spot_img
spot_img

UNION BUDGET 2025 26 : ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಶೇ 10ರಷ್ಟು ಏರಿಕೆ

spot_img
spot_img

Share post:

Bangalore News:

UNION BUDGET 2025 26 ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ ಬಜೆಟ್​ನಲ್ಲಿ ರಾಜ್ಯ ನಿರೀಕ್ಷಿಸಿದಷ್ಟು ಸಿಕ್ಕಿಲ್ಲ. ಆದರೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಶೇ.10ರಷ್ಟು ಏರಿಕೆ ಮಾಡಲಾಗಿದೆ. ಬಜೆಟ್​​ನಲ್ಲಿ ರಾಜ್ಯಕ್ಕೆ ಗಮನಾರ್ಹ ಘೋಷಣೆಗಳೇನೂ ಇಲ್ಲ.‌ ರಾಜ್ಯ ಸರ್ಕಾರ ಬೆಂಗಳೂರಿನ 90,000 ಕೋಟಿ ರೂ. ವೆಚ್ಚದ ವಿವಿಧ ಪ್ರಮುಖ ಅಭಿವೃದ್ಧಿ ಯೋಜನೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರದ ಮುಂದಿಟ್ಟಿತ್ತು. ಆದರೆ ಬಜೆಟ್​ನಲ್ಲಿ ಈ ಕುರಿತು ಯಾವುದೇ ಪ್ರಸ್ತಾಪಗಳಿಲ್ಲ. UNION BUDGET 2025 26ನಲ್ಲಿ ನಿರೀಕ್ಷಿಸಿದ್ದ ಅನುದಾನ ಘೋಷಣೆಯಾಗದೇ ಇರುವುದರಿಂದ ಕರ್ನಾಟಕಕ್ಕೆ ನಿರಾಸೆಯಾಗಿದೆ. ಆದರೆ, 2025-26ರ ಸಾಲಿನಲ್ಲಿ ರಾಜ್ಯದ ಪಾಲಿನ ಕೇಂದ್ರದ ತೆರಿಗೆ ಹಂಚಿಕೆ ಮೊತ್ತವನ್ನು 51,876 ಕೋಟಿ ರೂ.ಗೆ ಹೆಚ್ಚಿಸಲಾಗಿದೆ.

Increase in tax sharing:

2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ 46,932.72 ಕೋಟಿ ರೂ. ತೆರಿಗೆ ಹಂಚಿತ್ತು. ಆದರೆ ಈ ಬಾರಿ 51,876 ಕೋಟಿ ರೂ.ಗೆ ಹೆಚ್ಚಿಸಿದೆ.‌ ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ.10ರಷ್ಟು ಹೆಚ್ಚಳವಾಗಿದೆ. ಇದು ಆದಾಯ ಕೊರತೆ ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಸ್ವಲ್ಪ ನಿಟ್ಟುಸಿರು ಬಿಡುವ ವಿಚಾರ. ಈ ಬಾರಿ ತಮಿಳುನಾಡಿಗೆ 58,021.50 ಕೋಟಿ ರೂ., ಆಂಧ್ರ ಪ್ರದೇಶಕ್ಕೆ 57,566.31 ಕೋಟಿ ರೂ. ತೆರಿಗೆ ಹಂಚಲಾಗಿದೆ.

₹350 crore for Bangalore Suburban Rail Project:

