spot_img
spot_img

‘ನಾವೇನು ಲಾಲಿಪಾಪ್ ತಿನ್ತಿರ್ತೀವಾ?’ ಬಾಂಗ್ಲಾಕ್ಕೆ ಮಮತಾ ತಿರುಗೇಟು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕೋಲ್ಕತಾ(ಪಶ್ಚಿಮ ಬಂಗಾಳ): ಭಾರತ ದೇಶದ ಭೂಮಿ ನಮ್ಮದು ಎಂದ ಬಾಂಗ್ಲಾದೇಶದ ರಾಜಕಾರಣಿಗಳಿಗೆ ಸಿಎಂ ಮಮತಾ ತಕ್ಕ ತಿರುಗೇಟು ನೀಡಿದ್ದಾರೆ.

ನೀವು ನಮ್ಮ ದೇಶದ ಭೂಮಿ ಆಕ್ರಮಿಸಿಕೊಳ್ಳಲು ಯತ್ನಿಸಿದರೆ ನಾವೇನು ಲಾಲಿಪಾಪ್ ತಿನ್ತಿರ್ತೀವಾ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಾಂಗ್ಲಾದೇಶದ ರಾಜಕಾರಣಿಗಳಿಗೆ ಸೋಮವಾರ ತಿರುಗೇಟು ಕೊಟ್ಟಿದ್ದಾರೆ. ಬಂಗಾಳ, ಬಿಹಾರ ಮತ್ತು ಒಡಿಶಾದ ಮೇಲೆ ಬಾಂಗ್ಲಾದೇಶ ಕಾನೂನುಬದ್ಧ ಅಧಿಕಾರ ಹಕ್ಕುಗಳಿವೆ ಎಂಬ ಬಾಂಗ್ಲಾದೇಶದ ಕೆಲ ರಾಜಕಾರಣಿಗಳ ಹೇಳಿಕೆಗೆ ಮಮತಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಜನತೆ ಶಾಂತವಾಗಿರುವಂತೆ ಮತ್ತು ಬಾಂಗ್ಲಾದೇಶದ ರಾಜಕಾರಣಿಗಳ ಹೇಳಿಕೆಗಳಿಂದ ಪ್ರಚೋದಿತರಾಗದಂತೆ ಮನವಿ ಮಾಡಿದರು. ಅಲ್ಲದೆ ಕೇಂದ್ರವು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಪಶ್ಚಿಮ ಬಂಗಾಳ ಯಾವಾಗಲೂ ಬದ್ಧವಾಗಿರುತ್ತದೆ ಎಂದು ಹೇಳಿದರು.

ಬಾಂಗ್ಲಾದೇಶದಲ್ಲಿನ ಕೆಲವರ ಪ್ರಚೋದನಕಾರಿ ಹೇಳಿಕೆಗಳಿಂದ ಪ್ರಭಾವಿತರಾಗದಂತೆ ಮತ್ತು ಶಾಂತವಾಗಿರುವಂತೆ ಪಶ್ಚಿಮ ಬಂಗಾಳದ ಜನರಿಗೆ ಮನವಿ ಮಾಡಿದ ಅವರು, ನಮ್ಮ ರಾಜ್ಯದಲ್ಲಿ ಇಮಾಮ್​​ಗಳು ಸಹ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ಖಂಡಿಸಿದ್ದಾರೆ ಎಂದು ಹೇಳಿದರು.

ಇತ್ತೀಚೆಗೆ, ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಕೆಲವು ಬಾಂಗ್ಲಾದೇಶದ ನಾಯಕರನ್ನು ಗೇಲಿ ಮಾಡಿದ ಅವರು, “ಶಾಂತವಾಗಿರಿ, ಆರೋಗ್ಯಕರವಾಗಿರಿ ಮತ್ತು ಮನಸ್ಸಿನ ಶಾಂತಿಯನ್ನು ಹೊಂದಿರಿ” ಎಂದು ಹೇಳಿದರು. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ ಪಿ) ಇತ್ತೀಚೆಗೆ ಢಾಕಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಬಂಗಾಳ, ಬಿಹಾರ ಮತ್ತು ಒಡಿಶಾದ ಮೇಲೆ ದೇಶವು ಕಾನೂನುಬದ್ಧ ಅಧಿಕಾರ ಹೊಂದಿದೆ” ಎಂದು ಹೇಳಿದೆ.

“ಹಿಂದೂಗಳು ಮತ್ತು ಮುಸ್ಲಿಮರು ಮತ್ತು ಇತರ ಎಲ್ಲಾ ಸಮುದಾಯಗಳ ರಕ್ತನಾಳಗಳಲ್ಲಿ ಹರಿಯುವ ರಕ್ತ ಒಂದೇ. ಪಶ್ಚಿಮ ಬಂಗಾಳದಲ್ಲಿ ಪರಿಸ್ಥಿತಿ ಹಾಳಾಗದಂತೆ ನಾವೆಲ್ಲರೂ ಒಟ್ಟಾಗಿ ಪ್ರಯತ್ನಿಸಬೇಕು” ಎಂದು ಅವರು ಹೇಳಿದರು.

