spot_img
spot_img

UNION BUDGET 2025 : ಜನಗಣತಿಗಾಗಿ ಕೇವಲ ₹574 ಕೋಟಿ ಹಂಚಿಕೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

UNION BUDGET 2025 ರಲ್ಲಿ ಮಹತ್ವದ ಜನಗಣತಿ ನಡೆಯುವ ನಿರೀಕ್ಷೆ ಇತ್ತು. ಕೇಂದ್ರ ಸರ್ಕಾರವೂ ಇದರ ಸೂಚನೆ ನೀಡಿತ್ತು. ಆದರೆ, ಬಜೆಟ್​ನಲ್ಲಿ ಇಟ್ಟಿರುವ ಅನುದಾನ ಗಮನಿಸಿದರೆ, ಈ ವರ್ಷವೂ ಅಭಿಯಾನ ನಡೆಯುವ ಸಾಧ್ಯತೆ ಕಡಿಮೆ ಇದೆ.

UNION BUDGET 2025 ಜನಗಣತಿ ಮತ್ತು ಎನ್​ಪಿಆರ್​ ನಡೆಸಲು 2020 ರ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರವರೆಗೆ ದೇಶಾದ್ಯಂತ ನಡೆಸಲು ನಡೆಸಲು ನಿರ್ಧರಿಸಲಾಗಿತ್ತು. ಇದಕ್ಕಾಗಿ ಡಿಸೆಂಬರ್ 24, 2019 ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯೂ ಸಿಕ್ಕಿತ್ತು. 2021 ರ ಜನಗಣತಿಗಾಗಿ 8,754.23 ಕೋಟಿ ರೂಪಾಯಿ, ರಾಷ್ಟ್ರೀಯ ಜನಸಂಖ್ಯಾ ನೋಂದಣಿಗಾಗಿ 3,941.35 ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ಆದರೆ, ಕೋವಿಡ್​​ ಕಾರಣಕ್ಕಾಗಿ ಎಲ್ಲವನ್ನೂ ರದ್ದು ಮಾಡಲಾಗಿತ್ತು.

2011 ರ ಬಳಿಕ ನೆನೆಗುದಿಗೆ ಬಿದ್ದಿರುವ ಜನಗಣತಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯು (ಎನ್​ಪಿಆರ್​) ಈ ವರ್ಷವೂ ನಡೆಯುವ ಅನುಮಾನವಿದೆ. ಇದಕ್ಕೆ ಕಾರಣ ಇಂದು ಮಂಡನೆಯಾದ ಬಜೆಟ್​ನಲ್ಲಿ ಈ ಅಭಿಯಾನಕ್ಕಾಗಿ ಕೇವಲ 574.80 ಕೋಟಿ ರೂಪಾಯಿ ಮಾತ್ರ ಹಂಚಿಕೆ ಮಾಡಲಾಗಿದೆ.

How much does the census cost?

ಅಧಿಕಾರಿಗಳ ಮಾಹಿತಿಯ ಪ್ರಕಾರ, ಸಂಪೂರ್ಣ ಜನಗಣತಿ ಮತ್ತು ಎನ್​ಪಿಆರ್​ ಅಭಿಯಾನಕ್ಕಾಗಿ 12 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚು ವೆಚ್ಚವಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ UNION BUDGET 2025 ಇದಕ್ಕಾಗಿ ಕೇವಲ 574.80 ಕೋಟಿ ರೂ.ಗಳನ್ನು ನಿಗದಿಪಡಿಸಿದ್ದಾರೆ. 2024-25ರಲ್ಲೂ 572 ಕೋಟಿ ರೂಪಾಯಿ ಮೀಸಲಿಡಲಾಗಿತ್ತು.

