spot_img
spot_img

ಭಿನ್ನಮತ ಹಾಗೂ ಗುಂಪುಗಾರಿಕೆಗೆ ಪರಿಹಾರ ದೊರೆಯುವ ಸಮಯ: ಡಿ.ವಿ. ಸದಾನಂದ ಗೌಡ

spot_img
spot_img

Share post:

ಬೆಂಗಳೂರು: ಬಿಜೆಪಿಯೊಳಗಿನ ಭಿನ್ನಮತ ಹಾಗೂ ಗುಂಪುಗಾರಿಕೆಗೆ ಸರಿಯಾದ ಸಮಯದಲ್ಲಿ ಸರಿಯಾದ ಪರಿಹಾರ ದೊರೆಯಲಿದೆ. ಆ ಪರಿಹಾರ ದೊರೆಯುವ ಸಮಯ ಈಗ ಬಂದಿದೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹೇಳಿದರು.
“ದೊಡ್ಡ ದೊಡ್ಡ ಹೋಮ ಮಾಡಿ ಪೂರ್ಣಾಹುತಿ ಮಾಡಿದ ನಂತರ ಪ್ರಸಾದ ಕೊಡುತ್ತಾರೆ. ಆ ಪ್ರಸಾದ ಕೊಡುವ ಸಮಯಕ್ಕೆ ಬಂದಿದ್ದೇವೆ” ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಒಂದು ಕಾಲ ಕೂಡಿ ಬಂದಿದೆ. ಆ ಪ್ರಸಾದ ಕೊಡುವ ಸಮಯಕ್ಕೆ ಬಂದಿದ್ದೇವೆ. ಎಲ್ಲಾ ಸಂಸದರು, ಯತ್ನಾಳ್ ಟೀಮ್ ದೆಹಲಿಯಲ್ಲಿ ಇದ್ದಾರೆ. ದೆಹಲಿಯಲ್ಲಿ ಜೋಶಿ ನೇತೃತ್ವದಲ್ಲಿ ಸಂಸದರ ಸಭೆ ಮಾಡಿದ್ದಾರೆ. ಯತ್ನಾಳ್ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಶಿಸ್ತು ಸಮಿತಿ ಅಧ್ಯಕ್ಷರ ಮುಂದೆ ಯತ್ನಾಳ್ ಉತ್ತರ ಕೊಡುತ್ತಾರೆ. ನಮ್ಮಲ್ಲಿನ ಜಗಳ ವಿರೋಧಿಗಳಿಗೆ ಅಸ್ತ್ರ ಆಗುತ್ತಿದೆ” ಎಂದರು.
“ಚಮಚಾಗಿರಿ ಮಾಡುವುದರಿಂದ ಪಕ್ಷ ಸಂಘಟನೆ ಆಗಲ್ಲ. ದುಡ್ಡಿನ ಮೂಟೆ ಇಟ್ಟುಕೊಂಡು ಬಂದವರಿಂದ ಪಕ್ಷ ಸಂಘಟನೆ ಆಗಲ್ಲ. ಅತ್ಯಂತ ದೊಡ್ಡ ಶಿಸ್ತು ಉಲ್ಲಂಘನೆ ಸೋಮಶೇಖರ್ ಮತ್ತು ಹೆಬ್ಬಾರ್‌ ಅವರಿಂದ ಆಗಿದೆ. ತೇಪೆ ಹಾಕುವ ಕೆಲಸ ಈ ಬಾರಿ ಆಗಬಾರದು ಅಂತ ಹೈಕಮಾಂಡ್ ನಾಯಕರಿಗೆ ಹೇಳುತ್ತೇನೆ. ಅದು ಯಾರೇ ಆದರೂ ಕ್ರಮ ಆಗಬೇಕು. ಸ್ಥಳೀಯ ಚುನಾವಣೆ ಮೇಲೂ ಇದು ಪರಿಣಾಮ ಬೀರುತ್ತದೆ. ಯತ್ನಾಳ್ ಮಾಡಿರುವುದು ಇಡೀ ಲೋಕಕ್ಕೆ ಗೊತ್ತಿದೆ. ಫೈಟ್ ಮಾಡಲು ಒಂದು ತಂಡ ರಚನೆ ಆಗುವುದು ಸರಿಯಲ್ಲ. ಅವರೆಲ್ಲಾ ದೆಹಲಿಗೆ ಹೋಗಿದ್ದರೆ ಮತ್ತಷ್ಟು ಗೌರವ ಬರುತ್ತಿತ್ತು. ತೊಡೆ ತಟ್ಟಿ ಯತ್ನಾಳ್ ಟೀಮ್ ಹೋಗುವುದು ಸರಿಯಲ್ಲ. ಬಲ ಪ್ರದರ್ಶನ ಮಾಡುವುದಾದರೆ ಹೈಕಮಾಂಡ್ ಬೇಕಾಗಿಲ್ಲ ಅಲ್ವಾ?” ಎಂದು ಪ್ರಶ್ನಿಸಿದರು.