“ಬಾಂಗ್ಲಾದೇಶದಲ್ಲಿನ ಪರಿಸ್ಥಿತಿಗಳನ್ನು ಖಂಡಿಸಿ ಜಾತಿ, ಮತ ಅಥವಾ ಸಮುದಾಯವನ್ನು ಲೆಕ್ಕಿಸದೆ ಜನರು ಸಾಮೂಹಿಕ ಪ್ರತಿಭಟನೆ ನಡೆಸಿದ ದೇಶದ ಮೊದಲ ರಾಜ್ಯ ಪಶ್ಚಿಮ ಬಂಗಾಳ” ಎಂದು ಮುಖ್ಯಮಂತ್ರಿ ಮಮತಾ ಹೇಳಿದರು. ಅಶಾಂತಿ ಉಂಟು ಮಾಡುವಂಥ ಯಾವುದೇ ಹೇಳಿಕೆ ನೀಡದಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದ ಅವರು, ಬಾಂಗ್ಲಾದೇಶದ ಬಗ್ಗೆ ವರದಿ ಮಾಡುವಾಗ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಮಾಧ್ಯಮಗಳಿಗೆ ಅವರು ಕೋರಿದರು.

“ನಮ್ಮ ವಿದೇಶಾಂಗ ಕಾರ್ಯದರ್ಶಿ ಮಾತುಕತೆಗಾಗಿ ಬಾಂಗ್ಲಾದೇಶದಲ್ಲಿದ್ದಾರೆ. ಹೀಗಾಗಿ ಈ ಸಂದರ್ಭದಲ್ಲಿ ಅಗತ್ಯಕ್ಕಿಂತ ಹೆಚ್ಚು ಮಾತನಾಡುವುದು ಬೇಡ. ಫಲಿತಾಂಶಕ್ಕಾಗಿ ಕಾಯೋಣ. ನಾವು ಜವಾಬ್ದಾರಿಯುತ ನಾಗರಿಕರು. ನಮ್ಮ ದೇಶ ಒಗ್ಗಟ್ಟಾಗಿದೆ” ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

HIGH COURT:ಕ್ರಿಮಿನಲ್ ಪ್ರಕರಣ ತ್ವರಿತ ವಿಚಾರಣೆಗಾಗಿ ವಿದ್ಯುನ್ಮಾನ ಸಾಕ್ಷ್ಯಾಗಳ ಪರಿಶೀಲನೆ.

Bangalore News: ಕ್ರಿಮಿನಲ್ ಪ್ರಕರಣಗಳ ವಿಚಾರಣೆ ತ್ವರಿತವಾಗಿ ನಡೆಸಬೇಕಿದೆ. ಎಲೆಕ್ಟ್ರಾನಿಕ್ ಸಾಕ್ಷ್ಯವನ್ನು ನ್ಯಾಯಾಲಯವು ಪರಿಗಣಿಸಬೇಕಾದರೆ, ಅದನ್ನು ಪರೀಕ್ಷಕರು/ಪರಿಣಿತರು ದೃಢೀಕರಿಸಬೇಕಿದೆ ಎಂದು ಹೈಕೋರ್ಟ್ ತಿಳಿಸಿದೆ. ಅದರ ಪ್ರಕಾರ...

UNION BUDGET 2025 : ಈ ಬಾರಿಯ ಕೇಂದ್ರ ಬಜೆಟ್ಲ್ಲಿ ಸಿಗುತ್ತಾ ಶಿವಮೊಗ್ಗ to ಚನ್ನಗಿರಿ ರೈಲು ಯೋಜನೆಗೆ ಗ್ರೀನ್ ಸಿಗ್ನಲ್?

Davangere News: ಬಹುದಿನದ ಯೋಜನೆಗಾಗಿ ಚನ್ನಗಿರಿ ಜನ ಕಾಯುತ್ತಿದ್ದು, ಬರುವ 2025ನೇ ಸಾಲಿನ UNIONಬಜೆಟ್​​ನಲ್ಲಿ ನೂತನ ರೈಲು ಮಾರ್ಗಕ್ಕೆ UNIONಸರ್ಕಾರ ಗ್ರೀನ್ ಸಿಗ್ನಲ್ ಕೊಡಬಹುದು ಎಂಬ...

MICRO FINANCE TORTURE:ಬೀದಿ ಪಾಲಾದ ಕುಟುಂಬ; ಡಿಸಿ ಹೇಳಿದ್ದಿಷ್ಟು .

Belgaum News: ಒಂದು ತಿಂಗಳ ಹಸುಗೂಸು, ಬಾಣಂತಿ ಸೇರಿ ಮನೆಯವರನ್ನೆಲ್ಲಾ ಹೊರಗೆ ಹಾಕಿರುವ ಮೈಕ್ರೋ FINANCE ಸಿಬ್ಬಂದಿ, ಕುಟುಂಬವೊಂದರ ಮನೆ ಜಪ್ತಿ ಮಾಡಿದೆ.ಕಳೆದ 5 ವರ್ಷಗಳ...

SAMSUNG GALAXY S25 SERIES : ಭಾರತೀಯ ಮಾರುಕಟ್ಟೆಗೆ ಕಾಲಿಟ್ಟ ಸ್ಯಾಮ್ಸಂಗ್ ಹೊಸ ಸ್ಮಾರ್ಟ್ಫೋನ್ಗಳು

Hyderabad News: ಬಹುನಿರೀಕ್ಷಿತ SAMSUNG GALAXY S25ಸರಣಿಯು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಈ ಫೋನ್‌ಗಳ ಬೆಲೆ ಮತ್ತು ವಿಶೇಷತೆಗಳು ಇಲ್ಲಿವೆ.ದಕ್ಷಿಣ ಕೊರಿಯಾದ ಟೆಕ್ ದೈತ್ಯ...