spot_img
spot_img

UNION BUDGET 2025 26 : ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಶೇ 10ರಷ್ಟು ಏರಿಕೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

UNION BUDGET 2025 26 ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ ಬಜೆಟ್​ನಲ್ಲಿ ರಾಜ್ಯ ನಿರೀಕ್ಷಿಸಿದಷ್ಟು ಸಿಕ್ಕಿಲ್ಲ. ಆದರೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಶೇ.10ರಷ್ಟು ಏರಿಕೆ ಮಾಡಲಾಗಿದೆ. ಬಜೆಟ್​​ನಲ್ಲಿ ರಾಜ್ಯಕ್ಕೆ ಗಮನಾರ್ಹ ಘೋಷಣೆಗಳೇನೂ ಇಲ್ಲ.‌ ರಾಜ್ಯ ಸರ್ಕಾರ ಬೆಂಗಳೂರಿನ 90,000 ಕೋಟಿ ರೂ. ವೆಚ್ಚದ ವಿವಿಧ ಪ್ರಮುಖ ಅಭಿವೃದ್ಧಿ ಯೋಜನೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರದ ಮುಂದಿಟ್ಟಿತ್ತು. ಆದರೆ ಬಜೆಟ್​ನಲ್ಲಿ ಈ ಕುರಿತು ಯಾವುದೇ ಪ್ರಸ್ತಾಪಗಳಿಲ್ಲ. UNION BUDGET 2025 26ನಲ್ಲಿ ನಿರೀಕ್ಷಿಸಿದ್ದ ಅನುದಾನ ಘೋಷಣೆಯಾಗದೇ ಇರುವುದರಿಂದ ಕರ್ನಾಟಕಕ್ಕೆ ನಿರಾಸೆಯಾಗಿದೆ. ಆದರೆ, 2025-26ರ ಸಾಲಿನಲ್ಲಿ ರಾಜ್ಯದ ಪಾಲಿನ ಕೇಂದ್ರದ ತೆರಿಗೆ ಹಂಚಿಕೆ ಮೊತ್ತವನ್ನು 51,876 ಕೋಟಿ ರೂ.ಗೆ ಹೆಚ್ಚಿಸಲಾಗಿದೆ.

Increase in tax sharing:

2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ 46,932.72 ಕೋಟಿ ರೂ. ತೆರಿಗೆ ಹಂಚಿತ್ತು. ಆದರೆ ಈ ಬಾರಿ 51,876 ಕೋಟಿ ರೂ.ಗೆ ಹೆಚ್ಚಿಸಿದೆ.‌ ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ.10ರಷ್ಟು ಹೆಚ್ಚಳವಾಗಿದೆ. ಇದು ಆದಾಯ ಕೊರತೆ ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಸ್ವಲ್ಪ ನಿಟ್ಟುಸಿರು ಬಿಡುವ ವಿಚಾರ. ಈ ಬಾರಿ ತಮಿಳುನಾಡಿಗೆ 58,021.50 ಕೋಟಿ ರೂ., ಆಂಧ್ರ ಪ್ರದೇಶಕ್ಕೆ 57,566.31 ಕೋಟಿ ರೂ. ತೆರಿಗೆ ಹಂಚಲಾಗಿದೆ.

₹350 crore for Bangalore Suburban Rail Project:

