spot_img
spot_img

ಮಹಿಳೆಯ ಮೃತದೇಹವನ್ನು 30 ಕ್ಕೂ ಹೆಚ್ಚು ಪೀಸ್‌, ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾರೆ.! ಭಯಾನಕ ದೃಶ್ಯ ….

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಮಹಿಳೆಯ ಮೃತದೇಹವನ್ನು 30 ಕ್ಕೂ ಹೆಚ್ಚು ಪೀಸ್‌, ಪೀಸ್‌ ಮಾಡಿ ಫ್ರಿಜ್‌ನಲ್ಲಿ ಮುಚ್ಚಿಟ್ಟಿದ್ದ ಭಯಾನಕ ಘಟನೆ ವೈಯಾಲಿಕಾವಲ್‌ನಲ್ಲಿ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆಯೇ ಈ ಕೊಲೆ ನಡೆದಿದೆ. ಮನೆಯಿಂದ ಬರುತ್ತಿದ್ದ ವಾಸನೆಯನ್ನು ಗಮನಿಸಿ ಅಕ್ಕ-ಪಕ್ಕದ ಜನರು ಮಹಿಳೆಯ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ಸಂಬಂಧಿಕರು ಬೀಗ ಹೊಡೆದು ನೋಡಿದಾಗ ಭಯಾನಕ ಕೃತ್ಯ ಬಯಲಾಗಿದೆ.

ಇದನ್ನೂ ಓದಿ : ಕೊಹ್ಲಿಗೆ ಸಿಕ್ಕಷ್ಟು ಅವಕಾಶ ಕೆ.ಎಲ್.ರಾಹುಲ್‌ಗೆ ಸಿಗದಿರಬಹುದು. 2ನೇ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ.!

ವೈಯಾಲಿಕಾವಲ್‌ ಮುನೇಶ್ವರ್‌ ಬ್ಲಾಕ್‌ನಲ್ಲಿರುವ ಮನೆಯಲ್ಲಿ ಯುವತಿಯ ಬರ್ಬರ ಹತ್ಯೆಯಾಗಿದೆ. ಫಸ್ಟ್‌ ಫ್ಲೋರ್‌ನಲ್ಲಿರುವ 1 BHK ಮನೆಯಲ್ಲಿ 26 ವಯಸ್ಸಿನ ಮಹಿಳೆ ವಾಸವಿದ್ದರು. ಹಂತಕರು ಯುವತಿಯ ಕೊಲೆ ಮಾಡಿ ದೇಹವನ್ನು ತುಂಡು, ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿಟ್ಟು ಪರಾರಿಯಾಗಿದ್ದಾರೆ.

165 ಲೀಟರ್ ಫ್ರಿಡ್ಜ್‌ನಲ್ಲಿ ಮಹಿಳೆಯ ಮೃತದೇಹದ ತುಂಡು ಇಡಲಾಗಿತ್ತು. ಮೃತ ಮಹಿಳೆಯನ್ನು ಮಹಾಲಕ್ಷ್ಮೀ ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಮಹಾಲಕ್ಷ್ಮೀ ಅವರು ನೆಲಮಂಗಲ‌ದ ಹುಕುಂ ಸಿಂಗ್ ರಾಣಾ ಎಂಬುವವರನ್ನು ಮದುವೆಯಾಗಿದ್ದಾರೆ. ಆದರೆ ಮಹಾಲಕ್ಷ್ಮೀ ತನ್ನ ಪತಿ, ಮಗನನ್ನು ಬಿಟ್ಟು ವೈಯಾಲಿಕಾವಲ್‌ನ ಮನೆಯಲ್ಲಿ ವಾಸವಿದ್ದರು.

ಇದನ್ನೂ ಓದಿ : ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ : BJP ಶಾಸಕ.!

ಮೃತ ಮಹಿಳೆಯ ಗಂಡ ನೆಲಮಂಗಲದಲ್ಲಿ ಇದ್ದಾನೆ. ಮಗು ಗಂಡನ ಜೊತೆಯಲ್ಲೇ ಇದೆ. ಮದುವೆಯಾಗಿ ಹಲವು ವರ್ಷಗಳ ಬಳಿಕ ಮಹಿಳೆ ಗಂಡನಿಂದ ಬೇರೆಯಾಗಿದ್ದಾಳೆ. ಪತಿಯಿಂದ ಬೇರೆಯಾದ ಬಳಿಕ ಈಕೆ ಒಬ್ಬಳೇ ವಾಸವಿದ್ದಾಳೆ. ಮನೆಗೆ ಓರ್ವ ಯುವಕ ಡ್ರಾಪ್ ಮಾಡುವುದು ಪಿಕ್ ಅಪ್‌ ಮಾಡುವ ಕೆಲಸ ಮಾಡ್ತಿದ್ದನಂತೆ. ಒಬ್ಬಳೇ ಮನೆಯಲ್ಲಿದ್ದಾಗ ಮಹಿಳೆಯ ಬರ್ಬರ ಹತ್ಯೆಯಾಗಿದೆ.

