spot_img
spot_img

ಜನಸಂಖ್ಯಾ ಬೆಳವಣಿಗೆ ದರ ಕನಿಷ್ಠ 3 ಮಕ್ಕಳನ್ನಾದರೂ ಹೆರಬೇಕು : ಭಾಗವತ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನಾಗ್ಪುರ(ಮಹಾರಾಷ್ಟ್ರ): ದಂಪತಿ ಕನಿಷ್ಠ ಮೂರು ಮಕ್ಕಳನ್ನಾದರೂ ಹೆರಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

ಭಾರತದ ಜನಸಂಖ್ಯಾ ವಿಚಾರ ಕುರಿತಂತೆ ಆರ್​ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಜನಸಂಖ್ಯಾ ಕುಸಿತ ಕಳವಳಕಾರಿ ವಿಷಯ. ಜನಸಂಖ್ಯಾ ಬೆಳವಣಿಗೆಯ ದರ ಶೇಕಡಾ 2.1ಕ್ಕಿಂತ ಕಡಿಮೆಯಾದರೆ ಅದು ಸಮಾಜದ ಉಳಿವಿಗೆ ಬಹುದೊಡ್ಡ ಅಪಾಯವಾಗುತ್ತದೆ. ಜನಸಂಖ್ಯಾ ಬೆಳವಣಿಗೆ ದರದ ಕುಸಿತವು ಸಮಾಜಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ಜನಸಂಖ್ಯೆ ಕಡಿಮೆಯಾಗುತ್ತಿರುವುದು ಕಳವಳಕಾರಿ ವಿಷಯವಾಗಿದೆ. ಲೋಕಸಂಖ್ಯಾ ಶಾಸ್ತ್ರದ ಪ್ರಕಾರ ಯಾವುದೇ ಸಮಾಜದ ಜನಸಂಖ್ಯಾ ಬೆಳವಣಿಗೆ ದರವು 2.1ಕ್ಕಿಂತ ಕಡಿಮೆಯಾದರೆ ಅಂಥ ಸಮಾಜ ತಾನಾಗಿಯೇ ನಾಶವಾಗುತ್ತದೆ. ಅದನ್ನು ಬೇರೆ ಯಾರೋ ನಾಶಪಡಿಸುವ ಅಗತ್ಯವೇ ಇಲ್ಲ ನಾಗ್ಪುರದಲ್ಲಿ ನಡೆದ ‘ಕಠಾಳೆ ಕುಲ್ (ಕುಲ) ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ಪ್ರತಿ ಕುಟುಂಬವು ಒಂದು ಘಟಕವಾಗಿದ್ದು, ‘ಕುಟುಂಬ’ (ಕುಟುಂಬ) ಸಮಾಜದ ಅವಿಭಾಜ್ಯ ಅಂಗವಾಗಿದೆ ಎಂದರು.

1998 ಅಥವಾ 2002ರ ಸುಮಾರಿಗೆ ರೂಪಿಸಲಾದ ಭಾರತದ ಜನಸಂಖ್ಯಾ ನೀತಿಯು ಜನಸಂಖ್ಯಾ ಬೆಳವಣಿಗೆಯ ದರವು 2.1ಕ್ಕಿಂತ ಕಡಿಮೆ ಇರಬಾರದು ಎಂದು ಹೇಳುತ್ತದೆ ಎಂದು ಆರ್​ಎಸ್ಎಸ್ ಮುಖ್ಯಸ್ಥ ಭಾಗವತ್ ನುಡಿದರು.

ನಮಗೆ ಎರಡಕ್ಕಿಂತ ಹೆಚ್ಚು ಮಕ್ಕಳು ಬೇಕು. ಅಂದರೆ ಮೂರು (ಜನಸಂಖ್ಯಾ ಬೆಳವಣಿಗೆಯ ದರವಾಗಿ) ಮಕ್ಕಳನ್ನು ಹೆರಬೇಕು. ಜನಸಂಖ್ಯಾ ವಿಜ್ಞಾನ ಕೂಡ ಇದನ್ನೇ ಹೇಳುತ್ತದೆ. ಸಮಾಜ ಉಳಿಯಬೇಕಾದರೆ ಈ ಪ್ರಮಾಣದ ಜನಸಂಖ್ಯಾ ಬೆಳವಣಿಗೆ ದರ ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಜನಸಂಖ್ಯೆ ಕುರಿತಾಗಿ ಆರ್​ಎಸ್ಎಸ್ ಮುಖ್ಯಸ್ಥರ ಈ ಹೇಳಿಕೆಗಳನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಒಂದು ವರದಿಯ ಪ್ರಕಾರ, ಹಿಂದೂಗಳ ಜನಸಂಖ್ಯೆಯು ಶೇಕಡಾ 7.8ರಷ್ಟು ಕಡಿಮೆಯಾಗಿದೆ.

