ ತರಬೇತಿ ನೀಡಲು ಪರಿಸರ ಸ್ನೇಹಿ ಸಭಾಂಗಣವನ್ನೂ ಸಿದ್ಧಪಡಿಸಲಾಗಿದೆ. ತರಬೇತಿ ಪಡೆದ ಆಸಕ್ತರು ಮನೆಗೆ ಸೂಕ್ತವಾದ ಯಂತ್ರೋಪಕರಣವನ್ನು ಆಯ್ಕೆ ಮಾಡಿಕೊಳ್ಳಬಹುದು. ಯಂತ್ರೋಪಕರಣ ಪೂರೈಕೆದಾರರ ಮಾಹಿತಿ ಕೂಡ ಇಲ್ಲಿ ಲಭ್ಯವಾಗಲಿದೆ.  ಹಸಿಕಸ ಹಾಗೂ ಒಣಕಸವನ್ನು ಮೂಲದಲ್ಲಿಯೇ ವೈಜ್ಞಾನಿಕವಾಗಿ ನಿರ್ವಹಿಸುವ ಬಗ್ಗೆ ಈ ಕಲಿಕಾ ಕೇಂದ್ರದಲ್ಲಿ ಪ್ರಾತ್ಯಕ್ಷಿಕೆ ತೋರಿಸಲಾಗುತ್ತದೆ. ಅದೇ ಕಸವನ್ನು ಗೊಬ್ಬರ, ಜೈವಿಕ ಇಂಧನವಾಗಿ ಪರಿವರ್ತನೆ ಮಾಡುವ ಬಗ್ಗೆ ಮಕ್ಕಳಿಗೆ, ಜನಸಾಮಾನ್ಯರಿಗೆ, ಸಂಘ ಸಂಸ್ಥೆಗಳಿಗೆ ತರಬೇತಿ ಕೊಡಲಾಗುತ್ತದೆ.”ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ಅರಿವು ಮೂಡಿಸುವ ಸ್ವಚ್ಛ ಕಲಿಕಾ ಘಟಕ ಆರಂಭಿಸಲಾಗುತ್ತಿದೆ. ವಿವಿಧ ತ್ಯಾಜ್ಯಗಳಿಂದ ಗೊಬ್ಬರ ತಯಾರು ಮಾಡುವ ಪ್ರಾತ್ಯಕ್ಷಿಕೆ ಮಾಡಲಾಗುತ್ತದೆ. ಇದು ತರಬೇತಿ ರೀತಿ ಕಾರ್ಯನಿರ್ವಹಿಸುತ್ತದೆ. ಬೆಂಗಳೂರಿನ ಹೆಚ್ಎಸ್ಆರ್​ ಲೇಔಟ್ ಅಲ್ಲಿ ಕಲಿಕಾ ಕೇಂದ್ರ ಬಿಟ್ಟರೆ ದಾವಣಗೆರೆಯಲ್ಲಿ ಆರಂಭವಾಗಿದೆ. ಉತ್ಪಾದನೆ ಆದ ತ್ಯಾಜ್ಯ ಜೈವಿಕ ಇಂಧನ, ಗೊಬ್ಬರ ತಯಾರಿಸಬಹುದು, ಇದನ್ನು ಜನವರಿಯಲ್ಲಿ ಉದ್ಘಾಟನೆ ಮಾಡಲಾಗುತ್ತಿದ್ದು, ಇಲ್ಲಿ ಗೊಬ್ಬರ ತಯಾರು ಮಾಡು ಯಂತ್ರ ಅಳವಡಿಕೆ ಮಾಡಲಾಗಿದೆ” ಎಂದು ಪಾಲಿಕೆಯ ಪರಿಸರ ತಾಂತ್ರಿಕ ಸಹಾಯಕ ಜಗದೀಶ್ ಮಾಹಿತಿ ನೀಡಿದ್ದಾರೆ.‌

For biofuel vehicles, waste vehicles can be used for:

“ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜೆಹೆಚ್ ಬಡಾವಣೆಯಲ್ಲಿ ಸ್ವಚ್ಛ ಕಲಿಕಾ ಕೇಂದ್ರ ನಿರ್ಮಾಣ ಮಾಡಲಾಗಿದೆ. ರಾಜ್ಯ ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾಗಿದ್ದು, ಬಿಬಿಎಂಪಿ, ಬಿಟ್ಟರೇ ರಾಜ್ಯದಲ್ಲಿ ದಾವಣಗೆರೆಯಲ್ಲಿ ಎರಡನೇ ಕೇಂದ್ರ ಆರಂಭಕ್ಕೆ ಸಿದ್ಧವಾಗಿದೆ. ಹಸಿ ಕಸ, ಒಣ ಕಸ ಬೇರ್ಪಡಿಸಿ, ಅದು ಹೇಗೆ ಉಪಯೋಗವಾಗಲಿದೆ, ಬಯೋ ಗ್ಯಾಸ್​, ಗಿಡಗಳಿಗೆ ಹಸಿ ಗೊಬ್ಬರ, ಪ್ಲಾಸ್ಟಿಕ್​ ಯಾವ ರೀತಿ ನಿವಾರಣೆ ಮಾಡಬೇಕು ಎಂದು ಶಾಲಾ ಮಕ್ಕಳಿಗೆ ಜನಸಾಮಾನ್ಯರಿಗೆ, ಸಂಘ ಸಂಸ್ಥೆಗಳಿಗೆ ತರಬೇತಿ ನೀಡಲಾಗುವುದು. ತ್ಯಾಜ್ಯ ಪುಡಿ ಮಾಡಿ ಯಂತ್ರದಲ್ಲಿ ಹಾಕಿದರೆ ಗ್ಯಾಸ್ ಉತ್ಪಾದನೆ ಆಗುತ್ತದೆ. ಅದೇ ಜೈವಿಕ ಇಂಧನ ವಾಹನಗಳಿಗೆ, ಕಸದ ವಾಹನಗಳಿಗೆ ಉಪಯೋಗಿಸಬಹುದಾಗಿದೆ. ಅಡುಗೆ ಅನಿಲ ವಿದ್ಯುತ್​ಗೂ ಉಪಯೋಗ ಆಗಲಿದ್ದು, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್​ ಅವರಿಂದ ಉದ್ಘಾಟನೆ ಆಗಲಿದೆ” ಎಂದರು. “ಶೈಕ್ಷಣಿಕ ಪ್ರವಾಸದ ಮಾದರಿಯಲ್ಲಿ ಮಕ್ಕಳನ್ನು ಈ ಕೇಂದ್ರಕ್ಕೆ ಕರೆತರಲು ಅವಕಾಶವಿದೆ. ಶಾಲಾ – ಕಾಲೇಜು ಹಂತದಲ್ಲಿಯೇ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ” ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SPECIAL VILLAGE SAGA : 20 ಕುಟುಂಬ, 60 ಜನರಿರುವ ಒಂದು ಹಳ್ಳಿಯ ಕಥೆ: ಸ್ವಾವಲಂಬನೆಯ ಯಶೋಗಾಥೆ

Nalgonda, Telangana News: ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು...

ULLAL BANK ROBBERY : ಎಲ್ಲ ಟೋಲ್ಗಳಲ್ಲಿ ತಪಾಸಣೆ ಮಾಡುವಂತೆ ಸಿಎಂ ಸೂಚನೆ

Mangalore News: ಕೋಟೆಕಾರು ULLAL BANK ROBBERY ಪ್ರಕರಣ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ, ಎಲ್ಲ ಟೋಲ್​ಗಳಲ್ಲಿ ತಪಾಸಣೆ ಹಾಗೂ ಕೇರಳ ಗಡಿಯಲ್ಲಿನ ಸಿಸಿ...

HIGH COURT : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ

Bangalore News: HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...

SAIF ALI KHAN : ಸೈಫ್ ಐಸಿಯುನಿಂದ ಹೊರಕ್ಕೆ, ತನಿಖೆಗೆ 20 ಪೊಲೀಸ್ ತಂಡಗಳ ರಚನೆ

Mumbai (Maharashtra) News: ಬಾಲಿವುಡ್​​ ನಟ SAIF ಅಲಿ ಖಾನ್ ಅವರ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.ಈ ಘಟನೆ ಬಾಲಿವುಡ್ ಮಾತ್ರವಲ್ಲದೇ...