spot_img
spot_img

ನಾಗಮಂಗಲ ಪರಿಸ್ಥಿತಿ ಶಾಂತಿಯುತವಾಗಿದ್ದು, ಶಾಂತಿ ಸಭೆ ನಡೆಸಲಾಗುತ್ತಿದೆ; ಸಚಿವ ಪರಮೇಶ್ವರ ಹೇಳಿದ್ದಾರೆ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹಿಂಸಾಚಾರ ಪೀಡಿತ ನಾಗಮಂಗಲ ಪಟ್ಟಣದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.

ವಿರೋಧ ಪಕ್ಷಗಳು ಈ ಪ್ರಕರಣವನ್ನು “ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ” ಎಂದು ವಾಗ್ದಾಳಿ ನಡೆಸಿದ ಪರಮೇಶ್ವರ, ಘಟನೆಯಿಂದಾಗಿ ಜೀವನೋಪಾಯಕ್ಕೆ ತೊಂದರೆಯಾದವರಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಯೋಚಿಸುತ್ತಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜಣೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಬುಧವಾರ ರಾತ್ರಿ ಹಲವು ಅಂಗಡಿಗಳು ಮತ್ತು ವಾಹನಗಳನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಬೆಳ್ಳುಳ್ಳಿ ತಿಂದರೆ ಕ್ಯಾನ್ಸರ್ ರೋಗ ಬರುತ್ತದೆ. ಶಾಕಿಂಗ್ ನ್ಯೂಸ್ 

ಘಟನೆ ಸಂಬಂಧ ಪೊಲೀಸ್ ಇನ್ಸ್‌ಪೆಕ್ಟರ್ ರನ್ನು ಅಮಾನತುಗೊಳಿಸಲಾಗಿದೆ. ನಾವು ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಘಟನೆಗಳು ನಡೆದರೆ ಅದಕ್ಕೆ ಅವರೇ ಹೊಣೆ ಎಂದು ನಾವು ಹೇಳಿದ್ದೆವು. ಇನ್ಸ್‌ಪೆಕ್ಟರ್‌ ನಿರ್ಲಕ್ಷ್ಯ ತೋರಿದ ಕಾರಣ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಯುತ್ತಿದೆ. ‘ವಾಸ್ತವಾಂಶ’ಗಳ ಕುರಿತು ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಐಜಿ(ಪೋಲೀಸ್ ಇನ್ಸ್ಪೆಕ್ಟರ್ ಜನರಲ್) ಮತ್ತು ಇತರ ಹಿರಿಯ ಅಧಿಕಾರಿಗಳು ಅಲ್ಲಿ ಮೊಕ್ಕಾಂ ಹೂಡಿದ್ದಾರೆ ಮತ್ತು ಮುಂದೆ ಏನೂ ಆಗದಂತೆ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಈಗ ಪರಿಸ್ಥಿತಿ ಶಾಂತಿಯುತವಾಗಿದ್ದು, ಶಾಂತಿ ಸಭೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಹಿಂಸಾಚಾರ ಪೂರ್ವ ಯೋಜಿತವೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ತನಿಖೆಗೆ ಆದೇಶಿ ಸಲಾಗಿದೆ ಮತ್ತು ವರದಿ ಬಂದ ನಂತರ ವಿಷಯ ತಿಳಿಯಲಿದೆ”…. ಕಾನೂನನ್ನು ಕೈಗೆ ತೆಗೆದುಕೊಳ್ಳಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಗಣಪತಿ ಹಬ್ಬವಾಗಲಿ ಅಥವಾ ಇನ್ನಾವುದೇ ಹಬ್ಬವಾಗಲಿ ಯಾರಾದರೂ ಅನಗತ್ಯ ಗೊಂದಲ ಅಥವಾ ಅಶಾಂತಿ ಸೃಷ್ಟಿಸಿದರೆ ಅವರನ್ನು ಬಿಡುವುದಿಲ್ಲ ಮತ್ತು ಕಾನೂನು ಪ್ರಕಾರ ಅವರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ತೆಗೆದುಕೊಳ್ಳುವುದಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ:ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಪರೀಕ್ಷೆ ಇಲ್ಲದೆ, 3 ಸಾವಿರಕ್ಕೂ ಅಧಿಕ ಜಾಬ್ಸ್ ಲಭ್ಯ..!

ಇಂತಹ ಘಟನೆಗೆ ಓಲೈಕೆ ರಾಜಕಾರಣ  ಎಂಬ ಆರೋಪವನ್ನು ತಳ್ಳಿಹಾಕಿದ ಗೃಹ ಸಚಿವರು, “ನಮಗೆ ಅದರ ಅಗತ್ಯವಿಲ್ಲ.” ಎಂದರು ಮತ್ತು ಘಟನೆ “ಆಕಸ್ಮಿಕ” ಎಂಬ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ನಿಮ್ಮ ಸ್ವಂತ ಲಾಭಕ್ಕಾಗಿ ಬಳಸಿದರೆ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ನಮಗೆ ಜವಾಬ್ದಾರಿ ಇದೆ. ನಾನು ರಾಜ್ಯದ ಗೃಹ ಸಚಿವರಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿರುವ. ನನಗೆ ಅವರ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.

 

WhatsApp Group Join Now
Telegram Group Join Now
Instagram Account Follow Now
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...