spot_img
spot_img

UN AID TO GAZA : ಪರಿಹಾರ ಸಾಮಗ್ರಿ ಹೊತ್ತ 1,000 ಟ್ರಕ್ ಗಾಜಾ ಪ್ರವೇಶ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

United Nations News:

ಕದನ ವಿರಾಮ ಜಾರಿಯಾಗಿದ್ದರಿಂದ ವಿಶ್ವಸಂಸ್ಥೆಯ ಕಾರ್ಯಕರ್ತರು GAZAದೊಳಕ್ಕೆ ಪರಿಹಾರ ಸಾಮಗ್ರಿ ತಲುಪಿಸುವ ಕಾರ್ಯಗಳನ್ನು ಪುನಾರಂಭಿಸಿದ್ದಾರೆ.ಇದಲ್ಲದೆ ಮನೆ ಮಠ ಕಳೆದುಕೊಂಡ ನಿರಾಶ್ರಿತರಾಗಿರುವ GAZA ಜನತೆಗಾಗಿರುವ ಹಾನಿಯ ಬಗ್ಗೆಯೂ ಕಾರ್ಯಕರ್ತರು ಲೆಕ್ಕ ಹಾಕುತ್ತಿದ್ದಾರೆ.ಇಸ್ರೇಲ್ ಮತ್ತು ಹಮಾಸ್ ಮಧ್ಯೆ ಕದನ ವಿರಾಮ ಜಾರಿಯಾದ ನಂತರ ಈಗ ವಿಶ್ವಸಂಸ್ಥೆ ಮತ್ತು ಅದರ ಸಹವರ್ತಿ ಸಂಘಟನೆಗಳ ಕಾರ್ಯಕರ್ತರು GAZA ಜನರಿಗೆ ಅಗತ್ಯ ಪರಿಹಾರ ಸಾಮಗ್ರಿಗಳನ್ನು ತಲುಪಿಸಲು ಯುದ್ಧೋಪಾದಿಯಲ್ಲಿ ಪ್ರಯತ್ನಿಸುತ್ತಿದ್ದಾರೆ.

ವಿಶ್ವಸಂಸ್ಥೆಯ ಕಾರ್ಯಕರ್ತರು ಆಹಾರದ ಪಾರ್ಸೆಲ್​ಗಳು ಮತ್ತು ಹಿಟ್ಟನ್ನು ವಿತರಿಸುತ್ತಿದ್ದಾರೆ ಹಾಗೂ ಬೇಕರಿಗಳನ್ನು ಪುನಾರಂಭಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.ಗಾಜಾ ಪಟ್ಟಿಯಾದ್ಯಂತದ ಜನರಿಗೆ ನೀಡಲಾಗುತ್ತಿರುವ ಪರಿಹಾರ ಸಾಮಗ್ರಿಗಳ ಪ್ರಮಾಣವನ್ನು ಹೆಚ್ಚಿಸುತ್ತಿದ್ದೇವೆ. ಸರಕು ಶೇಖರಣಾ ಸಾಮರ್ಥ್ಯಗಳನ್ನು ಕೂಡ ಹೆಚ್ಚಿಸಲಾಗುತ್ತಿದ್ದು, ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.

ಆರೋಗ್ಯ ಸೇವೆಗಳನ್ನು ಸಹ ಸುಧಾರಿಸಲಾಗುತ್ತಿದೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (ಒಸಿಎಚ್ಎ) ಬುಧವಾರ ತಿಳಿಸಿದೆ.ಗಾಜಾ ಜನತೆಗೆ ಸಹಾಯ ಮಾಡುವ ವಿಶ್ವಸಂಸ್ಥೆಯ ಪ್ರಯತ್ನಗಳ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ಉಪ ವಕ್ತಾರ ಫರ್ಹಾನ್ ಹಕ್ ಅವರು ದಿನನಿತ್ಯದ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದರು.