UNION BUDGET 2025 26 ಮೆಟ್ರೋ ಮತ್ತು ಸಾಮೂಹಿಕ ತ್ವರಿತ ಸಂಚಾರಿ ವ್ಯವಸ್ಥೆ ಯೋಜನೆಗಳಿಗೆ 31,106.18 ಕೋಟಿ ರೂ. ಘೋಷಿಸಲಾಗಿದೆ.‌ ಇದರ ಲಾಭ ನಮ್ಮ ಮೆಟ್ರೋಗೂ ಆಗಲಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ 2.O ನಗರಕ್ಕೆ ಕೇಂದ್ರ ಬಜೆಟ್​​ನಲ್ಲಿ ಒಟ್ಟು 3,500 ಕೋಟಿ ರೂ‌. ಘೋಷಿಸಲಾಗಿದೆ. ಇದು ಬೆಂಗಳೂರಲ್ಲೂ ವಸತಿ ಯೋಜನೆಯನ್ನು ಕಲ್ಪಿಸಲಿದೆ. ಇದರ ಜೊತೆಗೆ ದೇಶಾದ್ಯಂತ ಅಮೃತ ಯೋಜನೆಯಡಿ ಒಟ್ಟು 10,000 ಕೋಟಿ ರೂ. ಘೋಷಿಸಲಾಗಿದ್ದು, ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೂ ಇದರಲ್ಲಿ ಗಣನೀಯ ಪಾಲು ಸಿಗುವ ನಿರೀಕ್ಷೆ ಇದೆ. ಬೆಂಗಳೂರು ಉಪನಗರ ರೈಲು ಯೋಜನೆಗೆ ಬಜೆಟ್​​ನಲ್ಲಿ 350 ಕೋಟಿ ರೂ. ಅನುದಾನ ಘೋಷಣೆಯಾಗಿದೆ. ಸಬ್ ಅರ್ಬನ್ ರೈಲ್ವೆಗೆ ಕಳೆದ ಬಾರಿಯೂ 350 ಕೋಟಿ ನೀಡಲಾಗಿತ್ತು.

7,564 crore for Karnataka. Railway Budget:

UNION BUDGET 2025 26 ಗದಗ – ವಾಡಿ ರೈಲ್ವೆ ಮಾರ್ಗಕ್ಕೆ 549 ಕೋಟಿ ರೂ., ತುಮಕೂರು-ಚಿತ್ರದುರ್ಗ ಮತ್ತು ದಾವಣಗೆರೆ ರೈಲ್ವೆ ಮಾರ್ಗಕ್ಕೆ 549 ಕೋಟಿ ರೂ., ರಾಯದುರ್ಗ-ಕಲ್ಯಾಣದುರ್ಗ- ತುಮಕೂರು ರೈಲ್ವೆ ಮಾರ್ಗಕ್ಕೆ 434 ಕೋಟಿ ರೂ., ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗಕ್ಕೆ 428 ಕೋಟಿ ರೂ., ಬೆಂಗಳೂರು-ವೈಟ್‌ಫೀಲ್ಡ್- ಕೆಆರ್ ಪುರಂ ರೈಲ್ವೆ ಮಾರ್ಗಕ್ಕೆ 357 ಕೋಟಿ ರೂ., ದೌಂಡ್-ಕಲಬುರಗಿ ರೈಲ್ವೆ ಮಾರ್ಗದ ವಿದ್ಯುದ್ದೀಕರಣಕ್ಲೆ 84 ಕೋಟಿ ರೂ. ಹಾಗೂ ರಾಮನಗರ-ಮೈಸೂರು ರೈಲ್ವೆ ಮಾರ್ಗದ ವಿದ್ಯುದ್ದೀಕರಣಕ್ಕೆ 10 ಕೋಟಿ ರೂ. ನೀಡಲಾಗಿದೆ. ಈ ಬಾರಿ ಕರ್ನಾಟಕಕ್ಕೆ ರೈಲ್ವೆ ಬಜೆಟ್ 7,564 ಕೋಟಿ ರೂ. ನೀಡಲಾಗಿದೆ. ಕಳೆದ ಬಾರಿ 7559 ಕೋಟಿ ರೂ. ನೀಡಲಾಗಿತ್ತು ಎಂದು ಕೇಂದ್ರ ರೈಲ್ವೇ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಇದನ್ನು ಓದಿರಿ : This statement of Modi has created a debate:ಮಧ್ಯಮ ವರ್ಗಕ್ಕೆ ತೆರಿಗೆಯಿಂದ ಬಿಗ್ ರಿಲೀಫ್..?

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...