spot_img
spot_img

YUVA UDAAN YOJANA : ಕಾಂಗ್ರೆಸ್ನಿಂದ ಇದೇ ಮೊದಲ ಸಲ ‘ಉಚಿತ’ವಲ್ಲದ ಭರವಸೆ ಘೋಷಣೆ

spot_img
spot_img

Share post:

New Delhi News:

ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್​ ಮೊದಲ ಬಾರಿಗೆ ‘ಉಚಿತ’ದ ಬದಲಾಗಿ, ಕೌಶಲ್ಯದ ಆಧಾರದ ಮೇಲೆ ನಿರುದ್ಯೋಗಿ ಯುವಕರಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಪ್ರಕಟಿಸಿದೆ. ಪಕ್ಷವು ದೆಹಲಿಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ, ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ತಮ್ಮ ಕೌಶಲ್ಯ ಆಧರಿತವಾಗಿ ಒಂದು ವರ್ಷದವರೆಗೆ 8,500 ರೂಪಾಯಿ ನೀಡುವುದಾಗಿ ಭಾನುವಾರ ಹೇಳಿದೆ.

ಆದರೆ, ಇತರ ರಾಜ್ಯಗಳಲ್ಲಿ ಇರುವಂತೆ ‘ಉಚಿತ’ವಲ್ಲ ಎಂದೂ ಹೇಳಿದೆ. ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಸಾಲು ಸಾಲು ಭರವಸೆಗಳನ್ನು ಘೋಷಿಸುತ್ತಿದೆ. ಮಹಿಳೆಯರು, ಆರೋಗ್ಯ ಕ್ಷೇತ್ರದ ಬಳಿಕ ಇದೀಗ, ನಿರುದ್ಯೋಗಿ ಯುವಕರಿಗೆ ಭರ್ಜರಿ ಭರವಸೆ ನೀಡಿದೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್​ ಪೈಲಟ್​, “YUVA UDAAN YOJANAಯಡಿ, ಕಾಂಗ್ರೆಸ್​ ಅಧಿಕಾರಕ್ಕೆ ಬಂದಲ್ಲಿ ದೆಹಲಿಯ ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಒಂದು ವರ್ಷದವರೆಗೆ 8,500 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು. ಆದರೆ, ಇದು ಪುಕ್ಕಟೆಯಲ್ಲ” ಎಂದರು. ವಿದ್ಯಾವಂತ ಯುವಕರು ತಾವು ಪರಿಣತಿ ಹೊಂದಿರುವ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮಾಡುವ ಯೋಜನೆ ಇದಾಗಿದೆ.

ಇದರಿಂದ ವಿದ್ಯಾವಂತ ನಿರುದ್ಯೋಗಿ ಯುವಕರು ಯಾವುದಾದರೂ ಸಂಸ್ಥೆಗೆ ಸೇರಿಕೊಂಡು ತಮ್ಮ ಕೌಶಲ್ಯ ಪ್ರದರ್ಶನ ಮಾಡಿದಂತಾಗುತ್ತದೆ ಎಂದು ತಿಳಿಸಿದರು. “ಯಾವುದಾದರೂ ಕಂಪನಿ, ಕಾರ್ಖಾನೆ ಅಥವಾ ಸಂಸ್ಥೆಯಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದಲ್ಲಿ ಅಂತಹ ಯುವಕರಿಗೆ ಸರ್ಕಾರ ಆರ್ಥಿಕ ನೆರವು ನೀಡುತ್ತದೆ. ಅವರು ಆಯಾ ಕಂಪನಿಗಳ ಮೂಲಕ ಹಣವನ್ನು ಪಡೆಯುತ್ತಾರೆ. ಇದು ಮನೆಯಲ್ಲಿ ಕುಳಿತು ಹಣ ಪಡೆಯುವ ಯೋಜನೆಯಲ್ಲ” ಎಂದು ಹೇಳಿದರು.

Other Assurances:

೧) ಇದಕ್ಕೂ ಮೊದಲು ಜನವರಿ 6 ರಂದು ‘ಪ್ಯಾರಿ ದೀದಿ ಯೋಜನೆ’ಯನ್ನು ಘೋಷಿಸಿತು. ಕಾಂಗ್ರೆಸ್​ ಪಕ್ಷವು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಆರ್ಥಿಕ ನೆರವು ನೀಡುವುದಾಗ ಹೇಳಿತ್ತು. ಇದನ್ನು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಪ್ರಕಟಿಸಿದ್ದರು.

೨) ಜನವರಿ 8ರಂದು ‘ಜೀವನ್ ರಕ್ಷಾ ಯೋಜನೆ’ಯನ್ನು ಘೋಷಿಸಿತು. ಇದರ ಅಡಿಯಲ್ಲಿ ತಲಾ 25 ಲಕ್ಷ ರೂಪಾಯಿಗಳವರೆಗೆ ಉಚಿತ ಆರೋಗ್ಯ ವಿಮೆಯನ್ನು ಒದಗಿಸುವುದಾಗಿ ಭರವಸೆ ನೀಡಿತು. ಇದನ್ನು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​​ ಘೋಷಿಸಿದ್ದರು.

Delhi Assembly Elections:

70 ಸದಸ್ಯರ ದೆಹಲಿ ವಿಧಾನಸಭೆಗೆ ಫೆಬ್ರವರಿ 5ರಂದು ಮತದಾನ ನಡೆಯಲಿದೆ. ಫೆಬ್ರವರಿ 8ರಂದು ಮತ ಎಣಿಕೆಯಾಗಲಿದೆ.

ಇದನ್ನು ಓದಿರಿ : ARECANUT CROPS : ವಾಣಿಜ್ಯ ಬೆಳೆ ಅಡಕೆಯಲ್ಲಿ ‘ಅಡಕ’ವಾಗಿರುವ ಸವಾಲುಗಳೇನು?

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...