spot_img
spot_img

ಬೆಳಗಾವಿ: ನೀರು ನುಗ್ಗಿದ್ದರಿಂದ ಮನೆ ಖಾಲಿ ಮಾಡಿದ ಜನ: ವಿಷಯ ಕೇಳಿ ಹೃದಯಾಘಾತದಿಂದ ವ್ಯಕ್ತಿ ಸಾವು

spot_img
spot_img

Share post:

ಬೆಳಗಾವಿ: ನಗರದಲ್ಲಿ ಮಹಾಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅದೇಷ್ಟೋ ಕುಟುಂಬಗಳ ಬದುಕು ಬೀದಿಗೆ ಬಂದಿದೆ. ಮನೆಯೊಳಗೆ ನೀರು ನುಗ್ಗಿದ್ದರಿಂದ ರಾತ್ರೋ ರಾತ್ರಿ 20ಕ್ಕೂ ಅಧಿಕ ಮನೆಗಳಲ್ಲಿನ ಜನ ಮನೆ ತೊರೆದಿದ್ದಾರೆ.

ಹೌದು, ಬೆಳಗಾವಿಯ ಖಾಸಬಾಗದ ರಾಘವೇಂದ್ರ ಕಾಲೋನಿಯಲ್ಲಿ 20ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದೆ. ನೀರನ್ನು ಹೊರ ಹಾಕಲು ಆಗದೇ ರಾತ್ರೋ ರಾತ್ರಿ ಮನೆಗಳಿಗೆ ಕೀಲಿ ಹಾಕಿ, ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ. ಮತ್ತೊಂದಿಷ್ಟು ಜನರು ತಮ್ಮ ಮನೆಯಲ್ಲೆ ನೀರನ್ನು ಹೊರ ಹಾಕಲು ಹರಸಾಹಸ ಪಡುತ್ತಿದ್ದಾರೆ. ಮನೆ ಹೊರಗೂ, ಒಳಗೂ ಮೊಣಕಾಲುದ್ದ ನೀರು ನಿಂತಿದ್ದರಿಂದ ಇಲ್ಲಿನ ನಿವಾಸಿಗಳು ಬದುಕು ಮೂರಾಬಟ್ಟೆಯಾಗಿದೆ.

ಪ್ರತಿ ವರ್ಷ ಮಳೆ ಬಂದಾಗ ಈ ರೀತಿ ಮನೆಗೆ ನೀರು ನುಗ್ಗುವುದು ಸಾಮಾನ್ಯವಾಗಿದೆ. ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ಇಲ್ಲ. ಅಸಮರ್ಪಕ ಚರಂಡಿ ವ್ಯವಸ್ಥೆಯಿಂದ ಇಲ್ಲಿನ ಜನರು ಪಡಬಾರದ ಪಡಿಪಾಟಲು ಅನುಭವಿಸುತ್ತಿದ್ದಾರೆ. ಕುಡಿಯುವ ನೀರಿನ ಜೊತೆಗೆ ಚರಂಡಿ ನೀರು ಸೇರಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುತ್ತಿದ್ದಾರೆ.

ಈ ಕುರಿತು ಸ್ಥಳೀಯ ನಿವಾಸಿ ವಿಶ್ವಾಸ ಕುಂಬೋಜಕರ್ ಮಾತನಾಡಿ, ಪ್ರತಿ ವರ್ಷ ಮಳೆಗಾಲದಲ್ಲಿ ಈ ಸಮಸ್ಯೆ ತಪ್ಪಿದ್ದಲ್ಲ. ಯಾವೊಬ್ಬ ಜನಪ್ರತಿನಿಧಿ, ಅಧಿಕಾರಿ ಇಲ್ಲಿ ಭೇಟಿ ಕೊಟ್ಟಿಲ್ಲ. ಮನೆಯಲ್ಲಿನ‌ ಸಾಮಾನುಗಳು ಈಗ ನೀರಲ್ಲೆ ಇವೆ. ಒಂದಿಷ್ಟು ವಸ್ತುಗಳ‌ನ್ನು ಮೇಲಿನ ಮಹಡಿಯಲ್ಲಿ ಇಟ್ಟಿದ್ದೇವೆ ಎಂದು ತಮ್ಮ‌ ಅಳಲು ತೋಡಿಕೊಂಡರು.