UNION BUDGET 2025 26 ಮೆಟ್ರೋ ಮತ್ತು ಸಾಮೂಹಿಕ ತ್ವರಿತ ಸಂಚಾರಿ ವ್ಯವಸ್ಥೆ ಯೋಜನೆಗಳಿಗೆ 31,106.18 ಕೋಟಿ ರೂ. ಘೋಷಿಸಲಾಗಿದೆ.‌ ಇದರ ಲಾಭ ನಮ್ಮ ಮೆಟ್ರೋಗೂ ಆಗಲಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ 2.O ನಗರಕ್ಕೆ ಕೇಂದ್ರ ಬಜೆಟ್​​ನಲ್ಲಿ ಒಟ್ಟು 3,500 ಕೋಟಿ ರೂ‌. ಘೋಷಿಸಲಾಗಿದೆ. ಇದು ಬೆಂಗಳೂರಲ್ಲೂ ವಸತಿ ಯೋಜನೆಯನ್ನು ಕಲ್ಪಿಸಲಿದೆ. ಇದರ ಜೊತೆಗೆ ದೇಶಾದ್ಯಂತ ಅಮೃತ ಯೋಜನೆಯಡಿ ಒಟ್ಟು 10,000 ಕೋಟಿ ರೂ. ಘೋಷಿಸಲಾಗಿದ್ದು, ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೂ ಇದರಲ್ಲಿ ಗಣನೀಯ ಪಾಲು ಸಿಗುವ ನಿರೀಕ್ಷೆ ಇದೆ. ಬೆಂಗಳೂರು ಉಪನಗರ ರೈಲು ಯೋಜನೆಗೆ ಬಜೆಟ್​​ನಲ್ಲಿ 350 ಕೋಟಿ ರೂ. ಅನುದಾನ ಘೋಷಣೆಯಾಗಿದೆ. ಸಬ್ ಅರ್ಬನ್ ರೈಲ್ವೆಗೆ ಕಳೆದ ಬಾರಿಯೂ 350 ಕೋಟಿ ನೀಡಲಾಗಿತ್ತು.

7,564 crore for Karnataka. Railway Budget:

UNION BUDGET 2025 26 ಗದಗ – ವಾಡಿ ರೈಲ್ವೆ ಮಾರ್ಗಕ್ಕೆ 549 ಕೋಟಿ ರೂ., ತುಮಕೂರು-ಚಿತ್ರದುರ್ಗ ಮತ್ತು ದಾವಣಗೆರೆ ರೈಲ್ವೆ ಮಾರ್ಗಕ್ಕೆ 549 ಕೋಟಿ ರೂ., ರಾಯದುರ್ಗ-ಕಲ್ಯಾಣದುರ್ಗ- ತುಮಕೂರು ರೈಲ್ವೆ ಮಾರ್ಗಕ್ಕೆ 434 ಕೋಟಿ ರೂ., ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗಕ್ಕೆ 428 ಕೋಟಿ ರೂ., ಬೆಂಗಳೂರು-ವೈಟ್‌ಫೀಲ್ಡ್- ಕೆಆರ್ ಪುರಂ ರೈಲ್ವೆ ಮಾರ್ಗಕ್ಕೆ 357 ಕೋಟಿ ರೂ., ದೌಂಡ್-ಕಲಬುರಗಿ ರೈಲ್ವೆ ಮಾರ್ಗದ ವಿದ್ಯುದ್ದೀಕರಣಕ್ಲೆ 84 ಕೋಟಿ ರೂ. ಹಾಗೂ ರಾಮನಗರ-ಮೈಸೂರು ರೈಲ್ವೆ ಮಾರ್ಗದ ವಿದ್ಯುದ್ದೀಕರಣಕ್ಕೆ 10 ಕೋಟಿ ರೂ. ನೀಡಲಾಗಿದೆ. ಈ ಬಾರಿ ಕರ್ನಾಟಕಕ್ಕೆ ರೈಲ್ವೆ ಬಜೆಟ್ 7,564 ಕೋಟಿ ರೂ. ನೀಡಲಾಗಿದೆ. ಕಳೆದ ಬಾರಿ 7559 ಕೋಟಿ ರೂ. ನೀಡಲಾಗಿತ್ತು ಎಂದು ಕೇಂದ್ರ ರೈಲ್ವೇ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಇದನ್ನು ಓದಿರಿ : This statement of Modi has created a debate:ಮಧ್ಯಮ ವರ್ಗಕ್ಕೆ ತೆರಿಗೆಯಿಂದ ಬಿಗ್ ರಿಲೀಫ್..?

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...