spot_img
spot_img

WICKET KEEPER INJURY : ಅಭ್ಯಾಸ ವೇಳೆ ಚೆಂಡು ತಗುಲಿ ಕುಸಿದು ಬಿದ್ದ ಸ್ಟಾರ್ ಪ್ಲೇಯರ್

spot_img
spot_img

Share post:

Hyderabad News:

ಚಾಂಪಿಯನ್ಸ್​ ಟ್ರೋಫಿಗಾಗಿ ದುಬೈಗೆ ತೆರಳಿರುವ ಟೀಂ ಇಂಡಿಯಾ ಅಭ್ಯಾಸ ನಡೆಸುತ್ತಿದ್ದು ಈ ವೇಳೆ ಸ್ಟಾರ್​ ಆಟಗಾರ WICKET KEEPER INJURY. ಆದರೆ ಅಭ್ಯಾಸದ ವೇಳೆ ಅನಿರೀಕ್ಷಿತ ಘಟನೆ ನಡೆದಿದ್ದ ಭಾರತೀಯ ಅಭಿಮಾನಿಗಳಿಗೆ ಭಾರೀ ಆತಂಕ ಹುಟ್ಟಿಸಿದೆ. WICKET KEEPER INJURY ಹೌದು ಭಾರತದ ಸ್ಟಾರ್​ ಆಲ್​ರೌಂಡರ್​ ಹಾರ್ದಿಕ್​​ ಪಾಂಡ್ಯ ನೆಟ್ಸ್​ನಲ್ಲಿ ಅಭ್ಯಾಸ ಮಾಡುತ್ತಿದ್ದರು.

ಈ ವೇಳೆ ಅವರು ಹೊಡೆದ ಚೆಂಡು ನೇರವಾಗಿ ಹೋಗಿ ಮೈದಾನದಲ್ಲಿದ್ದ ರಿಷಭ್ ಪಂತ್ ಅವರ ಎಡ ಮೊಣಕಾಲಿಗೆ ಬಲವಾಗಿ ಬಡಿದಿದೆ. ಇದರಿಂದಾಗಿ ಪಂತ್ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಚೆಂಡು ಬಲವಾಗಿ ತಗುಲಿದ ಪರಿಣಾಮ ಪಂತ್ ಕೆಲ ಸಮಯ ನೋವಿನಿಂದ ಒದ್ದಾಡಿದ್ದಾರೆ.

ಈ ವೇಳೆ ಅಲ್ಲೆ ಇದ್ದ ಫೀಲ್ಡಿಂಗ್ ಕೋಚ್ ಮತ್ತು ವೈದ್ಯಕೀಯ ತಂಡ ಧಾವಿಸಿ ಪಂತ್ ಅವರಗೆ ಮೈದಾನದಲ್ಲೆ ಚಿಕಿತ್ಸೆ ನೀಡಿದ್ದಾರೆ. ಇನ್ನು ಮೂರು ದಿನಗಳಲ್ಲಿ ಚಾಂಪಿಯನ್ಸ್​ ಟ್ರೋಫಿ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನವೆ ಭಾರತಕ್ಕೆ ದೊಡ್ಡ ಆತಂಕ ಎದುರಾಗಿದೆ. ಚಾಂಪಿಯನ್ಸ್​ ಟ್ರೋಫಿಗಾಗಿ ಈಗಾಗಲೇ ಟೀಮ್​ ಇಂಡಿಯಾ ಆಟಗಾರರು ದುಬೈಗೆ ತೆರಳಿದ್ದು ಭರ್ಜರಿ ಅಭ್ಯಾಸವನ್ನು ನಡೆಸಿದ್ದಾರೆ.

ಇಂದು ದುಬೈನ ಐಸಿಸಿ ಅಕಾಡೆಮಿಯಲ್ಲಿ ನೆಟ್ ಸೆಷನ್‌ಗಳಲ್ಲೂ ಭಾಗವಹಿಸಿ ಬೆವರು ಸುರಿಸಿದ್ದಾರೆ. WICKET KEEPER INJURY ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಪಂತ್​ ಅವರನ್ನು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯಲಾಯಿತು. ಸ್ವಲ್ಪ ಸಮಯದ ನಂತರ ಪಂತ್ ಚೇತರಿಸಿಕೊಂಡು ಮತ್ತೆ ಅಭ್ಯಾಸಕ್ಕೆ ಮರಳಿದರು. ಆದರೆ ಅಭ್ಯಾಸದ ವೇಳೆ ಸಂಪೂರ್ಣ ಚೇತರಿಸಿಕೊಂಡಂತೆ ಕಾಣಲಿಲ್ಲ.

2022ರಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಪಂತ್​ ಅವರ ಕಾಲಿಗೆ ಗಾಯವಾಗಿದ್ದ ಕಡೆಗೆ ಚೆಂಡು ಬಡೆದಿದೆ. ಇದು ದೊಡ್ಡ ಗಾಯವಾಗಿ ಬದಲಾಗುವ ಸಾಧ್ಯತೆ ಇದೆ ಎಂದು ತಂಡದ ಆಡಳಿತ ಮಂಡಳಿ ಆತಂಕ ವ್ಯಕ್ತಪಡಿಸಿದೆ. ಪಂದ್ಯಾವಳಿಗೂ ಮುನ್ನವೆ ಈ ಘಟನೆ ನಡೆದಿದ್ದು ಅಭಿಮಾನಿಗಳಿಗೆ ಆತಂಕ ಉಂಟುಮಾಡಿದೆ.

Champions Trophy:

8 ವರ್ಷಗಳ ಬಳಿಕ ಚಾಂಪಿಯನ್ಸ್​ ಟ್ರೋಫಿ ನಡೆಯುತ್ತಿದೆ. ಈ ಹಿಂದೆ 2017ರಲ್ಲಿ ಕೊನೆಯ ಬಾರಿಗೆ ಪಂದ್ಯಾವಳಿ ನಡೆದಿತ್ತು. ಅದರಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿತ್ತು. 2025ರ ಚಾಂಪಿಯನ್ಸ್​ ಟ್ರೋಫಿಯ ಮೊದಲ ಪಂದ್ಯ ಫೆ​, 19 ರಂದು ನಡೆಯಲಿದೆ.

ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್​ ತಂಡಗಳು ಮುಖಾಮುಖಿಯಾಗಲಿವೆ. ಫೆ​, 20ರಂದ ಭಾರತ ತನ್ನ ಮೊದಲ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಆಡಲಿದೆ. ಫೆ, 23 ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ.

Team India:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಇದನ್ನು ಓದಿರಿ : Champions Trophy 2025: Indian Flag Missing At Karachi Stadium;

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...