spot_img
spot_img

ಮಲಯಾಳಂ ನಟ ದಿಲೀಪ್​ಗೆ ಶಬರಿಮಲೆಯಲ್ಲಿ ವಿಐಪಿ ದರ್ಶನ : ಹೈಕೋರ್ಟ್ ಗರಂ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕೊಚ್ಚಿ(ಕೇರಳ): ಡಿಸೆಂಬರ್​ 5ರಂದು ನಟ ದಿಲೀಪ್​ ಶಬರಿಮಲೆ ದೇಗುಲ ದರ್ಶನ ಮಾಡಿದ್ದರು. ಈ ವೇಳೆ ಅವರಿಗೆ ವಿಶೇಷ ವಿಐಪಿ ದರ್ಶನ ಸೌಲಭ್ಯ ನೀಡಲಾಗಿತ್ತು ಎಂಬ ವರದಿಯ ಆಧಾರದ ಮೇಲೆ ಕೇರಳ ಹೈಕೋರ್ಟ್​ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ದೇವರ ದರ್ಶನದ ಸಾಲಿನಲ್ಲಿ ಕಾದು ನಿಂತಿದ್ದ ಸಾವಿರಾರು ಭಕ್ತರನ್ನು ಹಲವು ಗಂಟೆಗಳ ಕಾಲ ತಡೆದು, ಮಲಯಾಳಂನ ವಿವಾದಿತ ನಟ ದಿಲೀಪ್​ ಅವರಿಗೆ ವಿಶೇಷ ದರ್ಶನ ಕಲ್ಪಿಸಿದ ಪೊಲೀಸರು ಹಾಗೂ ಟ್ರಾವಂಕೂರ್​ ದೇವಸ್ವಂ ಬೋರ್ಡ್​ (ಟಿಡಿಬಿ) ನಡೆಗೆ ಕೇರಳ ಹೈಕೋರ್ಟ್ ಗರಂ ಆಗಿದೆ.

ಅನೇಕರು ದರ್ಶನ ಪಡೆಯಲು ಸಾಧ್ಯವಾಗದೇ ಹಾಗೆಯೇ ತೆರಳಿದ್ದಾರೆ. ಅವರಿಗೆ ಅಷ್ಟು ಹೊತ್ತು ಗರ್ಭಗುಡಿ ಎದುರು ನಿಲ್ಲಲು ಅವಕಾಶ ಹೇಗೆ ನೀಡಲಾಯಿತು ಎಂದು ಕೋರ್ಟ್​ ಪ್ರಶ್ನಿಸಿತು.

ನ್ಯಾ.ಅನಿಲ್​ ಕೆ.ನರೇಂದ್ರನ್​ ಮತ್ತು ನ್ಯಾ.ಮುರಳಿ ಕೃಷ್ಣ ಎಸ್ ಅವರಿದ್ದ​ ಪೀಠ ಈ ಕುರಿತು ಪ್ರಶ್ನಿಸಿದೆ. ನಟನಿಗೆ ಯಾವ ಆಧಾರದ ಮೇಲೆ ಈ ಸೌಲಭ್ಯವನ್ನು ಕಲ್ಪಿಸಲಾಯಿತು?, ಈ ಕುರಿತ ಸಿಸಿಟಿವಿ ದೃಶ್ಯಗಳನ್ನು ಶನಿವಾರ ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದು ಪೊಲೀಸರಿಗೆ ಸೂಚಿಸಿದೆ.

ನ್ಯಾಯಾಲಯದ ಆದೇಶದಂತೆ ಸಾಂವಿಧಾನಿಕ ಅಧಿಕಾರ ಹೊಂದಿರುವವರು ಮಾತ್ರ ಈ ರೀತಿಯ ವಿಶೇಷ ಸೌಲಭ್ಯ ಪಡೆಯಬಹುದು. ಆದರೆ, (ಡಿಸೆಂಬರ್​ 5) ನಟನಿಗೆ ನೀಡಿದ ಅತಿಥ್ಯ ನಿಯಮದ ಸಂಪೂರ್ಣ ಉಲ್ಲಂಘನೆ ಎಂದು ಕೋರ್ಟ್ ಚಾಟಿ ಬೀಸಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SHIVASENA SUPPORT TO BJP : ಬಿಜೆಪಿ ಅಭ್ಯರ್ಥಿಗಳಿಗೆ ಶಿಂಧೆ ಬಣದ ಶಿವಸೇನೆ ಬೆಂಬಲ ಘೋಷಣೆ

New Delhi News: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP...

SIGANDUR BRIDGE : ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆShimoga News: ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ...

Shivamogga News: ಸಾಗರ ತಾಲೂಕಿನ SIGANDUR BRIDGE ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ...

HOW TO AWARE OF CYBER FRAUD : ಹಾಗಿದ್ರೆ ಮಾತ್ರ ಸೈಬರ್ ವಂಚನೆಯಿಂದ ಬಚಾವ್ ಆಗಲು ಸಾಧ್ಯ

Hyderabad News: ನಿಜವೆಂದು ತೋರುವ ಈ ನಕಲಿ ವೆಬ್​​ಸೈಟ್​ ಪತ್ತೆ ಮಾಡುವುದು ಹೇಗೆ, ಎಚ್ಚರಿಕೆ ಹೇಗೆ ವಹಿಸಬೇಕು, ವಂಚನೆಗೆ ಗುರಿಯಾಗದಂತೆ ಇರುವುದು ಹೇಗೆ ಎಂಬ ಇಲ್ಲಿದೆ...

COFFEE EXPORTS : 1.29 ಶತಕೋಟಿ ಡಾಲರ್ಗೆ ತಲುಪಿದ ಭಾರತದ ಕಾಫಿ ರಫ್ತು

New Delhi News: ಭಾರತದ COFFEE ರಫ್ತು ದ್ವಿಗುಣಗೊಂಡಿದೆ. ಈ ಮೂಲಕ ದೇಶದ ರಫ್ತಿನ ಪ್ರಮಾಣ ಹೆಚ್ಚಿಸಲು ತನ್ನದೇ ಕೊಡುಗೆ ನೀಡಿದೆ.ಉತ್ತಮ ಗುಣಮಟ್ಟ ಮತ್ತು ಅನನ್ಯ...