Digital Census:

UNION BUDGET 2025 ಸ್ವಯಂ ಗಣತಿಯಲ್ಲಿ ಆಧಾರ್ ಅಥವಾ ಮೊಬೈಲ್ ಸಂಖ್ಯೆ ಕಡ್ಡಾಯವಾಗಿರುತ್ತದೆ. ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿಯು ಸುಮಾರು 35ಕ್ಕೂ ಅಧಿಕ ಪ್ರಶ್ನೆಗಳನ್ನು ಸಿದ್ಧಪಡಿಸಿದೆ. ಅದರಲ್ಲಿ ಕುಟುಂಬದ ದೂರವಾಣಿ, ಇಂಟರ್ನೆಟ್ ಸಂಪರ್ಕ, ಮೊಬೈಲ್ ಅಥವಾ ಸ್ಮಾರ್ಟ್‌ಫೋನ್, ಬೈಸಿಕಲ್, ಸ್ಕೂಟರ್ ಅಥವಾ ಮೋಟಾರ್‌ಸೈಕಲ್ ಅಥವಾ ಮೊಪೆಡ್ ಅನ್ನು ಹೊಂದಿದೆಯೇ ಮತ್ತು ಕಾರು, ಜೀಪ್ ಅಥವಾ ವ್ಯಾನ್ ಅನ್ನು ಹೊಂದಿದ್ದಾರೆಯೇ ಎಂಬುದೂ ಇದೆ.

ನಾಗರಿಕರು ಮನೆಯಲ್ಲಿ ಬಳಸುವ ಧಾನ್ಯಗಳು, ಕುಡಿಯುವ ನೀರಿನ ಮೂಲ, ಬೆಳಕಿನ ಮೂಲ, ಶೌಚಾಲಯ, ಸ್ನಾನದ ಮನೆಯ ಸೌಲಭ್ಯ, ಅಡುಗೆಮನೆ ಮತ್ತು LPG/PNG ಸಂಪರ್ಕದ ಲಭ್ಯತೆ, ಅಡುಗೆಗೆ ಬಳಸುವ ಇಂಧನ ಮತ್ತು ರೇಡಿಯೋ, ಟ್ರಾನ್ಸಿಸ್ಟರ್ ಮತ್ತು ದೂರದರ್ಶನದ ಪ್ರಶ್ನೆಗಳೂ ಇರಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಾರಿ UNION BUDGET 2025 ನಡೆಯುವ ಜನಗಣತಿ ಡಿಜಿಟಲ್​ ಮಾದರಿಯಲ್ಲಿ ನಡೆಯಲಿದೆ. ನಾಗರಿಕರೇ ಸ್ವಯಂ ತಮ್ಮ ಮಾಹಿತಿಯನ್ನು ತುಂಬಬೇಕಿದೆ. ಸರ್ಕಾರಿ ಎಣಿಕೆದಾರರ ಮೂಲಕ ಜನಗಣತಿ ಫಾರ್ಮ್ ಅನ್ನು ಭರ್ತಿ ಮಾಡುವ ಮೊದಲು ಜನರು ಎನ್​​ಪಿಆರ್​ ಮಾಹಿತಿಯನ್ನು ಕಡ್ಡಾಯವಾಗಿ ನೀಡಬೇಕು. ಇದಕ್ಕಾಗಿ ಜನಗಣತಿ ಪ್ರಾಧಿಕಾರವು ಸ್ವಯಂ ಗಣತಿ ಪೋರ್ಟಲ್ ಅನ್ನು ವಿನ್ಯಾಸಗೊಳಿಸಿದೆ.

ಇದನ್ನು ಓದಿರಿ : CM SIDDARAMAIAH : ಸಂವಿಧಾನ ಬದಲಾಯಿಸಿ ಮನುಸ್ಮೃತಿ ತರುವ ಹುನ್ನಾರ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Samantha News: ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ...

A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

Transfer or Retirement Fix! News ತಿರುಪತಿ ಲಡ್ಡು ಪ್ರಸಾದದ ಅಪವಿತ್ರ ವಿವಾದ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. Laddu ವಿವಾದದ ಬಳಿಕ ತಿರುಮಲ ತಿರುಪತಿ...

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...