spot_img
spot_img

TRANSPORT BUS TICKET FARE HIKE : ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಶೇ.15ರಷ್ಟು ಏರಿಕೆ ಸಾಧ್ಯತೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ರಾಜ್ಯ ರಸ್ತೆ ಸಾರಿಗೆ ಪ್ರಯಾಣಿಕರಿಗೆ ಟಿಕೆಟ್ ದರ ಹೆಚ್ಚಳದ ಬರೆ ಬೀಳುವ ಸಾಧ್ಯತೆ ಇದೆ. ಶಕ್ತಿ ಯೋಜನೆ ಹೊರೆ, ಇಂಧನ ವೆಚ್ಚ, ಬಾಕಿ ವೇತನ, ನಿರ್ವಹಣಾ ವೆಚ್ಚದ ಹಿನ್ನೆಲೆಯಲ್ಲಿ ಟಿಕೆಟ್ ದರ ಹೆಚ್ಚಳ ಮಾಡುವಂತೆ ನಿಗಮಗಳು ಮನವಿ ಮಾಡಿದ್ದವು. ಆದರೆ, ಸರ್ಕಾರ ಶೇ 15ರಷ್ಟು ಟಿಕೆಟ್ ದರ ಏರಿಕೆಗೆ ಒಲವು ಹೊಂದಿದೆ ಎನ್ನಲಾಗಿದೆ.ಇಂದು ಸಿಎಂ‌ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ದರ ಪರಿಷ್ಕರಣೆ ಪ್ರಸ್ತಾವನೆ ಚರ್ಚೆಗೆ ಬರಲಿದ್ದು, ದರ ಹೆಚ್ಚಳಕ್ಕೆ ಒಪ್ಪಿಗೆ ನೀಡುವ ಸಾಧ್ಯತೆಗಳಿವೆ.

ಕಳೆದ ಹತ್ತು ವರ್ಷದಲ್ಲಿ ಎರಡು ಬಾರಿ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. 2014 ಮತ್ತು 2020ರಲ್ಲಿ ಟಿಕೆಟ್ ದರ ಏರಿಕೆ ಮಾಡಲಾಗಿತ್ತು. ಬಳಿಕ ಟಿಕೆಟ್ ದರ ಏರಿಕೆ ಮಾಡಿರಲಿಲ್ಲ. ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಚರ್ಚಗೆ ಬರಲಿದ್ದು, ಶೇ 15ರಷ್ಟು ದರ ಪರಿಷ್ಕರಣೆಗೆ ಒಪ್ಪಿಗೆ ಸೂಚಿಸುವ ಸಾಧ್ಯತೆ ಇದೆ.‌

ಈಗಾಗಲೇ ನಾಲ್ಕು ರಸ್ತೆ ಸಾರಿಗೆ ನಿಗಮಗಳು ಶೇ 25ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು.ಇದರ ಮಧ್ಯೆ ವೇತನ ಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆಗೆ ಆಗ್ರಹಿಸಿ ನಾಲ್ಕು ರಸ್ತೆ ಸಾರಿಗೆ ನಿಗಮದ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ದರ ಪರಿಷ್ಕರಣೆಗೆ ಮುಂದಾಗಿದೆ‌.ಶೇ 15ರಷ್ಟು ದರ ಹೆಚ್ಚಳದಿಂದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ದಿನಕ್ಕೆ ಸುಮಾರು 6-7 ಕೋಟಿ ರೂಪಾಯಿ ಆದಾಯ ಹೆಚ್ಚಳ ಆಗುವ ನಿರೀಕ್ಷೆ ಇದೆ.

ಆ ಮೂಲಕ ವಾರ್ಷಿಕವಾಗಿ 3 ಸಾವಿರ ಕೋಟಿ ರೂಪಾಯಿಗೂ ಅಧಿಕ ಆದಾಯ ಬರುವ ನಿರೀಕ್ಷೆ ಇದೆ‌. ಈಗಾಗಲೇ ಸಾರಿಗೆ ನಿಗಮಗಳು ಶಕ್ತಿ ಯೋಜನೆ ಹಿನ್ನೆಲೆಯಲ್ಲಿ ತೀವ್ರ ಆದಾಯದ ಕೊರತೆ ಎದುರಿಸುತ್ತಿವೆ. ಮೊನ್ನೆ ಡಿ.31ರಂದು ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರದ ಖಾತ್ರಿಯೊಂದಿಗೆ 2,000 ಕೋಟಿ ಸಾಲ ಎತ್ತುವಳಿ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿತ್ತು.