“ತರುಣ್ ಚುಗ್ ನಿನ್ನೆ ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ. ನನಗೆ ಯಾವುದೇ ಸಂಬಂಧ ಇಲ್ಲ, ನಾನು ಅದಕ್ಕಾಗಿ ಬಂದಿಲ್ಲ ಅಂದರು. ದೆಹಲಿಗೆ ಈಗಾಗಲೇ ಅಧ್ಯಕ್ಷರು ಹೋಗಿ ಬಂದಿದ್ದಾರೆ. ಆರ್‌. ಅಶೋಕ್ ಕೂಡಾ ದೆಹಲಿಗೆ ಹೋಗಿದ್ದಾರೆ. ಯತ್ನಾಳ್ ಟೀಮ್ ಕೂಡಾ ದೆಹಲಿಯಲ್ಲೇ ಇದೆ. ಇದಕ್ಕಿಂತ ಇನ್ನು ಏನು ರಿಪೋರ್ಟ್ ಬೇಕು? ಎಲ್ಲರ ಕಡೆಯಿಂದಲೂ ವರದಿಯನ್ನು ಹೈಕಮಾಂಡ್ ಸ್ವೀಕರಿಸಿದೆ‌. ಇನ್ನು ಎರಡು ಮೂರು ದಿನಗಳಲ್ಲಿ ಒಂದು ನಿರ್ಧಾರಕ್ಕೆ ಬನ್ನಿ. ಯಾರೇ ತಪ್ಪು ಮಾಡಿದರೂ ಕ್ರಮ ಆಗಲಿ. ಇಲ್ಲಿ ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ” ಎಂದು ಕಿಡಿಕಾರಿದರು‌.
“ಡಿಸೆಂಬರ್ 7 ರಂದು ತೀರ್ಮಾನ ಆಗಲು ಉಸ್ತುವಾರಿಗಳ ಕೈಯಲ್ಲಿ ಏನೂ ಇಲ್ಲ. ಏನೇ ಆದರೂ ಜೆ.ಪಿ. ನಡ್ಡಾ ತೀರ್ಮಾನ ಮಾಡಬೇಕು. ಉಸ್ತುವಾರಿಗಳು ವರದಿ ಪಡೆದು ಹೈಕಮಾಂಡ್​ಗೆ ಕೊಡಬೇಕು ಅಷ್ಟೇ. ಆರ್. ಅಶೋಕ್ ಅವರ ಜೊತೆ ಮಾತನಾಡಿದ್ದೆ. ದೆಹಲಿಗೆ ಹೋಗುತ್ತಾರೆ ಅಂತ ನನಗೆ ಗೊತ್ತಿರಲಿಲ್ಲ. ನಾವೆಲ್ಲರೂ ಮಾತನಾಡುವುದು ಸರಿ ಇದೆ ಅಂತ ಅಶೋಕ್ ಹೇಳಿದ್ದಾರೆ. ಪರಿಹಾರ ಇದ್ದೇ ಇದೆ, ಎಲ್ಲರೂ ತಾಳ್ಮೆಯಿಂದ ಇರಬೇಕು” ಎಂದರು.
“ನಾವು ಹೈಕಮಾಂಡ್‌ಗೆ ಹೋಗಿ ವರದಿ ಕೊಡುವ ಮೂಲಕ ನಮ್ಮ ಗೌರವ ಹೆಚ್ಚಿಸಿಕೊಳ್ಳಬೇಕು. ಇದು ಬಯಲಾಟ ಇದ್ದಂತೆ. ಇವತ್ತು ಒಂದು ತಂಡದ ಆಟ, ನಾಳೆ ಮತ್ತೊಂದು ತಂಡದ ಆಟ. ರಾಷ್ಟ್ರೀಯ ಪ್ರಮುಖರು ತೀರ್ಮಾನ ಮಾಡಬೇಕು. ತಪ್ಪು ಇದ್ದವರನ್ನು ಹೊರ ಹಾಕಬೇಕು, ಅಶಿಸ್ತನ್ನು ಸರಿ ಮಾಡಬೇಕು. ಪ್ರತ್ಯೇಕ ಹೋರಾಟ ಮಾಡುವುದನ್ನು ನಿಲ್ಲಿಸಬೇಕು. ಬದಲಾವಣೆಯಿಂದ ಎಲ್ಲಾ ಸರಿ ಮಾಡಬಹುದು ಎಂದು ಅನ್ನಿಸಿದರೆ, ಅದಾದರೂ ಮಾಡಿ. ಸದಸ್ಯತ್ವದಲ್ಲಿ ನಾವು ಎಷ್ಟರಮಟ್ಟಿಗೆ ಸ್ಥಾನದಲ್ಲಿ ಇದ್ದರೆ ಏನು? ಪಕ್ಷದ ಜಗಳ ಬೀದಿಗೆ ಬಂದಿದೆ. ಒಂದು ಟೀಮ್ ವಕ್ಫ್​ ವಿರುದ್ಧ ಹೋರಾಟ ಮಾಡಿ ಜನರ ಬಳಿ ಹೋದ ಮೇಲೆ ಮತ್ತೊಂದು ತಂಡ ಹೋದರೆ ಪ್ರಯೋಜನ ಆಗುವುದಿಲ್ಲ” ಎಂದು ತಿಳಿಸಿದರು.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...