Bangalore News:
ಪಂಚ ಗ್ಯಾರಂಟಿಗಳ ಮೂಲಕ ಲಿಂಗ ಸಮಾನತೆ ತರುವಲ್ಲಿನ ಕರ್ನಾಟಕದ ಕ್ರಮ ಕೈಗೊಂಡಿರುವ ಬಗ್ಗೆ ವಿಶ್ವಸಂಸ್ಥೆ UN PRESIDENT PHILEMON YANG ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್ನ ಶ್ರೀUN PRESIDENT PHILEMON YANG ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಈ ವೇಳೆ, ಗ್ಯಾರಂಟಿ ಯೋಜನೆಗಳು ಮಹಿಳೆಯರಿಗೆ ಕೈಯಲ್ಲಿ ನಗದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಕಾರ್ಮಿಕ ವರ್ಗದಲ್ಲಿ ಮಹಿಳೆಯರ ಭಾಗವಹಿಸುವಿಕೆ ಸುಧಾರಿಸಲು, ಹಸಿವು ಮತ್ತು ಅಪೌಷ್ಟಿಕತೆ ತಡೆಗಟ್ಟಲು ತಲಾವಾರು ಪೋಷಕಾಂಶ ನೀಡುತ್ತಿರುವುದು ಹಾಗೂ ದೈನಂದಿನ ಅಡುಗೆಯ ಶ್ರಮವನ್ನು ಕಡಿಮೆ ಮಾಡಲು ಮನೆಯಲ್ಲಿ ಗ್ಯಾಜೆಟ್ಗಳನ್ನು ಬಳಸಲು ಉಚಿತ ವಿದ್ಯುತ್ ನೀಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಸಿಎಂ ಕಚೇರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸುವ ಪಂಚ ಗ್ಯಾರಂಟಿಗಳ ಮೂಲಕ ಲಿಂಗ ಸಮಾನತೆಯನ್ನು ತರುವಲ್ಲಿ ಕರ್ನಾಟಕದ ಉಪಕ್ರಮಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್ನ UN PRESIDENT PHILEMON YANG ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಮುಖ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ (SDG) ಕರ್ನಾಟಕವು ಹೇಗೆ ಉನ್ನತ ಸ್ಥಾನ ಪಡೆಯಲು ಸಾಧ್ಯವಾಯಿತು ಎಂಬುದರ ಕುರಿತು ವಿಶ್ವಸಂಸ್ಥೆಯ ಅಧ್ಯಕ್ಷರು ವಿವರಗಳನ್ನು ಕೋರಿದರು. ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಮುನ್ನಡೆಸಿದ್ದಕ್ಕಾಗಿ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಯವರನ್ನು ವಿಶ್ವಸಂಸ್ಥೆಯ ಅಧ್ಯಕ್ಷರು ಅಭಿನಂದಿಸಿದರು.
ಭವಿಷ್ಯದ ವಿಶ್ವಸಂಸ್ಥೆಯ ಕಾರ್ಯಾಗಾರಗಳಲ್ಲಿ ಕರ್ನಾಟಕದ ಯಶಸ್ಸಿನ ಬಗ್ಗೆ ಹಂಚಿಕೊಳ್ಳಲಾಗುವುದು. ಇದರಿಂದ ಇತರ ದೇಶಗಳು ಸಹ ಈ ಅತ್ಯುತ್ತಮ ಯೋಜನೆಗಳನ್ನು ಅಳವಡಿಸಿಕೊಳ್ಳಬಹುದು ಎಂದು ಯಾಂಗ್ ಅಭಿಪ್ರಾಯಪಟ್ಟರು.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರನ್ನು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛವನ್ನು ನೀಡಿ ಸ್ವಾಗತಿಸಿದರು. ಅಲ್ಲದೆ, ವಿಶ್ವಸಂಸ್ಥೆಯ ವೈವಿಧ್ಯತೆಯಲ್ಲಿ ಏಕತೆ ಎಂಬ ತತ್ವದಂತೆ ಒಂದು ರಾಜ್ಯ, ಅನೇಕ ಜಗತ್ತುಗಳನ್ನು ಪ್ರತಿನಿಧಿಸುವ ಕರ್ನಾಟಕದ ಕುರಿತಾದ ಪುಸ್ತಕವನ್ನು ನೀಡಿದರು.
ಇದನ್ನು ಓದಿರಿ :Four Dead In Crash Of US Military-Contracted Plane In Philippines