spot_img
spot_img

ನಾಗಮಂಗಲ ಪರಿಸ್ಥಿತಿ ಶಾಂತಿಯುತವಾಗಿದ್ದು, ಶಾಂತಿ ಸಭೆ ನಡೆಸಲಾಗುತ್ತಿದೆ; ಸಚಿವ ಪರಮೇಶ್ವರ ಹೇಳಿದ್ದಾರೆ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹಿಂಸಾಚಾರ ಪೀಡಿತ ನಾಗಮಂಗಲ ಪಟ್ಟಣದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.

ವಿರೋಧ ಪಕ್ಷಗಳು ಈ ಪ್ರಕರಣವನ್ನು “ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ” ಎಂದು ವಾಗ್ದಾಳಿ ನಡೆಸಿದ ಪರಮೇಶ್ವರ, ಘಟನೆಯಿಂದಾಗಿ ಜೀವನೋಪಾಯಕ್ಕೆ ತೊಂದರೆಯಾದವರಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಯೋಚಿಸುತ್ತಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜಣೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಬುಧವಾರ ರಾತ್ರಿ ಹಲವು ಅಂಗಡಿಗಳು ಮತ್ತು ವಾಹನಗಳನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಬೆಳ್ಳುಳ್ಳಿ ತಿಂದರೆ ಕ್ಯಾನ್ಸರ್ ರೋಗ ಬರುತ್ತದೆ. ಶಾಕಿಂಗ್ ನ್ಯೂಸ್ 

ಘಟನೆ ಸಂಬಂಧ ಪೊಲೀಸ್ ಇನ್ಸ್‌ಪೆಕ್ಟರ್ ರನ್ನು ಅಮಾನತುಗೊಳಿಸಲಾಗಿದೆ. ನಾವು ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಘಟನೆಗಳು ನಡೆದರೆ ಅದಕ್ಕೆ ಅವರೇ ಹೊಣೆ ಎಂದು ನಾವು ಹೇಳಿದ್ದೆವು. ಇನ್ಸ್‌ಪೆಕ್ಟರ್‌ ನಿರ್ಲಕ್ಷ್ಯ ತೋರಿದ ಕಾರಣ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಯುತ್ತಿದೆ. ‘ವಾಸ್ತವಾಂಶ’ಗಳ ಕುರಿತು ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಐಜಿ(ಪೋಲೀಸ್ ಇನ್ಸ್ಪೆಕ್ಟರ್ ಜನರಲ್) ಮತ್ತು ಇತರ ಹಿರಿಯ ಅಧಿಕಾರಿಗಳು ಅಲ್ಲಿ ಮೊಕ್ಕಾಂ ಹೂಡಿದ್ದಾರೆ ಮತ್ತು ಮುಂದೆ ಏನೂ ಆಗದಂತೆ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಈಗ ಪರಿಸ್ಥಿತಿ ಶಾಂತಿಯುತವಾಗಿದ್ದು, ಶಾಂತಿ ಸಭೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಹಿಂಸಾಚಾರ ಪೂರ್ವ ಯೋಜಿತವೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ತನಿಖೆಗೆ ಆದೇಶಿ ಸಲಾಗಿದೆ ಮತ್ತು ವರದಿ ಬಂದ ನಂತರ ವಿಷಯ ತಿಳಿಯಲಿದೆ”…. ಕಾನೂನನ್ನು ಕೈಗೆ ತೆಗೆದುಕೊಳ್ಳಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಗಣಪತಿ ಹಬ್ಬವಾಗಲಿ ಅಥವಾ ಇನ್ನಾವುದೇ ಹಬ್ಬವಾಗಲಿ ಯಾರಾದರೂ ಅನಗತ್ಯ ಗೊಂದಲ ಅಥವಾ ಅಶಾಂತಿ ಸೃಷ್ಟಿಸಿದರೆ ಅವರನ್ನು ಬಿಡುವುದಿಲ್ಲ ಮತ್ತು ಕಾನೂನು ಪ್ರಕಾರ ಅವರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ತೆಗೆದುಕೊಳ್ಳುವುದಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ:ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಪರೀಕ್ಷೆ ಇಲ್ಲದೆ, 3 ಸಾವಿರಕ್ಕೂ ಅಧಿಕ ಜಾಬ್ಸ್ ಲಭ್ಯ..!

ಇಂತಹ ಘಟನೆಗೆ ಓಲೈಕೆ ರಾಜಕಾರಣ  ಎಂಬ ಆರೋಪವನ್ನು ತಳ್ಳಿಹಾಕಿದ ಗೃಹ ಸಚಿವರು, “ನಮಗೆ ಅದರ ಅಗತ್ಯವಿಲ್ಲ.” ಎಂದರು ಮತ್ತು ಘಟನೆ “ಆಕಸ್ಮಿಕ” ಎಂಬ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ನಿಮ್ಮ ಸ್ವಂತ ಲಾಭಕ್ಕಾಗಿ ಬಳಸಿದರೆ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ನಮಗೆ ಜವಾಬ್ದಾರಿ ಇದೆ. ನಾನು ರಾಜ್ಯದ ಗೃಹ ಸಚಿವರಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿರುವ. ನನಗೆ ಅವರ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.

 

WhatsApp Group Join Now
Telegram Group Join Now
Instagram Account Follow Now
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...