spot_img
spot_img

UNION BUDGET SESSION : ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆ, ಸಂಜೆ ಪ್ರಧಾನಿ ಮೋದಿ ಉತ್ತರ

spot_img
spot_img

Share post:

New Delhi News:

UNION BUDGET SESSION ನಾಲ್ಕನೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಉತ್ತರ ನೀಡಲಿದ್ದಾರೆ. ಮೂರನೇಯ ದಿನದಂದು ಅಂದರೆ ನಿನ್ನೆ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್​ ಗಾಂಧಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ್ದರು. ಈ ವೇಳೆ ಅವರು ಎನ್​ಡಿಎ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

ಮೋದಿ ನೇತೃತ್ವದ ಸರ್ಕಾರ ಮೇಕ್​ ಇನ್​ ಇಂಡಿಯಾ ಯೋಜನೆಯನ್ನೇನೋ ತಂದಿದೆ. ಇದರ ಉದ್ದೇಶವೂ ಸರಿಯಿದೆ, ಆದರೆ ಗುರಿ ಮುಟ್ಟಲು ಸರ್ಕಾರ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ. 2014ರಲ್ಲಿ 15.3ರಷ್ಟು ಇದ್ದ ಜಿಡಿಪಿಯಲ್ಲಿ ಉತ್ಪಾದನೆಯ ಪಾಲು ಇದೀಗ ಶೇ 12.6ಕ್ಕೆ ಇಳಿಕೆ ಕಂಡಿದೆ. UNION BUDGET SESSION ಕಳೆದ 60 ವರ್ಷಗಳಲ್ಲಿ ಇದು ಕಡಿಮೆಯಾಗುತ್ತಲೇ ಸಾಗಿದೆ.

ಇದೇ ವೇಳೆ ಜಾತಿ ಗಣತಿ ದತ್ತಾಂಶಕ್ಕೆ ಕೃತಕ ಬುದ್ಧಿಮತ್ತೆ (ಎಐ) ಅಳವಡಿಸುವುದರಿಂದ ಪ್ರಯೋಜನವಾಗಲಿದೆ ಎಂದು ಸಲಹೆ ನೀಡಿದರು.ಸಂಸತ್​​​ನ ಬಜೆಟ್​ ಅಧಿವೇಶನದ ನಾಲ್ಕನೇಯ ದಿನವಾದ ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.

Parliamentary Affairs Minister demands Rahul’s apology:

ವಿಪಕ್ಷ ನಾಯಕನ ಸ್ಥಾನ ಎಂಬುದು ಜವಾಬ್ದಾರಿಯುತ ಸ್ಥಾನವಾಗಿದ್ದು, ಅವರು ಯೋಚಿಸದೇ ತಮ್ಮ ಹೇಳಿಕೆಯನ್ನು ನೀಡಬಾರದು. ರಾಹುಲ್​ ಗಾಂಧಿ ಅವರ ಹೇಳಿಕೆಗಳು ಹಗುರವಾಗಿದ್ದವು. ಅವರು ತಮ್ಮ ಹೇಳಿಕೆಗಳನ್ನು ದೃಢೀಕರಿಸಬೇಕು, ಇಲ್ಲದಿದ್ದರೆ ಅಧ್ಯಕ್ಷರು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

UNION BUDGET SESSION ರಾಹುಲ್​ ಗಾಂಧಿ ಭಾಷಣದ ಬೆನ್ನಲ್ಲೇ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ರಾಹುಲ್​ ಗಾಂಧಿ ಕ್ಷಮೆಯಾಚಿಸುವಂತೆ ಆಗ್ರಹಿಸಿದರು. ತಮ್ಮ ಆರೋಪಗಳನ್ನು ಸಾಬೀತುಪಡಿಸಲು, ಅದಕ್ಕೆ ಅಗತ್ಯ ದಾಖಲೆಗಳನ್ನು ಒದಗಿಸುವಂತೆ ಸ್ವೀಕರು ನಾಲ್ಕು ಮನವಿ ಮಾಡಿದರು. ಆದರೆ, ರಾಹುಲ್​ ಗಾಂಧಿ ಅವರು ಯಾವುದೇ ಅಗತ್ಯ ಪುರಾವೆಗಳನ್ನು ನೀಡದ ಅವರು ಭಾಷಣ ಮಾಡಿ ತೆರಳಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನವರಿ 31ರಿಂದ ಸಂಸತ್​​ನ ಬಜೆಟ್​ ಅಧಿವೇಶನ ಆರಂಭವಾಗಿದ್ದು, ಮೊದಲ ದಿನದಂದು ಜಂಟಿ ಸದನ ಉದ್ದೇಶಿಸಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಿದ್ದರು. ಫೆ. 1ರಂದು ಕೇಂದ್ರ ಬಜೆಟ್​ ಮಂಡನೆ ಮಾಡಲಾಗಿತ್ತು. ಸೋಮವಾರದಿಂದ 3 ಬಜೆಟ್​ ಮೇಲಿನ ವಂದನಾ ನಿರ್ಣಯ ಸಾಗಿದೆ.

ಮೊದಲ ಹಂತದ ಬಜೆಟ್​ ಅಧಿವೇಶನ ಫೆ. 13ಕ್ಕೆ ಮುಕ್ತಾಯಗೊಳ್ಳಲಿದ್ದು, ಮಾರ್ಚ್​ 10 ರಿಂದ ಬಜೆಟ್​​ ಅಧಿವೇಶನದ 2ನೇ ಹಂತದ ಕಲಾಪಗಳು ಆರಂಭಗೊಳ್ಳಲಿವೆ. ಏಪ್ರಿಲ್​ 4ಕ್ಕೆ ಅಧಿವೇಶನ ಮುಕ್ತಯವಾಗಲಿದೆ. ಮೂರನೇ ದಿನದ ಬಜೆಟ್​ ಅಧಿವೇಶನದಲ್ಲಿ ಮಹಾ ಕುಂಭ ಮೇಳ ಕಾಲ್ತುಳಿತ ವಿಚಾರವನ್ನು ಪ್ರಸ್ತಾಪಿಸಿ ಚರ್ಚೆಗೆ ವಿಪಕ್ಷಗಳು ಪಟ್ಟು ಹಿಡಿದವು. ಈ ಬೆನ್ನಲ್ಲೇ ಗದ್ದಲ ಏರ್ಪಟ್ಟವು. ಅನೇಕ ಸಂಸದರು ಸದನದಿಂದ ಹೊರ ನಡೆದರು.

ಇದನ್ನು ಓದಿರಿ : World Cancer Day 2025: 5 Surprising Things That Put You At Risk Of Cancer, Including Your Digital Devices!

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...