“ಯುದ್ಧ ಪೀಡಿತ ಹಾಗೂ ಯುದ್ಧ ಮುಗಿದ ಸಂದರ್ಭಗಳಲ್ಲಿ ಆ ಪ್ರದೇಶಗಳಲ್ಲಿನ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವುದು, ನೆಲಬಾಂಬ್​ಗಳನ್ನು ತೆಗೆದು ಹಾಕುವುದು, ಇನ್ನೂ ಸ್ಫೋಟಗೊಳ್ಳದ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡಿ ಅವುಗಳನ್ನು ತೆರವುಗೊಳಿಸುವುದು ಮತ್ತು ಪುನರ್ ನಿರ್ಮಾಣ ಕಾರ್ಯದಲ್ಲಿ ಸಹಕರಿಸುವುದು ವಿಶ್ವಸಂಸ್ಥೆಯು ಸಾಮಾನ್ಯವಾಗಿ ಮಾಡುವ ಕೆಲಸಗಳಾಗಿವೆ” ಎಂದು ಹಕ್ ತಿಳಿಸಿದರು.

“ಅವುಗಳನ್ನು ಮೈನ್ ಆಕ್ಷನ್ ಸರ್ವಿಸ್, ಯುಎನ್ ಆಫೀಸ್ ಫಾರ್ ಪ್ರಾಜೆಕ್ಟ್ ಸರ್ವೀಸಸ್ ಮತ್ತು ಯುಎನ್ ಡೆವಲಪ್ ಮೆಂಟ್ ಪ್ರೋಗ್ರಾಂ ಸೇರಿದಂತೆ ವಿವಿಧ ಸಂಘಟನೆಗಳು ಈ ಎಲ್ಲ ಕೆಲಸಗಳನ್ನು ನೋಡಿಕೊಳ್ಳುತ್ತವೆ” ಎಂದು ಅವರು ಮಾಹಿತಿ ನೀಡಿದರು.ಪರಿಹಾರ ಸಾಮಗ್ರಿ ತುಂಬಿದ ಸುಮಾರು 118 ಟ್ರಕ್​ಗಳು ಖಾನ್ ಯೂನಿಸ್​ನ ಸಮುದಾಯಗಳಿಗೆ ಮತ್ತು ದೇರ್ ಅಲ್ ಬಾಲಾಹ್​ನಲ್ಲಿರುವ ಯುಎನ್ಆರ್​ಡಬ್ಲ್ಯೂಎ ಆಶ್ರಯ ಶಿಬಿರಗಳಿಗೆ 53,000 ಕ್ಕೂ ಹೆಚ್ಚು ಆಹಾರದ ಪೊಟ್ಟಣಗಳನ್ನು ತಲುಪಿಸಿವೆ.

ಕದನ ವಿರಾಮದ ಎರಡನೇ ದಿನದಂದು ಸುಮಾರು 1,000 ಟ್ರಕ್​ಗಳು GAZAವನ್ನು ಪ್ರವೇಶಿಸಿವೆ ಎಂದು ಪ್ಯಾಲೆಸ್ಟೈನ್ ನಿರಾಶ್ರಿತರ ವಿಶ್ವಸಂಸ್ಥೆಯ ಪರಿಹಾರ ಸಂಸ್ಥೆ (ಯುಎನ್ಆರ್​ಡಬ್ಲ್ಯೂಎ) ವರದಿ ಮಾಡಿದೆ.ಸುರಕ್ಷಿತ ಜನನ, ತುರ್ತು ಪ್ರಸೂತಿ ಆರೈಕೆ, ಪ್ರಸವಾನಂತರದ ಕಿಟ್​ಗಳು, ಗರ್ಭನಿರೋಧಕಗಳು ಮತ್ತು ಚಳಿಗಾಲದ ವಸ್ತುಗಳು ಸೇರಿದಂತೆ ಇತರ ಅಗತ್ಯ ವಸ್ತುಗಳನ್ನು 20 ಟ್ರಕ್​ಗಳು ಮಂಗಳವಾರ ದೇರ್ ಅಲ್ ಬಾಲಾಹ್​ಗೆ ತಲುಪಿಸಿವೆ ಮತ್ತು ಯುಎನ್ಎಫ್​ಪಿಎ ಸಹಾಯವನ್ನು ಹೊತ್ತ ಇನ್ನೂ 20 ಟ್ರಕ್​ಗಳು ಬುಧವಾರ ಉತ್ತರ GAZAವನ್ನು ಪ್ರವೇಶಿಸಿವೆ ಎಂದು ಯುಎನ್ ಜನಸಂಖ್ಯಾ ನಿಧಿ (ಯುಎನ್ಎಫ್​ಪಿಎ) ವರದಿ ಮಾಡಿದೆ.

ಇದನ್ನು ಓದಿರಿ : HIGH COURT : ಅವಾಚ್ಯ ಪದ ಬಳಕೆ ಆರೋಪ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...