ಸ್ಥಳೀಯ ಯುವಕ ತೇಜಸ್​ ಕುಮಾರ್ ಕಾಂಬಳೆ ಮಾತನಾಡಿ, ಸ್ಥಳೀಯ ಶಾಸಕರು, ಮಹಾನಗರ ಪಾಲಿಕೆ, ನಗರಸೇವಕರಿಗೆ ಅನೇಕ ಬಾರಿ ಮನವಿ ಮಾಡಿಕೊಂಡಿದ್ದೇವೆ. ಆದರೂ ಅವರು ಸ್ಪಂದಿಸಿಲ್ಲ. ಏಕಾಏಕಿ ಮನೆಯೊಳಗೆ ನೀರು ಬಂದರೆ ಸಣ್ಣ ಮಕ್ಕಳು, ವೃದ್ಧರನ್ನು ಕರೆದುಕೊಂಡು ಎಲ್ಲಿಗೆ ಹೋಗಬೇಕು‌. ಚರಂಡಿ ನೀರು ವಾಪಸ್ ಮನೆಗೆ ಬರುತ್ತಿದೆ. ಒಟ್ಟಾರೆ ಅವೈಜ್ಞಾನಿಕವಾಗಿ ಲೇಔಟ್ ನಿರ್ಮಿಸಿದ್ದರಿಂದ ಇಷ್ಟೇಲ್ಲಾ ಸಮಸ್ಯೆ ಆಗುತ್ತಿದೆ. ನಮ್ಮ ಕಡೆಯಿಂದ ಲಕ್ಷ ಲಕ್ಷ ಆಸ್ತಿ ತೆರಿಗೆ ಸಂಗ್ರಹಿಸಿ ಈ ರೀತಿ‌ ಮಾಡಿದ್ದಾರೆ ಎಂದು‌ ಆರೋಪಿಸಿದರು.

ಮನೆಗೆ ನೀರು ನುಗ್ಗಿದ್ದು ಕೇಳಿ ಹೃದಯಾಘಾತದಿಂದ ವ್ಯಕ್ತಿ ಸಾವು: ಮತ್ತೊಂದೆಡೆ, ಮನೆಗೆ ನೀರು ನುಗ್ಗಿದ ವಿಚಾರ ಕೇಳಿ ಹೃದಯಾಘಾತದಿಂದ ಮನೆ ಯಜಮಾನ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಗೋಕಾಕ್ ನಗರದಲ್ಲಿ ನಡೆದಿದೆ. ಗೋಕಾಕ್ ಪಟ್ಟಣದ ಉಪ್ಪಾರ ಗಲ್ಲಿ ನಿವಾಸಿ ದಶರಥ ಬಂಡಿ(80) ಮೃತ ದುರ್ದೈವಿ. ನಿನ್ನೆ(ಶುಕ್ರವಾರ) ಸಂಜೆ ಮನೆಗೆ ನೀರು ಬರುವ ವಿಚಾರ ತಿಳಿದು ಹೃದಯಾಘಾತದಿಂದ ಮೃತರಾಗಿದ್ದಾರೆ.

ನಿನ್ನೆ ರಾತ್ರಿ ದಶರಥ ಅವರ ಅಂತ್ಯಸಂಸ್ಕಾರ ಮುಗಿಸಿ ಮನೆಗೆ ವಾಪಸ್​ ಆಗುಷ್ಟರಲ್ಲಿ ಮನೆ ಮುಳುಗಿದೆ. ರಾತ್ರೋರಾತ್ರಿ ಉಟ್ಟಬಟ್ಟೆಯಲ್ಲೇ ಮನೆ ಬಿಟ್ಟು ಕುಟುಂಬಸ್ಥರು ಹೊರಗೆ ಬಂದಿದ್ದಾರೆ. ಮಕ್ಕಳು, ನಾಯಿ ಮರಿಗಳ ಜೊತೆಗೆ ಕಾಳಜಿ ಕೇಂದ್ರಕ್ಕೆ ದಶರಥ ಬಂಡಿ ಕುಟುಂಬ ಸ್ಥಳಾಂತರವಾಗಿದೆ.

spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...