spot_img
spot_img

US CONSULATE IN BENGALURU : ನಾಳೆ ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ ಆರಂಭ

spot_img
spot_img

Share post:

New Delhi News:

BENGALURU ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ವಿದೇಶಾಂಗ ಸಚಿವ ಜೈ ಶಂಕರ್ ಅವರಿಗೆ ಮೈಸೂರ್ ಪಾಕ್​ ನೀಡಿ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.ಈ ಕಾರ್ಯ ಸಾಧ್ಯವಾಗುವಲ್ಲಿ ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಸಚಿವ ಜೈ ಶಂಕರ್​ ಪಾತ್ರವೂ ಇದೆ. ಈ ಹಿನ್ನೆಲೆ BENGALURU ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಮೈಸೂರ್​ ಪಾಕ್​ ನೀಡಿ ಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

BENGALURUಗರ ಬಹು ಬೇಡಿಕೆಯ ಅಮೆರಿಕ ಕಾನ್ಸುಲೇಟ್​​ ಕಚೇರಿಗೆ ಈಗಾಗಲೇ ಹಸಿರು ನಿಶಾನೆ ಸಿಕ್ಕಿದ್ದು, ನಾಳೆಯಿಂದ ಆರಂಭವಾಗಲಿದೆ. ಇನ್ನು BENGALURUನಲ್ಲಿ ಯಾವ ಸ್ಥಳದಲ್ಲಿ ಈ ಕಚೇರಿಯಾಗಲಿದೆ ಎಂಬುದು ನಿರ್ಧಾರವಾಗಿಲ್ಲ. ಆದರೆ, ಕಚೇರಿ ಆರಂಭದ ಸಾಂಪ್ರದಾಯಿಕ ಕಾರ್ಯಕ್ರಮವೂ ನಾಳೆ ಅಂದರೆ ಜನವರಿ 17ರಂದು ವಿಠಲ್​ ಮಲ್ಯ ರಸ್ತೆಯ ಜೆಡಬ್ಲ್ಯೂ ಮೆರಿಯೇಟ್​​ ಹೋಟೆಲ್​ನಲ್ಲಿ ನಡೆಯಲಿದೆ. ಅಮೆರಿಕದ ಭಾರತ ರಾಯಭಾರಿ ಎರಿಕ್​ ಗರ್ಸೆಟ್ಟಿ ಮತ್ತು ಅವರ ಉನ್ನತ ಮಟ್ಟದ ನಿಯೋಗ, ಪ್ರಮುಖ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ನಮ್ಮ ನಾಡಿನ ಸಿಹಿ ಮೈಸೂರ್ ಪಾಕ್​ ನೀಡಿ ಅವರಿಗೆ ಕೃತ್ಯಜ್ಞತೆ ಸಲ್ಲಿಸುವುದಕ್ಕಿಂತ ಉತ್ತಮ ಮಾರ್ಗವಿಲ್ಲ ಎಂದು ತೇಜಸ್ವಿ ಸೂರ್ಯ ವಿದೇಶಾಂಗ ಸಚಿವರಿಗೆ ಸಿಹಿ ಹಂಚುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಈ ಹಿನ್ನೆಲೆ ಬುಧವಾರ ವಿದೇಶಾಂಗ ಸಚಿವ ಜೈ ಶಂಕರ್​ ಅವರನ್ನು ಸಂಸದ ತೇಜಸ್ವಿ ಸೂರ್ಯ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ವೇಳೆ ಇದು ಸಾಧ್ಯವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಎಸ್​ ಜೈ ಶಂಕರ್​ ಅವರ ಪ್ರಯತ್ನದಿಂದ.ಕಾನ್ಸುಲೇಟ್​​ ​ ಕಚೇರಿ ಆರಂಭದಿಂದ ಎರಡು ದೇಶಗಳ ನಡುವಿನ ವಾಣಿಜ್ಯ ಮತ್ತು ವ್ಯಾಪಾರಕ್ಕೆ ಉತ್ತೇಜನ ಸಿಗುತ್ತದೆ. ಹಾಗೇ ಉದ್ಯಮಿಗಳಿಗೆ ಪ್ರಯಾಣವೂ ಸರಾಗವಾಗುತ್ತದೆ, ಈ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಮೋದಿ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

ಇದೇ ವೇಳೆ ಮುಂದುವರೆದು ವಿಡಿಯೋದಲ್ಲಿ ಮಾತನಾಡಿರುವ ಸೂರ್ಯ, ಬೆಂಗಳೂರಿನಲ್ಲಿ ಯುಎಸ್​ ಕಾನ್ಸುಲೇಟ್​​ ಕಚೇರಿ ಸ್ಥಾಪನೆಯಾಗುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ನಗರವೂ ಈಗಾಗಲೇ ದೇಶದ ಐಟಿ ರಾಜಧಾನಿಯಾಗಿ ಗುರುತಿಸಿಕೊಂಡಿದ್ದು, ಅನೇಕ ಮಲ್ಟಿನ್ಯಾಷನಲ್​ ಕಂಪನಿಗಳು ಇಲ್ಲಿವೆ.

BENGALURUನಲ್ಲಿ ಯುಎಸ್​ ಕಾನ್ಸುಲೇಟ್​​ ಕಚೇರಿ ಸ್ಥಾಪನೆಗೆ ತೇಜಸ್ವಿ ಸೂರ್ಯ 2019ರ ನವೆಂಬರ್​ನಲ್ಲಿ ಜೈ ಶಂಕರ್​ ಅವರನ್ನು ಭೇಟಿಯಾಗಿ ಲಿಖಿತ ಮನವಿ ನೀಡಿದ್ದರು. (ಐಎಎನ್​ಎಸ್​)ತೇಜಸ್ವಿ ಸೂರ್ಯ BENGALURUನಲ್ಲಿ ಯುಎಸ್​ ಕಾನ್ಸುಲೇಟ್​​ ​ ಕಚೇರಿ ಆರಂಭಕ್ಕೆ ಮನವಿ ಮಾಡಿದ್ದರು. ಅವರು ಈ ಬಗ್ಗೆ ಬಲವಾಗಿ ಪದೇ ಪದೇ ಪ್ರಯತ್ನ ಮಾಡುತ್ತಿದ್ದ ಹಿನ್ನಲೆ ನಾನು ಮುಂದಿನ ಬಾರಿ ಯುಎಸ್​​ ರಾಜ್ಯ ಕಾರ್ಯದರ್ಶಿ ಅಂಥೋನಿ ಬ್ಲಿಂಕೆನ್​ ಅವರನ್ನು ಭೇಟಿಯಾದಾಗ ಈ ಕುರಿತು ಮಾತಾಡಿರುವ ಭರವಸೆ ನೀಡಿದ್ದೆ. ಅದು ಈಗ ಸಾಧ್ಯವಾಗಿದೆ ಎಂದರು.

ಇದನ್ನು ಓದಿರಿ : FARMERS PROTEST : ಶಂಭು ಗಡಿಯಿಂದ ದೆಹಲಿಗೆ 101 ರೈತ

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...