ತಬಲಾ ಮಾಂತ್ರಿಕ ಎಂದೇ ಖ್ಯಾತರಾಗಿರುವ ಜಾಕಿರ್ ಹುಸೇನ್ ನಿಧನರಾಗಿದ್ದಾರೆ, ಕೇವಲ ಭಾರತ ಮಾತ್ರವಲ್ಲ ಇಡೀ ವಿಶ್ವವೇ ಮರುಗಿದೆ. ಅವರು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು, ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. 73ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಜಾಕಿರ್ ಹುಸೇನ್ ಮೊದಲ ಆಲ್ಬಂ ಜಾಕಿರ್ ತಬಲಾ ಸದ್ದು ಜನರ ನಶೆ ಏರುವಂತೆ ಮಾಡುತ್ತಿತ್ತು, ಜನ ಅವರನ್ನು ವಾಹ್ ಉಸ್ತಾದ್ ಎನ್ನುತ್ತಿದ್ದರು. ಜಾಕಿರ್ ತನ್ನ ಕಲೆಯ ಪತಾಕೆಯನ್ನು ದೇಶ ಮಾತ್ರವಲ್ಲದೆ ವಿಶ್ವದಾದ್ಯಂತ ಹಾರಿಸಿದ್ದರು. ಜಾಕಿರ್ ಹುಸೇನ್ ಮಾರ್ಚ್ 9 1951ರಲ್ಲಿ ಮುಂಬೈನಲ್ಲಿ ಜನಿಸಿದರು.
ತಬಲಾ ವಾದನ ಜಾಕಿರ್ ಪಯಣ ಜಾಕಿರ್ ಚಿಕ್ಕ ವಯಸ್ಸಿನಲ್ಲೇ ತಬಲಾ ಮೇಲಿನ ಹಿಡಿತವನ್ನು ಗಟ್ಟಿಗೊಳಿಸಿದ್ದರು. 11-12ರಿಂದಲೇ ತಬಲಾ ನುಡಿಸುವ ಪಯಣ ಆರಂಭಿಸಿದ್ದರು. ಸಂಗೀತ ಕಚೇರಿಗಳಿಗಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಿದ್ದರು. ತಾವು ರೈಲಿನಲ್ಲಿ ಪ್ರಯಾಣಿಸುವಾಗ ಕಾಯ್ದಿರಿಸಿದ ಟಿಕೆಟ್ಗಳನ್ನು ಪಡೆಯುವಷ್ಟು ಹಣ ತನ್ನ ಬಳಿ ಇರಲಿಲ್ಲ ಎಂದು ಹೇಳಿಕೊಂಡಿದ್ದರು.
ಅವರು ತಬಲಾ ವಾದಕ ಉಸ್ತಾದ್ ಅಲ್ಲಾ ರಖಾ ಅವರ ಮಗ, ಜಾಕಿರ್ ತಂದೆಯಿಂದಲೇ ತಬಲಾ ನುಡಿಸುವುದನ್ನು ಕಲಿತಿದ್ದರು. ಅವರು ಶ್ಲೋಕ, ಮಂತ್ರಗಳನ್ನೂ ಕಲಿತಿದ್ದರು. ಅವರ 11ನೇ ವಯಸ್ಸಿನಲ್ಲಿ ಅಮೆರಿಕದಲ್ಲಿ ತಮ್ಮ ಮೊದಲ ಸಂಗೀತ ಕಚೇರಿ ನಡೆಸಿದ್ದರು. ಅವರು 1973 ರಲ್ಲಿ ತಮ್ಮ ಮೊದಲ ಆಲ್ಬಂ ಲಿವಿಂಗ್ ಇನ್ ದಿ ಮೆಟೀರಿಯಲ್ ವರ್ಲ್ಡ್ ಅನ್ನು ಪ್ರಾರಂಭಿಸಿದರು.
ತಬಲಾವನ್ನು ಮಡಿಲಿನಲ್ಲಿಟ್ಟುಕೊಳ್ಳುತ್ತಿದ್ದರು ಜನರು ಕಿಕ್ಕಿರಿದು ತುಂಬಿರುವ ಜನರಲ್ ಕೋಚ್ಗೆ ಅವರು ಹತ್ತುತ್ತಿದ್ದರು. ಯಾರ ಪಾದವಾಗಲೀ, ಪಾದರಕ್ಷೆಯಾಗಲೀ ತಾಗದಂತೆ ತಡೆಯಲು ಅವರು ತಬಲಾವನ್ನು ಮಗುವಿನಂತೆ ತೊಡೆಯ ಮೇಲೆ ಇಟ್ಟುಕೊಳ್ಳುತ್ತಿದ್ದರು.
ಗ್ರ್ಯಾಮಿ ಪ್ರಶಸ್ತಿಯೂ ಬಂದಿತ್ತು ಅನೇಕ ಕಠಿಣ ಹಾದಿಗಳು, ಸವಾಲುಗಳನ್ನು ದಾಟಿ ಪ್ರಪಂಚದಾದ್ಯಂತ ಜನರ ಹೃದಯದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಜಾಕಿರ್ ಹುಸೇನ್ಗೆ 2009ರಲ್ಲಿ ಗ್ರ್ಯಾಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. 1988 ರಲ್ಲಿ ಪದ್ಮಶ್ರೀ ಮತ್ತು 2002 ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು. 1990 ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now