spot_img
spot_img

TALKS WITH FARMERS:ಸೌಹಾರ್ದಯುತವಾಗಿ ಕೊನೆಗೊಂಡ ಕೇಂದ್ರ ಸರ್ಕಾರ, ರೈತ ಸಂಘಟನೆಗಳ ಮಾತುಕತೆ

spot_img
spot_img

Share post:

Chandigarh News:

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಚೌಹಾಣ್, “ಮುಂದಿನ ಸಭೆ ಮಾರ್ಚ್ 19ರಂದು ನಡೆಯಲಿದೆ” ಎಂದು ಹೇಳಿದರು. ಚೌಹಾಣ್ ಸೇರಿದಂತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಒಳಗೊಂಡ ತಂಡದ ಸದಸ್ಯರು ಪಂಜಾಬ್ ಸರ್ಕಾರದ ನಿಯೋಗದೊಂದಿಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್​ಪಿ) ಗೆ ಕಾನೂನು ಖಾತರಿ ಸೇರಿದಂತೆ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳ ಬಗ್ಗೆ ಎರಡು FARMERS ವೇದಿಕೆಗಳ 28 ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮೂವರು ಸದಸ್ಯರ ಕೇಂದ್ರ ಸರಕಾರದ ನಿಯೋಗ ಮತ್ತು ಪ್ರತಿಭಟನಾನಿರತ FARMERS ಸಂಘಟನೆಗಳ ನಡುವಿನ ಎರಡನೇ ಸುತ್ತಿನ ಸಭೆ ಶನಿವಾರ ಮಧ್ಯರಾತ್ರಿ ಮೂರು ಗಂಟೆಗಳ ನಂತರ ಸಕಾರಾತ್ಮಕ ಮತ್ತು ಸೌಹಾರ್ದಯುತ ರೀತಿಯಲ್ಲಿ ಮುಕ್ತಾಯಗೊಂಡಿದೆ.ರೈತರನ್ನುದ್ದೇಶಿಸಿ ಮಾತನಾಡಿದ ಚೌಹಾಣ್, “ಸರ್ಕಾರವು FARMERS ಕಲ್ಯಾಣಕ್ಕೆ ಬದ್ಧವಾಗಿದೆ ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ನಿಯಮಿತವಾಗಿ ಅಗತ್ಯ ನೀತಿಗಳನ್ನು ರೂಪಿಸುತ್ತಿದೆ” ಎಂದು ಹೇಳಿದರು.FARMERS ಮುಖಂಡರು ಸರ್ಕಾರದ ಮುಂದೆ ತಮ್ಮ ಬೇಡಿಕೆಗಳನ್ನು ಪುನರುಚ್ಚರಿಸಿದ್ದಾರೆ.

ಬೇಡಿಕೆಗಳಿಗೆ ಸಂಬಂಧಿಸಿದಂತೆ ಅಗತ್ಯ ದತ್ತಾಂಶ ಹಾಗೂ ಮಾಹಿತಿಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರ FARMERS ಮುಖಂಡರಿಗೆ ಕೋರಿದೆ. ಅದಕ್ಕೆ FARMERS ಮುಖಂಡರು ಒಪ್ಪಿಕೊಂಡಿದ್ದು, ಈ ದತ್ತಾಂಶಗಳನ್ನು ಆಧರಿಸಿ ಮಾತುಕತೆಗಳು ಮುಂದುವರಿಯಲಿವೆ.”ನರೇಂದ್ರ ಮೋದಿ ನೇತೃತ್ವದ ಸರ್ಕಾರವು FARMERS ಕಲ್ಯಾಣಕ್ಕೆ ಬದ್ಧವಾಗಿದೆ. ನಾವು ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವನ್ ಸಿಂಗ್ ಪಂಧೇರ್ ಅವರೊಂದಿಗೆ ಚರ್ಚಿಸಿ ಅವರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದೇವೆ.

ಚರ್ಚೆಗಳು ಮುಂದುವರಿಯಲಿದ್ದು, ಮುಂದಿನ ಸಭೆ ಮಾರ್ಚ್ 19ರಂದು ನಡೆಯಲಿದೆ” ಎಂದು ಚೌಹಾಣ್ ತಿಳಿಸಿದರು.ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕಳೆದ ವರ್ಷ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ಗಡಿಯ ನಡುವಿನ ಗಡಿ ಬಿಂದುಗಳಾದ ಶಂಭು ಮತ್ತು ಖನೌರಿಯಲ್ಲಿ ಧರಣಿ ನಡೆಸುತ್ತಿವೆ.ಪಂಜಾಬ್​​ ಸರ್ಕಾರದ ಹಣಕಾಸು ಸಚಿವ ಹರ್ಪಾಲ್ ಚೀಮಾ, ಕೃಷಿ ಸಚಿವ ಗುರ್ಮೀತ್ ಸಿಂಗ್ ಖುಡಿಯಾನ್ ಮತ್ತು ಆಹಾರ ಮತ್ತು ಸರಬರಾಜು ಸಚಿವ ಲಾಲ್ ಚಂದ್ ಕಟಾರುಚಕ್ ನಿಯೋಗದ ಮುಂದಾಳತ್ವ ವಹಿಸಿದ್ದರು.

 

ಇದನ್ನು ಓದಿರಿ :Signal Now Lets You Transfer Old Messages To Linked Desktop And iPad Apps: How To Sync Signal Chats

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...