What did Modi say News?
ಬಜೆಟ್ ಮಂಡನೆಗೆ ಒಂದು ದಿನ ಮುಂಚಿತವಾಗಿ ಪ್ರಧಾನಿಯ ಈ ಹೇಳಿಕೆ, ಬಡವರು ಮತ್ತು ಮಧ್ಯಮ ವರ್ಗದವರಿಗೆ ಏನಾದರೂ ಅನುಕೂಲವಾಗಲಿದೆ ಎಂಬ ಸೂಚನೆ ಎಂದು ಪರಿಗಣಿಸಲಾಗಿದೆ. ಇನ್ನು, ಉಭಯ ಕಲಾಪವನ್ನು ಉದ್ದೇಶಿಸಿ ಮಾತನಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು.. ಮಧ್ಯಮ ವರ್ಗದವರ ಸ್ವಂತ ಮನೆ ಕನಸನ್ನು ನನಸು ಮಾಡಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ Modi ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆ ಲಕ್ಷ್ಮಿ ದೇವಿಗೆ ನಮಸ್ಕರಿಸುತ್ತೇನೆ. ದೇಶದ ಬಡ ಮತ್ತು ಮಧ್ಯಮ ವರ್ಗದವರಿಗೆ ಲಕ್ಷ್ಮಿ ದೇವಿಯ ಅನುಗ್ರಹ ಸಿಗಲಿ ಎಂದಿದ್ದಾರೆ.
Big announcement related to tax..!ಸಾಮಾನ್ಯ ಜನರ ತೆರಿಗೆ ಹೊರೆ ಕಡಿಮೆ ಮಾಡಲು ಕಳೆದ ವರ್ಷ ಹೊಸ ಆದಾಯ ತೆರಿಗೆ ಸ್ಲ್ಯಾಬ್ ಪರಿಚಯಿಸಿತ್ತು. ಇದೀಗ ತೆರಿಗೆ ನಿಯಮದಲ್ಲಿ ಇನ್ನಷ್ಟು ಸುಧಾರಿಸಬಹುದು ಎಂಬ ನಿರೀಕ್ಷೆ ಹೆಚ್ಚಾಗಿದೆ. ಶೇಕಡಾ 30ರಷ್ಟು ತೆರಿಗೆ ಸ್ಲ್ಯಾಬ್ ಅನ್ನು ಈಗಿರುವ 15 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ ಹೆಚ್ಚಿಸಬಹುದು. ಹೊಸ ಆದಾಯ ತೆರಿಗೆ ಸ್ಲ್ಯಾಬ್ ವ್ಯವಸ್ಥೆಯಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಿಸಿರೋದು ಗಮನಾರ್ಹ.
ಇದನ್ನು ಓದಿರಿ :DARSHAN ALLOWED TO VISIT MYSURU:ನಟ ದರ್ಶನ್ಗೆ ಮತ್ತೆ ಮೈಸೂರಿಗೆ ಭೇಟಿ ನೀಡಲು ಅನುಮತಿ ನೀಡಿದ ನ್ಯಾಯಾಲಯ.