ಸ್ವಾತಂತ್ರ್ಯದ ನಂತರ, 1950ರಲ್ಲಿ, ಭಾರತದಲ್ಲಿ ಜನಸಂಖ್ಯಾ ಬೆಳವಣಿಗೆಯ ದರವು 6.2ರಷ್ಟಿತ್ತು. ಆದರೆ ಈಗ ಅದು 2.2ಕ್ಕೆ ಇಳಿದಿದೆ. ಇದು ಹೀಗೆಯೇ ಮುಂದುವರಿದರೆ, 2050ರ ವೇಳೆಗೆ ಭಾರತದ ಜನಸಂಖ್ಯಾ ಬೆಳವಣಿಗೆಯ ದರ 1.3ಕ್ಕೆ ಕುಸಿಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಮೋಹನ್ ಭಾಗವತ್ ಅವರ ಹೇಳಿದರು.

ಅದೇ ಸಮಯದಲ್ಲಿ ನೆರೆಯ ದೇಶಗಳ ಜನಸಂಖ್ಯೆ ಹೆಚ್ಚಾಗುತ್ತಿದೆ. ಒಂದು ವರದಿಯ ಪ್ರಕಾರ, ಭಾರತದಲ್ಲಿ ಜನಸಂಖ್ಯಾ ಫಲವತ್ತತೆ ದರವು ನಿರಂತರವಾಗಿ ಕುಸಿಯುತ್ತಿದೆ.

ಇದಕ್ಕೂ ಮುನ್ನ ನಾಗ್ಪುರದಲ್ಲಿ ನಡೆದ ದಸರಾ ರ್ಯಾಲಿಯಲ್ಲಿ ಮಾತನಾಡಿದ್ದ ಭಾಗವತ್, ಭಾರತದಲ್ಲಿ ಎಲ್ಲಾ ಸಮುದಾಯಗಳಿಗೆ ಸಮಾನವಾಗಿ ಅನ್ವಯವಾಗುವ ಉತ್ತಮವಾಗಿ ರೂಪಿಸಲಾದ ಜನಸಂಖ್ಯಾ ನೀತಿಯ ಅಗತ್ಯವಿದೆ ಎಂದು ಹೇಳಿದರು.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SHIVASENA SUPPORT TO BJP : ಬಿಜೆಪಿ ಅಭ್ಯರ್ಥಿಗಳಿಗೆ ಶಿಂಧೆ ಬಣದ ಶಿವಸೇನೆ ಬೆಂಬಲ ಘೋಷಣೆ

New Delhi News: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP...

SIGANDUR BRIDGE : ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆShimoga News: ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ...

Shivamogga News: ಸಾಗರ ತಾಲೂಕಿನ SIGANDUR BRIDGE ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ...

HOW TO AWARE OF CYBER FRAUD : ಹಾಗಿದ್ರೆ ಮಾತ್ರ ಸೈಬರ್ ವಂಚನೆಯಿಂದ ಬಚಾವ್ ಆಗಲು ಸಾಧ್ಯ

Hyderabad News: ನಿಜವೆಂದು ತೋರುವ ಈ ನಕಲಿ ವೆಬ್​​ಸೈಟ್​ ಪತ್ತೆ ಮಾಡುವುದು ಹೇಗೆ, ಎಚ್ಚರಿಕೆ ಹೇಗೆ ವಹಿಸಬೇಕು, ವಂಚನೆಗೆ ಗುರಿಯಾಗದಂತೆ ಇರುವುದು ಹೇಗೆ ಎಂಬ ಇಲ್ಲಿದೆ...

COFFEE EXPORTS : 1.29 ಶತಕೋಟಿ ಡಾಲರ್ಗೆ ತಲುಪಿದ ಭಾರತದ ಕಾಫಿ ರಫ್ತು

New Delhi News: ಭಾರತದ COFFEE ರಫ್ತು ದ್ವಿಗುಣಗೊಂಡಿದೆ. ಈ ಮೂಲಕ ದೇಶದ ರಫ್ತಿನ ಪ್ರಮಾಣ ಹೆಚ್ಚಿಸಲು ತನ್ನದೇ ಕೊಡುಗೆ ನೀಡಿದೆ.ಉತ್ತಮ ಗುಣಮಟ್ಟ ಮತ್ತು ಅನನ್ಯ...