ಬೆಂಗಳೂರಿನ ಖಾಸಗಿ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಾಲಕ್ಷ್ಮೀ  ಅವರು ಕಳೆದ ಸೆಪ್ಟೆಂಬರ್‌ 2 ರಿಂದ ಯಾರ ಫೋನ್ ಸ್ವೀಕರಿಸುತ್ತಿರಲಿಲ್ಲ. ಇಂದು ಬಾಗಿಲು ತೆರೆದಾಗ ಫ್ರಿಡ್ಜ್‌ನಿಂದ ಹುಳಗಳು ಹೊರಗೆ ಬರುತ್ತಾ ಇತ್ತು. ಮೇಲ್ನೋಟಕ್ಕೆ ಸುಮಾರು 19 ದಿನಗಳ ಹಿಂದೆಯೇ ಮಹಿಳೆಯ ಕೊಲೆ ನಡೆದಿರೋ ಶಂಕೆ‌ ವ್ಯಕ್ತವಾಗಿದೆ. ಮಹಿಳೆಯ ಮೃತದೇಹವನ್ನು 30 ರಿಂದ 35 ತುಂಡುಗಳಾಗಿ ಕತ್ತರಿಸಿದ್ದಾರೆ. ಸ್ಥಳಕ್ಕೆ FSL ಹಾಗೂ ವೈದ್ಯಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

KIREN RIJIJU WAQF BILL:ವಕ್ಫ್ ತಿದ್ದುಪಡಿ ಮಸೂದೆಗೆ ಚಂದ್ರಬಾಬು, ನಿತೀಶ್, ಮುಸ್ಲಿಮ್ ಸಂಸದರಿಂದ ಬೆಂಬಲ

Srinagar (Jammu-Kashmir) News : ಬಿಜೆಪಿ ಹೊರತಾಗಿ ಎನ್​ಡಿಎ ಕೂಟದಲ್ಲಿ WAQF ಮಸೂದೆ ತಿದ್ದುಪಡಿಗೆ ಸಮ್ಮತಿ ಇಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ...

AMARTYA SEN DESCRIBE MANMOHAN:ಮನಮೋಹನ್ ಸಿಂಗ್ ಒಬ್ಬ ಮಹಾನ್ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ

Kolkata (West Bengal) News: ಪಶ್ಚಿಮ ಬಂಗಾಳದ ಬಿರ್ಭೂಮ್​​ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, MANMOHAN​ ಸಿಂಗ್​ ಮತ್ತು ನಾನು ಕೇಂಬ್ರಿಡ್ಜ್‌ನಲ್ಲಿ ಓದುತ್ತಿರುವ ವೇಳೆ ಉತ್ತಮ...

H D DEVE GOWDA:ರಾಜ್ಯದಲ್ಲಿ ಕೃಷ್ಣ, ಕಾವೇರಿ, ಗೋದಾವರಿ ನದಿ ಜೋಡಣೆಗೆ ಎಲ್ಲರೂ ಧ್ವನಿ ಎತ್ತಬೇಕಿದೆ

Bangalore News: ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ''ರಾಜ್ಯಸಭೆಯಲ್ಲಿ ಗೋದಾವರಿ, ಕೃಷ್ಣ, ಕಾವೇರಿ ನದಿ ಜೋಡಣೆ ಬಗ್ಗೆ ತಮಿಳುನಾಡಿನ ರಾಜ್ಯಸಭಾ...

MAHINDRA ELECTRIC SUV BOOKING OPEN:ಅಬ್ಬಬ್ಬಾಂದ್ರೆ ಎಷ್ಟಿರಬಹುದು?

Mahindra Electric SUV Booking Open News: ಇವುಗಳನ್ನು ನವೆಂಬರ್ 2024ರಲ್ಲಿ 'XEV 9E' ಮತ್ತು 'BE 6' ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿತ್ತು. ಎಲೆಕ್ಟ್ರಿಕ್...