ಈ ಸಂಬಂಧ ಆದೇಶ ಹೊರಡಿಸಿತ್ತು. ನಾಲ್ಕು ರಸ್ತೆ ಸಾರಿಗೆ ನಿಗಮಗಳ ಭವಿಷ್ಯ ನಿಧಿ, ರಜೆ ನಗದೀಕರಣ, ಬಾಕಿ ವೇತನ, ಇಂಧನ ವೆಚ್ಚ ಸೇರಿ ಒಟ್ಟು 6,330 ಕೋಟಿ ರೂ. ಸಾಲ ರಸ್ತೆ ಸಾರಿಗೆ ನಿಗಮಗಳ ಮೇಲಿದೆ. ರಸ್ತೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ದರ ಪರಿಷ್ಕರಣೆ ಅನಿವಾರ್ಯವಾಗಿದೆ. ದರ ಪರಿಷ್ಕರಣೆ ಬಗ್ಗೆ ಈಗಾಗಲೇ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದಾರೆ.ರಾಜ್ಯ ಸಂಪುಟ ಸಭೆ ಮುಂದೆ ಬಸ್ ಟಿಕೆಟ್ ದರ ಏರಿಕೆಯ ಪ್ರಸ್ತಾವನೆ ಬರಲಿದ್ದು, ಶೇ 15 ರಷ್ಟು ದರ ಪರಿಷ್ಕರಣೆ ತೀರ್ಮಾನ ಮಾಡುವ ಸಾಧ್ಯತೆಗಳಿವೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RAVI BASRUR : ‘ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ನಿಮ್ಮ ಹೆಸರೇಳಿ ಬದುಕೊಳ್ತಾರೆ’

Bagalkote News: ಸಿದ್ದನಕೊಳ್ಳ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭ ಜರುಗಿತು. ಜ್ಯೋತಿ ಬೆಳಗಿಸುವ ಮೂಲಕ ಶಾಸಕ...

BUS FIRE INCIDENT : ಹೊತ್ತಿ ಉರಿದ ಬಸ್, ತೆಲಂಗಾಣದ ಓರ್ವ ಸಾವು

Mathura (Uttar Pradesh) News: ಉತ್ತರಪ್ರದೇಶದ ಮಥುರಾದಲ್ಲಿ ತೆಲಂಗಾಣದ 50ಕ್ಕೂ ಹೆಚ್ಚು ಜನರಿದ್ದ BUS​ವೊಂದು ಬೆಂಕಿಗಾಹುತಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.ತೆಲಂಗಾಣದ ಜನರಿಂದ ತುಂಬಿದ್ದ ಬಸ್​ವೊಂದು ಮಥುರಾದಲ್ಲಿ...

NEW PRESIDENT FOR KPCC : ಕೆಪಿಸಿಸಿಗೆ ಪೂರ್ಣ ಪ್ರಮಾಣದ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಲಿ

Bangalore News: ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನನ್ನನ್ನು ನಾನು NEW PRESIDENT FOR KPCC ಎಂದು ಮಾಡಿ ಎಂದು ಹೇಳಿಲ್ಲ. ನಾವುಗಳೆಲ್ಲ ಸಚಿವರಾದ...

HOMEOWNERS NOTE TO THIEVES : ಸಂಕ್ರಾಂತಿಗೆ ಊರಿಗೆ ಹೋಗುವಾಗ ಜಾಣತನ ಮೆರೆದ ಮನೆ ಮಾಲೀಕ

Hyderabad News: ಈ ರೀತಿಯ ವಿಚಿತ್ರ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಜೊತೆಗೆ ಮನೆ ಮಾಲೀಕನ ಹಾಸ್ಯ ಮತ್ತು ಬುದ್ದಿವಂತಿಕೆಗೆ ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ.ಇಂತಹುದೇ...