spot_img
spot_img

ಟಿಬಿ ಡ್ಯಾಂ : ತ್ರಿವಳಿ ರಾಜ್ಯ ಸರಕಾರಗಳ ಅನುಮತಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹೊಸಪೇಟೆ (ವಿಜಯನಗರ) : ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್‌ಗೇಟ್‌ ಅಳವಡಿಸಲು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯ ಸರಕಾರಗಳ ಅನುಮತಿ ಸಿಕ್ಕರೆ ಮುಂದಿನ ಬೇಸಿಗೆಗೆ ಅಳವಡಿಸುವ ಸಾಧ್ಯತೆ ಇದೆ.

ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಮತ್ತು ಕೇಂದ್ರ ಜಲ ಸಂಪ್ಮನೂಲ ಇಲಾಖೆಯ ಜಂಟಿ ಕಾರ್ಯದರ್ಶಿಗಳು ಸದಸ್ಯರಾಗಿದ್ದಾರೆ.

ತಾಂತ್ರಿಕ ತನಿಖಾ ಸಮಿತಿಯ ವರದಿ ಜತೆಗೆ ಹೊಸ ಕ್ರಸ್ಟ್‌ಗೇಟ್‌ ಅಳವಡಿಸುವ ಕುರಿತು ಕೆಲವು ಅಂಶಗಳನ್ನು ಸೇರಿಸಿ ಅನುಮೋದನೆಗಾಗಿ ತುಂಗಭದ್ರಾ ಮಂಡಳಿ ಕಾಯುತ್ತಿದೆ.

ಕಳೆದ ಎರಡು ತಿಂಗಳ ಹಿಂದೆ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಕಳಚಿ ಬಿದ್ದ ಪರಿಣಾಮ ಹಳೆಯ ಕ್ರಸ್ಟ್‌ಗೇಟ್‌ಗಳನ್ನು ಬದಲಿಸಿ ಹೊಸ ಗೇಟ್‌ ಅಳವಡಿಸಲು ಯಾವುದೇ ಅಡ್ಡಿ ಇಲ್ಲದೆ ಶೀಘ್ರ ಅನುಮತಿ ಸಿಗಲಿದೆ.

ಗೇಟ್‌ಗಳನ್ನು ಬದಲಿಸುವ ಪ್ರಕ್ರಿಯೆ ಒಂದು ತಿಂಗಳಲ್ಲಿ ಪೂರ್ಣಗೊಳಿಸಬಹುದಾಗಿದೆ.

ಈಗಿರುವ 45 ಟನ್‌ ತೂಕದ 20 ಅಡಿ ಎತ್ತರದ ಹಳೆಯ ಗೇಟ್‌ಗಳನ್ನು ಎರಡು ತುಂಡುಗಳ ರೂಪದಲ್ಲಿ ವೆಲ್ಡಿಂಗ್‌ ಮಾಡಲಾಗಿದೆ.

ಇದೇ ರೀತಿ ಎರಡು ತುಂಡುಗಳನ್ನು ಸೇರಿಸಿ ಗೇಟ್‌ ನಿರ್ಮಿಸಿ ಅಳವಡಿಸುವ ಕುರಿತು ಗಂಭೀರ ಚಿಂತನೆ ನಡೆದಿದೆ.

ಏಪ್ರಿಲ್‌ ವೇಳೆಗೆ ಜಲಾಶಯದ ನೀರಿನ ಮಟ್ಟ ಅತಿ ಕಡಿಮೆ ಮಟ್ಟಕ್ಕೆ ಇಳಿದಿರುತ್ತದೆ. ಹಾಗಾಗಿ ಜುಲೈವರೆಗೂ ಕಾಮಗಾರಿ ನಡೆಸಲು ಕಾಲಾವಕಾಶ ದೊರಕುತ್ತದೆ.

ಮುಂಗಾರಿನಲ್ಲಿ ಗಾಳಿಯಿಂದ ಸೃಷ್ಟಿಯಾಗುವ ಅಲೆಗಳ ಹೊಡೆತಕ್ಕೂ ಈ ಗೇಟ್‌ಗಳ ಸಾಮರ್ಥ್ಯ ಕುಂದಿದೆ ಎಂಬುದು ತಜ್ಞರು ತಿಳಿಸಿದ್ದಾರೆ.

ಸುರಕ್ಷತೆ ದೃಷ್ಟಿಯಿಂದ 1632 ಅಡಿಗಿಂತ ಕಡಿಮೆ ಮಟ್ಟ ಕಾಪಾಡಲಾಗುತ್ತಿದೆ. ಕ್ರಸ್ಟ್‌ಗೇಟ್‌ ಬದಲಿಸುವ ವೇಳೆ ಸ್ಟಾಪ್‌ಲಾಗ್‌ ಅಳವಡಿಕೆ ಅವಶ್ಯಕತೆ ಇಲ್ಲ ಎನ್ನಲಾಗಿದೆ.

ಒಂದು ಕ್ರಸ್ಟ್‌ಗೇಟ್‌ ನಿರ್ಮಾಣ ಮತ್ತು ಅಳವಡಿಕೆಗೆ 3 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ.

ರಾಜ್ಯ ಸರಕಾರ ಮನಸ್ಸು ಮಾಡಿದರೆ ಮಾತ್ರ ತುಂಗಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಲಕ್ಷಾಂತರ ರೈತರು, ನೂರಾರು ಉದ್ಯಮಿಗಳ ಬಾಳಲ್ಲಿಹೊಸ ಭರವಸೆ ಮೂಡಲಿದೆ.

ತುಂಗಭದ್ರಾ ಜಲಾಶಯದ ಹಳೆಯ ಕ್ರಸ್ಟ್‌ಗೇಟ್‌ಗಳನ್ನು ಬದಲಿಸಿ, ಹೊಸ ಕ್ರಸ್ಟ್‌ಗೇಟ್‌ಗಳನ್ನು ಅಳವಡಿಸಲು ಅನುಮೋದನೆ ಸಿಕ್ಕ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಓ.ಆರ್‌.ಕೆ. ರೆಡ್ಡಿ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Samantha News: ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ...

A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

Transfer or Retirement Fix! News ತಿರುಪತಿ ಲಡ್ಡು ಪ್ರಸಾದದ ಅಪವಿತ್ರ ವಿವಾದ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. Laddu ವಿವಾದದ ಬಳಿಕ ತಿರುಮಲ ತಿರುಪತಿ...

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...